Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...