Homeಅಂಕಣಗಳುಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

ಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

- Advertisement -
- Advertisement -

ಆಘಾತವಾಣಿ |

ನಮಸ್ಕಾರ ಆಘಾತವಾಣಿಗೆ ಸ್ವಾಗತ, ವಾರ್ತೆಗಳು ಓದುತ್ತಿರುವವರು ಅಟ್ಯಾಕ್ ಹನ್ಮಂತ.
ಕರ್ನಾಟಕಕ್ಕೆ ಬಂದಿದ್ದ ಸುಳ್ ಫ್ಯಾಕ್ಟರಿ ಪಕೋಡೇಂದ್ರನು ಉಡುಪಿಯಲ್ಲಿ ಭಾಷಣ ಜಡಿದು ಉಡುಪಿ ಕೃಷ್ಣಮಠಕ್ಕೆ ಹೋಗದೆ ಇದ್ದುದರ ಬಗ್ಗೆ ನಾನಾರೀತಿಯ ಊಹಾಪೋಹಗಳು ಹರಿದಾಡುತ್ತಿವೆ. ಇವೆಲ್ಲ ಗಾಳಿಸುದ್ದಿಗಳಿಗೆ ತೆರೆ ಎಳೆದಿರುವ ಶ್ರೀಮತಿ ಶೋಭಕ್ಕನವರು “ಕೃಷ್ಣಮಠದೊಳಗೆ ಪಕೋಡೇಂದ್ರನಿಗೆ ಜೀವಭಯ ಇದ್ದುದರಿಂದ ಅವರು ಮಠಕ್ಕೆ ಎಡಗಾಲನ್ನೂ ಇಡದೆ ಹಂಗೇ ವಾಪಸ್ ಹೋಗಿದ್ದಾರೆಂದು’’ ತಿಳಿಸಿದ್ದಾರೆ. ಈ ಸುದ್ದಿ ಕೇಳಿದ ಕೃಷ್ಣಮಠದ ಪಿಂಚಣಿಸ್ವಾಮಿಗಳಾದ ‘ತೇಜಾವರ ಶ್ರಿ’ಗಳು “ತನ್ನಂಥ ಕುಪೋಷಣೆ ಪೀಡಿತ ಬಡಕಲು ದೇಹಿಯನ್ನು ಪಕೋಡೇಂದ್ರ ಅವರು ಟೆರರಿಸ್ಟ್ ಎಂದು ಭಯಬಿದ್ದಿರುವುದು ತನಗೆ ಅತ್ಯಂತ ಖೇದವುಂಟಾಗಿದೆ, ಈ ಖೇದವನ್ನು ಹೋಗಲಾಡಿಸಲು ನಾನು ಮುತಾಲಿಕನ ಅರೆಬರೆ ಮೀಸೆಯನ್ನು ತುಟಿಯಿಂದ ಕಿತ್ತು ಯಜ್ಞಕುಂಡಕ್ಕೆ ಹವಿಸ್ಸಾಗಿ ಹಾಕುವ ಮೂಲಕ ದೇವರಿಗೆ ವಿನಂತಿ ಮಾಡುತ್ತೇನೆ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.
< < < <
ಬಿಜೆಪಿ ಪಕ್ಷದಲ್ಲಿ ನೆಪಕ್ಕೊಂದು ಅಧ್ಯಕ್ಷನಿರಲಿ ಎಂದು ಇಟ್ಟುಕೊಳ್ಳದ ‘ಧಡಿಯೂರಪ್ಪ’ನನ್ನು ನಂಬಿಕೊಂಡರೆ ತಮ್ಮ ಕೈಗೆ ಮಟನ್ ಬಿರಿಯಾನಿ ಬೇಯಿಸುವ ಹಂಡೆ ಮಾತ್ರ ಸಿಗಲು ಸಾಧ್ಯ ಎಂದು ಚಿಂತೆಗೊಳಗಾಗಿರುವ ‘ಹಮೀದ್ ಷಾ’ ಇದಕ್ಕೊಂದು ಹೊಸ ಪ್ಲಾನು ರೆಡಿ ಮಾಡಿದ್ದಾರೆಂದು ಗೊತ್ತಾಗಿದೆ. ಎಲ್ಲೇ ಬಿಜೆಪಿ ಪಕ್ಷದ ಪ್ರಚಾರವಿರಲಿ ಅಲ್ಲಿ ಈ ಬುಡ್ಡಾಗಿರಾಕಿಯನ್ನು ಶೋಕೇಸ್ ಪೀಸಿನಂತೆ ಬಳಸಿಕೊಂಡು ಆಕಾಶ ಪಾತಾಳವಾಗಿ, ಪಾತಾಳ ಆಕಾಶವೇನಾದರೂ ಆಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ‘ಹಾರೆಸ್ಸೆಸ್’ ವಯೋವೃದ್ಧರ ಕೊಂಪೆಯಿಂದ ‘ಚಂತೋಷ್ ಜೀ’ಯನ್ನು ದರದರನೆ ಕರೆತಂದು ಸಿಎಂ ಮಾಡುವುದಾಗಿ ‘ಹಮೀದ್ ಷಾ’ ಅವರು ನಿದ್ದೆಗಣ್ಣಿನಲ್ಲಿ ಕನವರಿಸಿಕೊಳ್ಳುತ್ತಿದ್ದರು ಎಂಬ ಸುದ್ದಿ ಬಹಿರಂಗವಾಗಿದೆ.
< < < <
ಕಾಂಗ್ರೆಸ್ ಪಕ್ಷದ ‘ಲಾಹುಲ್ ಗಾಂಧಿ’ ಬಸವಣ್ಣನವರ ವಚನವನ್ನು ಉಚ್ಚರಿಸಲು ಹೋಗಿ ಇವನರ್ವ, ಇವನರ್ವ ಎಂದು ತೆದ್ದೊದ್ದೊ ಬೊದ್ದೊದ್ದೊ ಮಾಡಿದ ಮೇಲೆ ಕಾಂಗ್ರೆಸ್ಸಿಗರನ್ನು ಬಿಜೆಪಿಗರು ಹುರಿದು ಉಪ್ಪಾಕಿಕೊಂಡು ನುಂಗಿ ನೆಕ್ಕಿದ್ದ ವಿಷಯ ತಮಗೆ ತಿಳಿದಿರಬಹುದು. ಅದೇ ಬಗೆಯಲ್ಲಿ ಉತ್ತರದ ಹಿಂದಿಗರ ಮನೆಯ ಜೀತದಾಳಾದ ‘ಪಕೋಡೇಂದ್ರ’ನು ತಾನೇನೋ ಕನ್ನಡ ಪಂಡಿತನೆಂಬಂತೆ ಪೋಸು ಕೊಡಲು ಹೋಗಿ ‘ಇಲಿ ಇಕ್ಕಳದೊಳಗೆ ಇಡಬಾರದ್ದನ್ನು ಇಟ್ಟಂತೆ’ ಕೊಯಯೊ ಪಯಯೋ ಎಂದು ವದರಿಬಿಟ್ಟಿದ್ದಾನೆ. ‘ಭಗವಾನ್ ಮಂತೆಸಾಮಿ, ದೇವಿ ಮಾರವಬ್ಯಾ, ಮಲ ಮೇವದೇಶ್ವರ್, ಬಿಲ್ಲಿಗಿರಿ ರಂಗ, ಚಾಮರಾಜೇಶ್ವರ್, ಹಿಮ್ಮದ್ ಗೋಪಾಲ್ ಸಾಮಿ’ ಅಂತೆಲ್ಲ ದೇವರುಗಳ ಹೆಸರು ಹೇಳಿದ್ದನ್ನು ಕೇಳಿದ ಜನ.. ಇವನೇನು ದೇವರ ಹೆಸರು ಹೇಳುತ್ತಿದ್ದಾನೋ, ಈಗಾಗಲೇ ಪರಲೋಕಕ್ಕೆ ಪಾರ್ಸೆಲ್ ಆಗಿರೋ ಇವನ ಚಿಕ್ಕಪ್ಪ-ದೊಡ್ಡಪ್ಪಂದಿರ ಹೆಸರು ಹೇಳುತ್ತಿದ್ದಾರೆ ಎಂದು ಗಾಬರಿಯಾಗಿರುವ ಸುದ್ದಿ ಇದೀಗ ತಾನೇ ಬಂದಿದೆ.
< < < <
ಕರ್ನಾಟಕದ ಚುನಾವಣೆಯ ಖರ್ಚಿಗೆ ಕಾಸು ಪೀಕಲೆಂದು ಗಣಿರೆಡ್ಡಿಗಳನ್ನೆಲ್ಲ ಸಿಬಿಐ ಕೋರ್ಟಿನ ನೇಣಿನ ಕುಣಿಕೆಯಿಂದ ಬಿಡಿಸಿ ಕರೆತಂದು ಪ್ರಚಾರ ಕಾರ್ಯದಲ್ಲಿ ತೊಡಗಿಸಿರುವ ‘ಭಾರತೀಯ ಜನಾರ್ದನರೆಡ್ಡಿ ಪಾರ್ಟಿಯು’ ಮಿನಿಮಂ ಲೆವೆಲ್ ನಾಚಿಕೆ ಮಾನಮರ್ಯಾದೆಯಿಲ್ಲದೆ ಬಳ್ಳಾರಿ ಅದಿರಿನ ಭೂದರೋಡೆಯ ದುಡ್ಡಿನಲ್ಲಿ ಮಜಾ ಉಡಾಯಿಸುತ್ತಿದೆ ಎಂದು ತಿಳಿದುಬಂದಿದೆ. ಪಕ್ಷದ ಅಧ್ಯಕ್ಷರೂ ಸೇರಿದಂತೆ ಜನಾರ್ದನ ರೆಡ್ಡಿ ಪಕ್ಷದ ಶಾಸಕರೆಲ್ಲರಿಗೂ ಗಣಿರೆಡ್ಡಿಗಳು ಶರ್ಟುಪ್ಯಾಂಟು ಅಂದ್ರುವೇರು ಹೊಲಿಸಿಕೊಟ್ಟು ಅವರ ಪತ್ನಿಯರಿಗೆ ಲಂಗಜಾಕೀಟನ್ನೂ ಹೊಲಿಸಿಕೊಟ್ಟಿದ್ದಾರೆಂದು ಇನ್ನೂ ವರದಿಯಾಗಿಲ್ಲ. ಈ ಸುದ್ದಿ ತಿಳಿದ ಬ್ಲೂಜೆಪಿ ಶಾಸಕರ ಪತ್ನಿಯರು ತಮ್ಮ ಮನೆಯ ಬಟ್ಟೆ ಬೀರುವಿನ ಕದ ತೆರೆದು ಅಯ್ಯೋ ನನ್ನತ್ರ ಒಂದು ಸೀರೇನೂ ಇಲ್ಲ ಎಂದು ಗೋಳಾಡುತ್ತಿಲ್ಲವೆಂದು ಬಲ್ಲ ಮೂಲಗಳು ತಿಳಿಸಿವೆ.
< < < <
ದಲಿತರ ಮನೆಗಳಿಗೆ ಹೋಗಿ ಎಮ್ಮೆ ಮೇದಂತೆ ಮೇಯ್ದು ಬರುವುದನ್ನು ರೂಢಿ ಮಾಡಿಕೊಂಡಿರುವ ‘ಭಾರತೀಯ ಜಲ್ಸಾ ಪಾರ್ಟಿ’ಯ ಉತ್ತರ ಪ್ರದೇಶ ಸರ್ಕಾರದಿಂದ ಹೊಸ ನ್ಯೂಸೊಂದು ಓಡೋಡಿ ಬಂದಿದೆ. ಬ್ಲೂಜೆಪಿ ಪಕ್ಷದ ಶಾಸಕರು ದಲಿತರ ಮನೆಗಳಿಗೆ ಶ್ರೀರಾಮಚಂದ್ರನಂತೆ ಹೋಗಿ ಅಲ್ಲೇ ಕೂಳುಬಾಕರಂತೆ ಗಡದ್ದಾಗಿ ಉಂಡು, ದಲಿತರಿಗೆ ಆಶೀರ್ವಾದ ಮಾಡಿ ಬರುತ್ತಿದ್ದಾರೆ ಎಂದಿದ್ದಾನೆ ಶಾಸಕ. ಈ ಸುದ್ದಿ ಕೇಳಿದ ಉತ್ತರಪ್ರದೇಶದ ದಲಿತರು, ಇನ್ನೊಂದ್ಸಲ ಯಾವೋನಾದ್ರೂ ‘ಉಣ್ಣಕ್ಕೆ ಏನಾರ ಐತಾ’ ಅಂತ ‘ಉಣ್ಣಲು’ ಬಂದರೆ ಬರ್ರಿ ಊಟ ಮಾಡ್ರಿ ಅಂತ ಒಳಗೆ ಕರೆದು ಅಗುಣಿ ಹಾಕಿ ಆ ಬ್ಲೂಜೆಪಿ ಶಾಸಕರನ್ನು ಕಚಪಚ ಪಚಪಚ ಎಂದು ತುಳಿದು ಕಾಲು ಹಿಡಿದು ತಿಪ್ಪೆಗೆಸೆಯಬೇಕೆಂದು ಇನ್ನೂ ಪ್ರತಿಜ್ಞೆ ಮಾಡಿಲ್ಲವೆಂದು ವರದಿಯಾಗಿದೆ.
< < < <
ಹೋದಲ್ಲಿ ಬಂದಲ್ಲಿ ಹಾರೆಕೋಲು ಹಿಡಿದುಕೊಂಡು ಓಡಾಡುತ್ತ ಬ್ಲೂಜೆಪಿ ಪಕ್ಷದವರ ಪೃಷ್ಟಕ್ಕೆ ಹೆಟ್ಟಿಕೊಂಡು ಓಡಾಡುತ್ತಿರುವ ಪ್ರಕಾಶ್ ರೈ ಅವರು ಪಕ್ಷಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆಂದು ಬ್ಲೂಜೆಪಿ ಮೂಲಗಳು ತಿಳಿಸಿವೆ. ರೈ ಅವರ ಮೇಲೆ ಪಕ್ಷವು ಸಾಕಿಕೊಂಡಿರುವ ಅಲ್ಸೇಷಿಯನ್ ನಾಯಿ ಪ್ರುತಾಪ್ ತಿಮ್ಮನನ್ನು ಛೂ ಬಿಟ್ಟರೂ ರೈ ಪ್ರುತಾಪನಿಗೇ ಹಾರೆಕೋಲು ಹೆಟ್ಟಿ ಎಸೆದಿರುವುದು ಆಘಾತಕಾರಿಯೆಂದು ಧಡಿಯೂರಪ್ಪನವರು ತಮ್ಮ ಮನೆದೇವರು ‘ಬಂದಿದೆಲ್ಲ ಬಳ್ಕೊಳೇ ಬಂಡಿಭಾಗ್ಯಮ್ಮ’ನ ಬಳಿ ಕಷ್ಟ ತೋಡಿಕೊಂಡಿದ್ದಾರೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಿ ತಮ್ಮದೇ ಪಾರ್ಟಿಯ ಪ್ರೊಡ್ಯೂಸರ್ ಒಬ್ಬನ ಕೈಲಿ ಹಾಲಿವುಡ್ ಚಿತ್ರವನ್ನು ಬೇರೆ ದೇಶದಲ್ಲಿ ಪ್ರೊಡ್ಯೂಸ್ ಮಾಡಲು ಹೇಳಿ ಪ್ರಕಾಶ್ ರೈಗೆ ಶೂಟಿಂಗ್ ನೆಪದಲ್ಲಾದರೂ ಬೇರೆ ದೇಶಕ್ಕೆ ರವಾನೆ ಮಾಡಿದರೆ ತಾನು ನೆಮ್ಮದಿಯಾಗಿ ಜಶೋಧಹೆನ್ ಸವಿನೆನಪಿನಲ್ಲಿ ಮಲಗುತ್ತೇನೆಂದು ಪಕೋಡೇಂದ್ರನು ಧಡಿಯೂರಪ್ಪನಿಗೆ ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆಂದು ಖಚಿತ ಮಾಹಿತಿಗಳು ತಿಳಿಸಿವೆ.
< < < <
ಕತ್ತೆ-ಎಮ್ಮೆಗಳಿಗೆ ಹೂನಾರ ಹಾಕಿ ಮೆರವಣಿಗೆ ಮಾಡುವುದೇ ರಾಜಕೀಯ ಎಂದು ನಂಬಿಕೊಂಡಿರುವ ‘ಪಾಟಾಳ್ ನಾಗರಾಜ್’ ಅವರು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಜನರ ಗ್ರಾಚಾರ ಕೆಟ್ಟು ತಮ್ ಪಕ್ಷ ಏನಾದ್ರೂ ಅಪ್ಪಿತಪ್ಪಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕಟಿಂಗ್ ಶೇವಿಂಗ್ ಮಾಡಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ ಪಾಟಾಳ್ ನಾಗರಾಜ್. ಈ ಸುದ್ದಿಯನ್ನು ಸಂಜೆಪತ್ರಿಕೆಯಲ್ಲಿ ಓದಿದ ಧಡಿಯೂರಪ್ಪನವರು ಮುಖವೇ ಕಾಣದಂತೆ ಗಡ್ಡ ಬೆಳೆಸಿಕೊಂಡು ಕಾಡುಮನುಷ್ಯನಂತೆ ಅಂಡಲೆಯುತ್ತಿರುವ ಸ್ತ್ರೀರಾಮುಲುಗೆ ಫೋನ್ ಮಾಡಿ “ನಿನ್ನ ಟಾರ್ಜನ್ ಮುಸುಡಿ ನೋಡಿಯೇ ಪಾಟಾಳ್ ನಾಗರಾಜ್ ಈ ಉಚಿತ ಕಟಿಂಗ್ ಶೇವಿಂಗ್ ಚುನಾವಣಾ ಭರವಸೆ ಕೊಟ್ಟಿದ್ದಾನೆ, ಮೊದಲು ನುಣ್ಣಗೆ ಶೇವಿಂಗ್ ಮಾಡಿಸಿಕೊಂಡು ನಂತರ ಬಂದು ನಿನ್ನ ಮುಖ ಮಾತ್ರ ತೋರಿಸು ಇನ್ನೇನೂ ತೋರಿಸಬೇಡ ಎಂದು ಗದರಿಕೊಂಡಿದ್ದಾರೆ. ಶೇವಿಂಗ್ ಮಾಡಿಸಿಕೊಂಡರೆ ನನ್ನ ಹೆಂಡತಿಯೇ ನನ್ನ ಮುಖ ನೋಡಿ ಕಿಟಾರನೆ ಕಿರುಚುತ್ತಾಳೆಂದು ಸ್ತ್ರೀರಾಮುಲು ಎಷ್ಟು ಸಮಜಾಯಿಷಿ ಕೊಟ್ಟರೂ ಧಡಿಯೂರಪ್ಪನವರು ತಾವು ಕೈಲಿ ಹಿಡಕೊಂಡಿದ್ದ ಧಡಿಯನ್ನು ಕೆಳಗೇ ಇಳಿಸಲಿಲ್ಲವೆಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಇದೇ ಜಾಗದಲ್ಲಿ ಇದೇ ವಾರದಲ್ಲಿ. ಇಲ್ಲೇ ಡ್ರಾ, ಇಲ್ಲೇ ಬಹುಮಾನ. ಮೇಯಕ್ಕೆ ಹೋಗಿರೋ ದನಗಳು ಹಟ್ಟಿ ಸೇರ್ಕಳೋ ಹೊತ್ತಾತು, ನಾನಿನ್ನ ಬತ್ತಿನಿ. ಬಾಯ್ ಬಾಯ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...