Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...