Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...