Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...