Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...