Homeರಾಜಕೀಯಇಟ್ಸ್ me....ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ....

ಇಟ್ಸ್ me….ರಜನಿಕಾಂತ್! ಸೂಪರ್ ಸ್ಟಾರ್ ಹೊಣೆಗೇಡಿಯಾದಾಗ….

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ |

ಸೂಪರ್ ಸ್ಟಾರ್ ರಜನಿಕಾಂತ್ ಬಗ್ಗೆ ತಮಿಳರಿಗೆ ಎಂಥಾ ಅಭಿಮಾನ, ಭಕ್ತಿಯಿದೆ ಎಂಬುದು ತಿಳಿದ ಸಂಗತಿ. ಇಂಥಾ ತಮಿಳುನಾಡಿನಲ್ಲಿ ಈಗ ರಜನಿಕಾಂತ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದ್ದಕ್ಕಿದ್ದಂತೆ ರಜನಿ ಬಗ್ಗೆ ತಮಿಳರು ಆಕ್ರೋಶ ವ್ಯಕ್ತಪಡಿಸಿದ್ದೇಕೆಂದು ನೋಡಿದರೆ ಅದಕ್ಕೆ ಸ್ವತಃ ರಜನಿಯವರ ಜನವಿರೋಧಿ ರಾಜಕೀಯ ಧೋರಣೆಯೇ ಕಾರಣ ಎಂಬುದು ಬೆಳಕಿಗೆ ಬಂದಿದೆ. ನಡೆದದ್ದಿಷ್ಟು. ಮೊನ್ನೆ ತುತ್ತುಕುಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ 13 ಜನರನ್ನು ಕೊಂದ ಘಟನೆಯ ಬಗ್ಗೆ ಇಡೀ ತಮಿಳುನಾಡು ಕುದಿಯುತ್ತಿದೆ. ಹೀಗಿರುವಾಗ ತೂತ್ತುಕುಡಿಗೆ ಭೇಟಿ ಕೊಟ್ಟ ಸೂಪರ್‍ಸ್ಟಾರ್ ಮಾಧ್ಯಮದವರನ್ನುದ್ದೇಶಿಸಿ ಮಾತಾಡಿ “ಈ ಘಟನೆಗೆ ಸಮಾಜಘಾತುಕ ಶಕ್ತಿಗಳೇ ಕಾರಣ. ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರಿಂದಲೇ ಫೈರಿಂಗ್ ನಡೆಸಬೇಕಾಯ್ತು…” ಎಂದು ಅಪ್ಪಟ ಪೊಲೀಸ್ ಏಜೆಂಟರಂತೆ ಮಾತಾಡಿದ್ದಾರೆ. ಈ ಭೀಕರ ಮಾರಣಹೋಮವನ್ನು ಕಣ್ಣಾರೆ ಕಂಡಿರುವ ಅಭಿಮಾನಿಗಳಿಗೆ ರಜನಿ ಹೇಳಿಕೆಯಿಂದ ಶಾಕ್ ಆಗಿರುವುದಂತೂ ನಿಜ. ಇಡೀ ತಮಿಳುನಾಡಿನಲ್ಲಿ ರಜನಿಯ ಈ ನಿಲುವಿಗೆ ವ್ಯಾಪಕ ಖಂಡನೆ ವ್ಯಕ್ರವಾಗಿದೆ. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ರಜನಿಯವರ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ‘ಫೈರಿಂಗ್‍ನಲ್ಲಿ ಜೀವತೆತ್ತ 11 ವರ್ಷದ ಬಾಲಕಿ ಸಮಾಜಘಾತುಕ ಶಕ್ತಿಯೇ? ರಜನಿ ಯಾರ ಪರವಾಗಿ ಮಾತಾಡುತ್ತಿದ್ದಾರೆ? ಯಾರೋ ಹೇಳಿಕೊಟ್ಟ ಮಾತುಗಳನ್ನು ಹೇಳುತ್ತಿದ್ದಾರೆ’ ಎಂದು ಜನರು ತಿರುಗೇಟು ನೀಡಿದ್ದಾರೆ.

‘ಸ್ಟೆರ್‍ಲೈಟ್ ಕಂಪನಿಯ ಮಾಲಿನ್ಯದಿಂದ ತೂತ್ತುಕುಡಿಯ ಜನರ ಜೀವನವೇ ದುಸ್ತರವಾಗಿತ್ತಲ್ಲಾ, ಅದಕ್ಕಾಗಿ ಜನರು ಹೋರಾಟ ಮಾಡಿದ್ದನ್ನು ತಪ್ಪು ಎನ್ನುತ್ತೀರಾ?’ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ಟಾರ್ “ಏನ್ ಹೋರಾಟ? ಎಲ್ಲದಕ್ಕೂ ಹೋರಾಟ ಹೋರಾಟ ಅಂತ ಹೋಗ್ತಾ ಇದ್ದರೆ ತಮಿಳುನಾಡು ಸುಡುಗಾಡು ಆಗೋಗುತ್ತೆ” ಎಂದು ಪ್ರಶ್ನೆ ಕೇಳಿದವರ ಮೇಲೆಯೇ ಜೋರು ಮಾಡಿದ್ದಾರೆ. ಮತ್ತೂ ಮುಂದುವರೆದು “ಹೀಗಾದರೆ ತಮಿಳುನಾಡಿಗೆ ವಿದೇಶಿ ಬಂಡವಾಳ ಹೂಡಲು ಯಾರೂ ಬರೋದಿಲ್ಲ” ಎಂದು ತಮ್ಮ ಆರ್ಥಿಕ ನೀತಿಯನ್ನೂ ಹೊರಗೆಡವಿದ್ದಾರೆ.

ವಿಪರ್ಯಾಸ ನೋಡಿ ಹೇಗಿದೆ. ಇನ್ನೇನು ರಿಲೀಸ್ ಆಗಬೇಕಿರುವ ‘ಕಾಲಾ’ ಸಿನಿಮಾದಲ್ಲಿ ಬಡಜನರ ಮೇಲೆ ನಡೆದ ದೌರ್ಜನ್ಯಗಳ ವಿರುದ್ಧ ಕೆಂಡಕಾರುವ ಹೀರೋ ರಜನಿಕಾಂತ್ ‘ಎಲ್ಲ ಜನರನ್ನು ಕರೆತನ್ನಿ, ಹೋರಾಟ ಮಾಡೋಣ’ ಅಂತ ಕರೆಕೊಡುತ್ತಾನೆ. ದುಷ್ಟಶಕ್ತಿಗಳ ವಿರುದ್ಧ ಹೋರಾಟ ಮಾಡಿಯೇ ಗೆಲ್ಲುತ್ತಾನೆ. ಆದರೆ ನಿಜಜೀವನದಲ್ಲಿ ಎಲ್ಲಾ ಉಲ್ಟಾಪಲ್ಟಾ.

ತೂತ್ತುಕುಡಿಯ ಭೇಟಿಯ ನಂತರ ಅವರು ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿ ಮಾಡಲು ಹೊರಟರು. ಅಲ್ಲಿ ಅವರಿಗೆ ಭಾರೀ ಮುಖಭಂಗ ಕಾದಿತ್ತು.

ತೀವ್ರ ಗಾಯಗೊಂಡು ಚಿಕಿತ್ಸೆಯಲ್ಲಿರುವ ಸಂತೋಷ್ ರಾಜ್ ಎಂಬ 21 ವರ್ಷದ ಯುವಕನ ಹಾಸಿಗೆಯ ಬಳಿಗೆ ಸೂಪರ್‍ಸ್ಟಾರ್ ಬರುತ್ತಿದ್ದಂತೆ ಸಂತೋಷ್ ಹಾಸಿಗೆಯಿಂದ ಎದ್ದು ಕೂತ. ಸಂತೋಷ್‍ನ ಹೆಗಲ ಮೇಲೆ ಕೈಹಾಕಿ ಮಾತಾಡಿಸಲು ರಾಜಕಾರಣಿಯ ಶೈಲಿಯಲ್ಲಿ ಸೂಪರ್‍ಸ್ಟಾರ್ ಮುಂದಾಗುತ್ತಿದ್ದಂತೆ “ಯಾರು ನೀವು? ಎಲ್ಲಿಂದ ಬಂದಿದ್ದೀರಿ?” ಎಂದು ಖಾರವಾಗಿ ಪ್ರಶ್ನೆ ಎಸೆದ ಗಾಯಾಳು ಯುವಕ. ಇಂಥಾ ಪ್ರಶ್ನೆಯನ್ನು ನಿರೀಕ್ಷಿಸಿರದಿದ್ದ ಸ್ಟಾರ್ ಸಾವರಿಸಿಕೊಂಡು “ನಾನು ರಜನಿಕಾಂತ್, ಚೆನ್ನೈಯಿಂದ ಬಂದಿದ್ದೇನೆ.” ಎಂದು ಉತ್ತರಿಸಿದರು. ನಂತರ ಪ್ರಶ್ನೆಗಳ ಸುರಿಮಳೆಯನ್ನೇ ಆರಂಭಿಸಿದ ಸಂತೋಷ್‍ನ ಕಡೆಗೆ ಕೇಳಿಸಿಕೊಳ್ಳದಂತೆ ಮುಂದೆ ಹೆಜ್ಜೆಹಾಕಿ ಮತ್ತಷ್ಟು ಮುಖಭಂಗದಿಂದ ತಪ್ಪಿಸಿಕೊಂಡರು. ಸೂಪರ್ ಸ್ಟಾರ್ ಆಸ್ಪತ್ರೆಯ ಆವರಣದಲ್ಲಿ ಕರೆದಿದ್ದ ಪ್ರೆಸ್‍ಮೀಟ್ ಅನ್ನು ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಿ ,ತನ್ನ ಪಟಾಲಂ ಸಮೇತ ಕೂಡಲೇ ಅಲ್ಲಿಂದ ಕಾಲ್ಕಿತ್ತರು.

“ಪೊಲೀಸ್ ಫೈರಿಂಗ್‍ನಲ್ಲಿ 13 ಜನ ಸತ್ತು ಒಂದು ವಾರವಾಯ್ತು. ಆಸ್ಪತ್ರೆಯಲ್ಲಿರುವ ಎಷ್ಟೋ ಜನರ ಸ್ಥಿತಿ ಗಂಭೀರವಾಗಿದೆ… ನೂರು ದಿನಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ, ಈ ಸ್ಟಾರ್ ಒಮ್ಮೆಯೂ ಬಾಯಿಬಿಚ್ಚಿಲ್ಲ. ಒಮ್ಮೆಯೂ ನಮ್ಮ ಕಡೆಗೆ ತಿರುಗಿ ನೋಡಿಲ್ಲ. ಒಂದು ವೇಳೆ ಸ್ಟೆರ್‍ಲೈಟ್ ಕಂಪನಿ ಮುಚ್ಚಬೇಕೆಂಬ ಆದೇಶ ಹೊರಬೀಳದೆ ಇದ್ದಿದ್ದರೆ ಬಹುಶಃ ಇವರು ಇಲ್ಲಿಗೆ ಬರುತ್ತಿರಲಿಲ್ಲ. ಇದ್ದಕ್ಕಿದ್ದಂತೆ ಈಗ ಬಂದಿರೋದು ಯಾಕೆ? ಇದಕ್ಕೂ ಬಲವಾದ ಕಾರಣ ಇದೆ. ಕೆಲದಿನಗಳಲ್ಲಿ ‘ಕಾಲಾ’ ರಿಲೀಸ್ ಆಗ್ತಾ ಇದೆ. ಈಗಲೂ ತೂತ್ತುಕುಡಿ ಜನರನ್ನು ಮಾತಾಡಿಸದೆ ಹೋದರೆ ತಮಿಳುನಾಡಿನಲ್ಲಿ ಅವರ ಸಿನಿಮಾ ಓಡೋದಿಲ್ಲ ಅಂತ ಅವರಿಗೆ ಚನ್ನಾಗಿ ಗೊತ್ತು. ಅದಕ್ಕೆ ಈ ವರಸೆ ಶುರು ಮಾಡಿದ್ದಾರೆ…” ಎಂದು ನಂತರ ಮಾಧ್ಯಮದವರ ಜೊತೆ ಮಾತಾಡಿದ ಸಂತೋಷ್ ಈ ಸೂಪರ್‍ಸ್ಟಾರ್ ಗುಟ್ಟನ್ನು ಬಿಚ್ಚಿಟ್ಟಿದ್ದಾನೆ. ಇಷ್ಟೆಲ್ಲಾ ಅನಾಹುತಕ್ಕೆ ಸಮಾಜಘಾತುಕ ಶಕ್ತಿಗಳೇ ಕಾರಣ ಎಂದ ರಜನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂತೋಷ್ “ಜನರ ಹೋರಾಟದ ಬಗ್ಗೆ ಮಾತಾಡಲಿಕ್ಕೆ ಅವರಿಗೆ ಯಾವ ಹಕ್ಕಿದೆ? ಕನಿಷ್ಟ ಒಂದು ದಿನವಾದರೂ ತೂತ್ತುಕುಡಿ ಜನರ ಸಂಕಷ್ಟಗಳ ಬಗ್ಗೆ ಮಾತಾಡದೆ ಮೌನ ವಹಿಸಿದ್ದ ಇವರು ಈಗ ಎಂಟ್ರಿ ಕೊಟ್ಟಿರೋದೇ ಅನುಮಾನಾಸ್ಪದ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಪರ್‍ಸ್ಟಾರ್ ‘ನಾನು ರಜನಿಕಾಂತ್’ ಎಂದು ಹೇಳಿಕೊಂಡ ಘಟನೆ ‘ಇಟ್ಸ್ ಮಿ ರನಿಕಾಂತ್’ ಎಂಬ ಹ್ಯಾಷ್‍ಟ್ಯಾಗ್ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದೆ. ರಜನಿಕಾಂತ್ ಅವರ ನಿಲುವನ್ನು ಸಾವಿರಾರು ಜನರು ಪ್ರಶ್ನಿಸಿದ್ದಾರೆ.

ಜನಪ್ರಿಯ ಸ್ಟಾರ್ ರಜನಿಕಾಂತ್ ರಾಜಕಾರಣಿಯಾಗಲು ಹೊರಟಿರುವ ಈ ಸಂದರ್ಭದಲ್ಲಿ, ಆಡಳಿತಾರೂಡ ಎಐಡಿಎಂಕೆ ಪರ ಬ್ಯಾಟಿಂಗ್ ಶುರುವಿಟ್ಟುಕೊಂಡಿರುವುದು ಆಶ್ಚರ್ಯಕರ ಸಂಗತಿ. ಜನರ ಜೀವಗಳ ಬಗ್ಗೆ ಕಾಳಜಿ ತೋರದೆ ಆಡಳಿತ ಪಕ್ಷ ಹಾಗೂ ಸ್ಟೆರ್‍ಲೈಟ್ ಕಾಪರ್ ಕಂಪನಿಯ ವಕ್ತಾರನಂತೆ ರಜನಿ ಮಾತಾಡುತ್ತಿರುವುದು ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೆ, ತಮಿಳುನಾಡಿನ ಸಾಮಾಜಿಕ, ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ ನಿಜಬಣ್ಣಗಳು ಹೊರಬರುವುದೇ ಇಂಥಾ ಸಂದರ್ಭದಲ್ಲಿ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...