Homeಕರ್ನಾಟಕಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ದೆಹಲಿಯಿಂದ ಮರಳಿದ ಯಡಿಯೂರಪ್ಪ ತುಂಬಾ ನಿರಾಶೆಯಲ್ಲಿದ್ದಾರೆ. ಪ್ರಚಂಡ ಜಯದಿಂದ ಯಾರ ಮಾತನ್ನೂ ಕೇಳಿಸಿಕೊಳ್ಳದ ಸ್ಥಿತಿಯಲ್ಲಿರುವ `ಮೋದಿ-ಶಾ’ ಹೈಕಮಾಂಡ್ ಸದ್ಯಕ್ಕೆ ಯಾವ ಆಪರೇಷನ್ನೂ ಮಾಡಬೇಡಿ, ಸುಮ್ಮನೇ ವಿರೋಧ ಪಕ್ಷದಲ್ಲಿ ಕೂಡಿ ಎಂದು ಖಡಕ್ ಆದೇಶವನ್ನು ಯಡಿಯೂರಪ್ಪರಿಗೆ ನೀಡಿ ಕಳಿಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಸೂಚಿಸಿದ ಬೆಜೆಪಿ ಸಂಸದರಿಗೆ ಒಂದೂ ಸಚಿವ ಸ್ಥಾನ ನೀಡದೇ ಯಡಿಯೂರಪ್ಪರನ್ನು ಹೈಕಮಾಂಡ್ ಮೂಲೆಗೆ ತಳ್ಳಿದೆ. ಬಿಜೆಪಿಯಲ್ಲಿ ಯುಡಿಯೂರಪ್ಪ ಕತೆ ಮುಗಿದೇ ಹೋಯ್ತಾ?

ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪನವರ ಮುಖದಲ್ಲಿ ಈ ಮೊದಲಿದ್ದ ಯಾವ ಲವಲವಿಕೆಯೂ ಉಳಿದಿಲ್ಲ. ಮೇ 23ಕ್ಕೆ ರಾಜ್ಯ ಮೈತ್ರಿ ಸರ್ಕಾರ ಮುರಿದುಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ತುಂಬು ಹುಮ್ಮಸ್ಸಿನಲ್ಲಿ ಮಾತಾಡುತ್ತಿದ್ದ ಯಡಿಯೂರಪ್ಪನವರು ದಿಲ್ಲಿಯಿಂದ ಬರುತ್ತಿದ್ದಂತೆಯೇ “ಸದ್ಯಕ್ಕೆ ಸರ್ಕಾರದ ಪತನಕ್ಕೆ ಕೈಯಾಕಬೇಡಿ ಎಂದು ವರಿಷ್ಠರು ಸೂಚಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ” ಎಂಬ ಅಚ್ಚರಿ ಹೇಳಿಕೆ ನೀಡಿ ಅವರ ಹಿಂಬಾಲಕರೇ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದಕ್ಕೆ ಅವರು ಕೊಡುತ್ತಿರುವ ಕಾರಣ, “ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ನಾಲ್ಕು ಶಾಸಕರನ್ನು ಅತೃಪ್ತರಂತೆ ಮುಂದೆ ಬಿಟ್ಟು ಬಿಜೆಪಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದ್ದರಿಂದ ನೀವು ಸರ್ಕಾರ ಪತನದ ಯತ್ನಕ್ಕೆ ಕೈಹಾಕಬೇಡಿ ಎಂಬ ಸಲಹೆ ನೀಡಿದ್ದಾರೆ” ಎನ್ನುತ್ತಿದ್ದಾರೆ.

ಆದರೆ ದಿಲ್ಲಿಯ ಬಲ್ಲ ಮೂಲಗಳು ಹೇಳುವಂತೆ ಯಡಿಯೂರಪ್ಪನವರು ಪ್ರಮಾಣವಚನ ಕಾರ್ಯಕ್ರಮದ ನೆಪದಲ್ಲಿ ದಿಲ್ಲಿಗೆ ಬಂದಿದ್ದೇ ಎರಡು ಅಜೆಂಡಾ ಇಟ್ಟುಕೊಂಡು. ಮೊದಲನೆಯದ್ದು, ತಮ್ಮ ಬೆಂಬಲಿಗ ಸಂಸದರಿಗೆ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸುವುದು. ಎರಡನೆಯದ್ದು, ಆಪರೇಷನ್ ಕಮಲಕ್ಕೆ ಅಧಿಕೃತ ಸಮ್ಮತಿ ಪಡೆದುಕೊಂಡು ಬರುವುದು. ಆದರೆ ಇವೆರಡೂ ಈಡೇರಿಲ್ಲ ಮಾತ್ರವಲ್ಲ, ಇನ್ನುಮುಂದೆ ಬಿಜೆಪಿಯಲ್ಲಿ ನಿಮ್ಮ ಪ್ರಾಧಾನ್ಯತೆ ಸಾಕು ಎಂಬ ಸ್ಪಷ್ಟ ಸುಳಿವನ್ನೂ ಅಮಿತ್ ಶಾ ನೀಡಿ ಕಳಿಸಿದ್ದಾರೆ ಎನ್ನುತ್ತವೆ ದಿಲ್ಲಿ ಮೂಲಗಳು.

ಯಡಿಯೂರಪ್ಪನವರು, ತಮ್ಮ ಆಪ್ತರಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು! ಇದಕ್ಕೆ ತಣ್ಣೀರು ಎರಚಿದ ಹೈಕಮಾಂಡ್ ಯಡಿಯೂರಪ್ಪ ಬಣದಿಂದ ಹೊರಗಡೆ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಷಿ, ಸದಾನಂದಗೌಡ, ಸುರೇಶ್ ಅಂಗಡಿಗೆ ಮಾತ್ರ ಸಚಿವಗಿರಿ ದಯಪಾಲಿಸಿದೆ. ರಾಜ್ಯದಿಂದ ಈ ಹೆಸರುಗಳನ್ನು ಆರೆಸ್ಸೆಸ್ ಪರವಾಗಿ ಶಿಫಾರಸ್ಸು ಮಾಡಿದ್ದೇ ಸಂತೋಷ್‍ಜೀ ಎಂಬ ಸತ್ಯ ಯಡಿಯೂರಪ್ಪನವರನ್ನು ಮತ್ತಷ್ಟು ದಿಗ್ಭ್ರಮೆ ಗೊಳಿಸಿರಲಿಕ್ಕೂ ಸಾಕು.

ಎಂಪಿ ಎಲೆಕ್ಷನ್ನಿಗೆ ಟಿಕೇಟ್ ಹಂಚಿಕೆಯಲ್ಲೂ ಯಡಿಯೂರಪ್ಪನವರ ಶಿಫಾರಸ್ಸಿಗೆ ಹೈಕಮಾಂಡ್ ಮಣೆ ಹಾಕರಲಿಲ್ಲ ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು. ಅಲ್ಲೂ ತೇಜಸ್ವಿ ಸೂರ್ಯನಂತ ಸಂತೋಷ್‍ಜಿ ಶಿಷ್ಯರಿಗೇ ಮಣೆ ಹಾಕಲಾಗಿತ್ತು. ಶೋಭಾ ಕರಂದ್ಲಾಜೆ ಮತ್ತು ಕರಡಿ ಸಂಗಣ್ಣರಿಗೆ ಟಿಕೇಟು ತರಲು ಯಡಿಯೂರಪ್ಪ ಹರಸಾಹಸ ಪಡಬೇಕಾಗಿ ಬಂದಿತ್ತು. ಅಲ್ಲದೇ ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೂ ಟಿಕೆಟ್ ತರುವಲ್ಲಿ ಯಡಿಯೂರಪ್ಪ ಮುಗ್ಗರಿಸಿದ್ದರು.

ಕುಂದಗೋಳ ಉಪ ಚುನಾವಣೆಯಲ್ಲೂ ಯಡಿಯೂರಪ್ಪ ಬೀಗ ಚಿಕ್ಕನಗೌಡರಿಗೆ ಟಿಕೆಟ್ ತಪ್ಪಿಸುವ ಯತ್ನ ಮಾಡಲಾಗಿತ್ತು. ಕೊನೆಗೂ ಯಡಿಯೂರಪ್ಪ ಟಿಕೆಟ್ ತಂದರಾದರೂ ಹುಬ್ಬಳ್ಳಿ-ಧಾರವಾಡದ ಬಿಜೆಪಿ ನಾಯಕರು ಚಿಕ್ಕನಗೌಡರ ಪರ ಮನಪೂರ್ವಕ ಪ್ರಚಾರ ಮಾಡದೇ ಯಡಿಯೂರಪ್ಪ ಬೀಗನಿಗೆ ಸೋಲು ತಂದಿಟ್ಟರು. ಚಿಂಚೋಳಿಯಲ್ಲಿ ತಮ್ಮ ಶಿಷ್ಯ, ತಮ್ಮ ಸಂಪುಟದಲ್ಲಿ ಸಚಿವ ಸ್ಥಾನವನ್ನೂ ನೀಡಿದ್ದ ಸುನೀಲ್ ವಲ್ಯಾಪುರೆಗೆ ಟಿಕೆಟ್ ಕೊಡಿಸುವ ಯಡಿಯೂರಪ್ಪರ ಯತ್ನಕ್ಕೆ ಹಿನ್ನಡೆ ಮಾಡಿದ ಸಂತೋಷ್‍ಜಿ ಬಣ ಅಲ್ಲಿ ವಲಸಿಗ ಉಮೇಶ ಜಾಧವರ ಮಗ ಅವಿನಾಶ ಜಾಧವ್‍ಗೆ ಟಿಕೆಟು ನೀಡಿತ್ತು.

ಗಾಯದ ಮೇಲೆ ಬರೆ ಎಂಬಂತೆ, ಈಗ ಆಪರೇಷನ್ ಕಮಲ ಮಾಡಬೇಡಿ, ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ತೆಪ್ಪಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ಮುಖ್ಯಮಂತ್ರಿಯಾಗುವ ಯಡಿಯೂರಪ್ಪ ಕನಸಿಗೆ ಹೈಕಮಾಂಡ್ ಅಂತಿಮ ಮೊಳೆ ಹೊಡೆಯಿತೇ? ಎಂಬ ಅನುಮಾನ ಮೂಡದಿರದು.

ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಹಿಂದಿಕ್ಕಿ ಅದ್ಭುತ ಯಶಸ್ಸು ಗಳಿಸಿರುವುದರಿಂದ ಇನ್ಮುಂದೆ ಕರ್ನಾಟಕದ ರಾಜಕಾರಣಕ್ಕೆ ಯಡಿಯೂರಪ್ಪ ತಮಗೆ ತೀರಾ ಅನಿವಾರ್ಯ ಆಗಲಾರರು ಎಂಬ ತರ್ಕಕ್ಕೆ ಬಿಜೆಪಿ ಹೈಕಮಾಂಡನ್ನು ಸಂತೋಷ್‍ಜಿ ಪಡೆ ತಂದು ನಿಲ್ಲಿಸಿದೆ ಎನ್ನುವುದು ಲೇಟೆಸ್ಟ್ ವರ್ತಮಾನ.

ಈ ಕ್ಷಣದಲ್ಲೇ ಆಪರೇಷನ್ ಕಮಲ ನಡೆಸಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯವಾಗಿ ಯಡಿಯೂರಪ್ಪನವರನ್ನೇ ಸಿಎಂ ಮಾಡಬೇಕಾಗುತ್ತೆ. ಅದರ ಬದಲು ಅದನ್ನು ಕೊಂಚ ಮುಂದೂಡಿದರೆ, ಈಗ ಶುರುವಾಗಿರುವ ಮೋದಿ ಪರ್ವವನ್ನು ಕರ್ನಾಟಕದಲ್ಲಿ ಇನ್ನಷ್ಟೂ ಬಿಗಿಗೊಳಿಸುತ್ತಲೇ ಯಡಿಯೂರಪ್ಪನವರನ್ನು ರಾಜಕಾರಣದಲ್ಲಿ ಸಂಪೂರ್ಣ ಅಪ್ರಸ್ತುತಗೊಳಿಸಿದ ನಂತರ ತಮಗಿಷ್ಟ ಬಂದ ವ್ಯಕ್ತಿಯನ್ನು, (ಸಂತೋಷ್‍ರನ್ನು) ಸಿಎಂ ಮಾಡಬಹುದೆನ್ನುವ ಲೆಕ್ಕಾಚಾರವನ್ನು ಬಿಜೆಪಿ ಹೆಣೆದು ಕೂತಿದೆ ಎನ್ನಲಾಗುತ್ತಿದೆ. ಅಷ್ಟರೊಳಗೆ ಮೈತ್ರಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿ ಸರ್ಕಾರ ಬಿದ್ದರೆ, ಬಿಜೆಪಿಗೆ ಅಪಖ್ಯಾತಿಯೂ ತಟ್ಟುವುದಿಲ್ಲ ಎಂಬ ತರ್ಕ ಇಲ್ಲಿ ಕೆಲಸ ಮಾಡಿರುವ ಸಾಧ್ಯತೆಯೇ ಹೆಚ್ಚು.

ಮತ್ತೊಂದು ತರ್ಕದ ಪ್ರಕಾರ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ. ಅದೇನೆ ಇರಲಿ, ದಿಲ್ಲಿಯಿಂದ ವಾಪಾಸು ಬಂದ ಯಡಿಯೂರಪ್ಪನವರ ಮುಖದಲ್ಲಿ ಮೊದಲಿದ್ದ ಹುಮ್ಮಸ್ಸು ನಾಪತ್ತೆಯಾಗಿರುವುದು ಮಾತ್ರ ಸತ್ಯ.

ಲೋಕಸಭಾ ಚುನಾವಣೆ ನಡೆದು ತಿಂಗಳೊಪ್ಪತ್ತಿನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ 509 ಸ್ಥಾನ ಗೆದ್ದು ಚೇತರಿಸಿಕೊಂಡಿದ್ದರೆ, 25 ಸಂಸದರನ್ನು ಗೆದ್ದುಕೊಂಡ ಖುಷಿಯಲ್ಲಿದ್ದ ಬಿಜೆಪಿ ಕೇವಲ 366 ಲೋಕಲ್ ಬಾಡಿ ಸ್ಥಾನಗಳಿಗಷ್ಟೇ ಸೀಮಿತಗೊಂಡು ಆಘಾತಕ್ಕೆ ತುತ್ತಾಗಿರೋದು ಕೂಡಾ ಯಡಿಯೂರಪ್ಪನವರ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಲಕ್ಷಣವಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ: ಲಿಂಗಾಯಿತರಿಗೆ ಬಿಜೆಪಿ ಕೊಟ್ಟಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...