Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...