Homeಅಂಕಣಗಳುಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

ಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

- Advertisement -
- Advertisement -

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.

ಒಬ್ಬ ವಿಧವೆ ಕೂಲಿ ಕಾಸು ಸಿಕ್ಕದೆ ತನ್ನ ತಲೆಗೂದಲನ್ನೆ ಮಾರಿಕೊಂಡಿದ್ದಾಳೆ. ಒಂದು ಬಡಕುಟುಂಬದವರು ಹೊಟ್ಟೆಪಾಡಿಗಾಗಿ ತಮ್ಮ ಮಗುವನ್ನೇ ಮಾರಿಕೊಂಡರು. ಒಂದು ಒಡಸಂಸಾರದ ಒಬ್ಬ 7 ವರ್ಷದ ಹುಡುಗ ಹಸಿವನ್ನು ತಾಳಲಾರದೇ ಮನೆಬಿಟ್ಟು ಓಡಿಹೋಗಿ ಬಸ್‍ಸ್ಟಾಂಡಿನಲ್ಲಿ ಭಿಕ್ಷೆ ಬೇಡುತ್ತಾನೆ. ಕೂಲಿ ಕೆಲಸ ಮಾಡಿ ಹೊಟ್ಟೆ ಹೊರೆಯುತ್ತಾನೆ. ಅನೇಕ ಗರ್ಭಿಣಿ ಹೆಣ್ಣು ಮಕ್ಕಳು ಆಹಾರದ ಭದ್ರತೆ ಇಲ್ಲದೆ, ಅಪೌಷ್ಟಿಕತೆಯ ಕಾರಣದಿಂದ ಮಕ್ಕಳನ್ನು ಹಡೆದು ಸಾವನ್ನಪುತ್ತಾರೆ. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 12 ಮಕ್ಕಳು ಒಮ್ಮೆಗೇ ಸಾಯುತ್ತಾರೆ. ಅನೇಕ ಸಂಸಾರಗಳು ಊರುಬಿಟ್ಟು ಬಂದು ಬೆಂಗಳೂರಿನಲ್ಲಿ ಫುಟ್‍ಪಾತಿನ ಮೇಲೆ ವಾಸಿಸುತ್ತಾರೆ. ರಾತ್ರಿ ಮಲಗುತ್ತಾರೆ. ತಿರುಪೆ ಮಾಡಿ ಜೀವನ ನಿರ್ವಹಿಸುತ್ತಾರೆ. ಹಳ್ಳಿಗಳಲ್ಲಿ ರೈತ ಕಾರ್ಮಿಕರು, ಅನೇಕ ದಿನ ಹೊಟ್ಟೆಗಿಲ್ಲದೆ ಮಲಗುವುದು ಭೂಮಿ ವಸತಿ ವಂಚಿತರಾಗಿ ಬಾಳ್ವೆ ನಡೆಸುತ್ತಿರುವುದೂ ನಡೆದೇ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳೇ ಸಂದರೂ ಈ ಎಲ್ಲ ಬಡವರಿಗೆ ಮಾಡಲು ಉದ್ಯೋಗವಿಲ್ಲ. ಅವರ ಮಕ್ಕಳಿಗೆ ವಿದ್ಯೆ ಇಲ್ಲ. ಇನ್ನೊಂದು ಚಿತ್ರ ನೋಡಿ. ಭಾರತದಲ್ಲಿ ಲಕ್ಷ ಕೋಟ್ಯಾಧಿಪತಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅಂಬಾನಿ ಅದಾನಿ ಮುಂತಾದ ಕೋಟ್ಯಾಧಿಪತಿಗಳು ಕೋಟಿ ಕೋಟಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸುತ್ತದೆ. ಅವರ ಕೋಟಿ-ಕೋಟಿ ಹಳೆ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಬಡವ ಬಲ್ಲಿದರ ನಡುವಿನ ಕಂದಕ ದೊಡ್ಡದಾಗುತ್ತಿದೆ.

ಕೇಂದ್ರ ಸರ್ಕಾರ ಬಡ ಜನರಿಗಾಗಿ 30 ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟೀಯ ಸಾಮಾಜಿಕ ಸೇವೆ ಒದಗಿಸುವ ಸಂಸ್ಥೆಯೂ ಅವುಗಳಲ್ಲಿ ಒಂದು. ಅದು ಸಮಾಜದಲ್ಲಿ ಊಟ, ಉದ್ಯೋಗಗಳಿಂದ ವಂಚಿತರಾಗಿ ಸಾವನ್ನಪ್ಪಲು ಹೊರಟವರನ್ನು ತಡೆಗಟ್ಟುವುದಕ್ಕಾಗಿಯೇ ಈ ಸಂಸ್ಥೆ ಇರುವುದು. ಈ ಯೋಜನೆ ಬಡತನದ ಸೀಮಾರೇಖೆಯ ಕೆಳಗಿರುವರಿಗಾಗಿಯೇ ಸಾಮಾಜಿಕ ಭದ್ರತೆಯ ಯೋಜನೆ. ಈ ಯೋಜನೆಯಡಿಯಲ್ಲಿ 5 ಪ್ರತ್ಯೇಕ ಒಳಿತನ್ನು ಕೋರುವ ಯೋಜನೆಗಳಿವೆ. ಇವುಗಳೆಂದರೆ ಇಂದಿರಾಗಾಂಧಿ ರಾಷ್ಟ್ರೀಯ ಮನೆ ತಪ್ಪಿದವರ ಪಿಂಚಣಿ ಯೋಜನೆ, ಇಂದಿರಾಗಾಂಧಿ ವೃದ್ಧರ ಪಿಂಚಣಿ ಯೋಜನೆ, ಇಂದಿರಾಗಾಂಧಿ ಅಶಕ್ತರ ಪಿಂಚಣಿ ಯೋಜನೆ, ರಾಷ್ಟೀಯ ಫ್ಯಾಮಿಲಿ ಬೆನಿಫಿಟ್ ಸ್ಕೀಂ ಮತ್ತು ಅನ್ನಪೂರ್ಣ ಯೋಜನೆಗಳಿವೆ.

ಭಾರತ ವಿಶ್ವದಲ್ಲೆ ದೊಡ್ಡದಾದ ಆಹಾರ ಭದ್ರತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ವರ್ಷಕ್ಕೆ 1.8 ಲಕ್ಷಕೋಟಿ ವ್ಯಯ ಮಾಡುತ್ತಿದೆ. ಮಹಾತ್ಮಾಗಾಂಧಿ ಗ್ರಾಮೀಣ ರೋಜ್‍ಗಾರ್ ಯೋಜನೆಯ ಉಳಿವಿಗಾಗಿ ದಿನಗೂಲಿ ಒದಗಿಸಲು 2019-20ರಲ್ಲಿ ಭಾರತ ಸರ್ಕಾರ 60000 ಕೋಟಿ ಖರ್ಚು ಮಾಡಿದೆ. ಕೇಂದ್ರದ ಈ ವರ್ಷದ ಸಬ್ಸಿಡಿ ಬಿಲ್ 3.38 ಲಕ್ಷ ಕೋಟಿ ರೂಪಾಯಿಗಳು. ಅಂದರೆ ದಿನಕ್ಕೆ 900 ಕೋಟಿ. ಸಾಮಾಜಿಕ ಸೆಕ್ಟರ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಿಕೊಂಡು ಈ ವರ್ಷ 13.9 ಲಕ್ಷ ಕೋಟಿ ಖರ್ಚುಮಾಡುತ್ತಿವೆ. ಈ ಮೊತ್ತದಲ್ಲಿ ಪ್ರಾಕೃತಿಕ ವಿಕೋಪದಿಂದ ಜನಸಮುದಾಯಕ್ಕಾಗುವ ಹಾನಿಯನ್ನು ತುಂಬಿಕೊಡಲು 5.5 ಲಕ್ಷ ಕೋಟಿ ತೆಗೆದಿರಿಸಲಾಗಿದೆ. ಬಡತನದ ಇಂಡೆಕ್ಸ್ 54ರಿಂದ 50ಕ್ಕೆ ಇಳಿದಿದೆ. ಆದರೆ ರಾಷ್ಟೀಯ ಸರಾಸರಿಗಿಂತ ಕಡಿಮೆ ಇರುವ ರಾಜ್ಯಗಳು ಹಿಂದೆ 10 ಇದ್ದದ್ದು ಈಗ 14ಕ್ಕೆ ಏರಿವೆ.

ದೊಡ್ಡ ರಾಜ್ಯಗಳ ಪೈಕಿ 10 ರಾಜ್ಯಗಳು ಬಡತನದ ಸೀಮಾರೇಖೆಯ ತಳಗಿದ್ದು ಅವುಗಳಲ್ಲಿ ಆರಂತೂ ತುಂಬಾ ದುರವಸ್ಥೆಯಲ್ಲಿವೆ. ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಗಿರುವುದು ಬಡತನ ನಿವಾರಣಾ ಕಾರ್ಯಾಚರಣೆಯ ಯೋಜನೆ ಅಭಾವದಿಂದಲ್ಲ; ಅವು ಅಪಾರ ಸಂಖ್ಯೆಯಲ್ಲಿವೆ.

ಈ ಸಾಮಾಜಿಕ ಕಾರ್ಯಕ್ರಮಗಳ ಕಾರ್ಯ ಕ್ಷಮತೆಯ ಅಭಾವದಿಂದಾಗಿ ಬಡತನ ಹೆಚ್ಚುತ್ತಿದೆ. ರಾಜ್ಯಗಳ ಆಡಳಿತಗಾರರ ದಕ್ಷತೆಯ ಕೊರತೆಯಿಂದ ಆಡಳಿತದ ಜ್ಞಾನದ ಕೊರತೆಯಿಂದ ಬಡತನ ನಿವಾರಣೆಯ ಕೆಲಸ ಹಿಂದೆ ಬಿದ್ದಿದೆ.

ದೇಶದಲ್ಲಿ ಅನೇಕ ಕಡೆ ಬಡತನ ಹಸಿವು ಕಾಡುತ್ತಿದೆ. ಆಹಾರದ ಅಪೌಷ್ಠಿಕತೆ ಇಡೀ ದೇಶವನ್ನು ಕಾಡುತ್ತಿದೆ. ಭಾರತದಲ್ಲಿ 58.3 ದಶಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ; ಭಾರತದಲ್ಲಿ ಹುಟ್ಟುವ ಮಕ್ಕಳಲ್ಲಿ ಶೇ.40ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ತಾಯಂದಿರಾಗುವ ಒಂದು ಲಕ್ಷ ಮಹಿಳೆಯರಲ್ಲಿ 122 ಹೆಣ್ಣು ಮಕ್ಕಳು ಸಾವಿಗೆ ಗುರಿಯಾಗುತ್ತಾರೆ. ಗರ್ಭಿಣಿಯರಲ್ಲಿ ಅರ್ಧದಷ್ಟು ಮಹಿಳೆಯರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಗರ್ಭಿಣಿಯಲ್ಲಿ ಶೇ.36ರಷ್ಟು ಮಹಿಳೆಯರಿಗೆ ಮಾತ್ರ ತಾಯಿತನದ ಬೆನೆಫಿಟ್ ಸಿಕ್ಕುತ್ತಿದೆ.

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅದನ್ನು ತಿನ್ನುವ ಇಲಾಖೆ ಹೊರತು ಜನತೆಯ ಒಳಿತಿಗಾಗಿ ಕಾರ್ಯ ನಿರ್ವಹಿಸುವ ಇಲಾಖೆ ಅಲ್ಲ ಎಂದು ಬಗೆದಂತಿದೆ.

ಇವೆಲ್ಲದರ ಅರ್ಥವೇನು? ಬಡತನ ನಿವಾರಣೆಗೆಂದು ಹಲವು ಬಗೆಯ ಯೋಜನೆಗಳನ್ನು ಇದುವರೆಗೆ ಆಳಿದ ವಿವಿಧ ಪಕ್ಷಗಳ ಸರ್ಕಾರಗಳು (ಪ್ರಧಾನವಾಗಿ ಕಾಂಗ್ರೆಸ್ಸು) ತಂದಿದ್ದಾರಾದರೂ, ಆ ನಿಟ್ಟಿನಲ್ಲಿ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಅವೆಲ್ಲವನ್ನೂ ಬಗೆಹರಿಸಿ ಎಂದು 2014ರಲ್ಲಿ ಮತ್ತು 2019ರಲ್ಲಿ ಎರಡೆರಡು ಬಾರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅವರು ಮಾಡುತ್ತಿರುವುದೇನು? ಈ ಜನರನ್ನು ಬಡತನದ ಕೂಪದಿಂದ ಮೇಲೆತ್ತುವ ಬದಲು, ಜನರನ್ನು ಆತಂಕಕ್ಕೆ ದೂಡುವ ಕ್ರಮಗಳಿಗೆ ಮುಂದಾಗಿದೆ. ನೋಟು ರದ್ದತಿಯಿಂದ ಶುರುವಾಗಿ ಸಿಎಎ, ಎನ್‍ಆರ್‍ಸಿಯವರೆಗೆ ಎಲ್ಲವೂ ದೇಶವನ್ನು ಹಿಂಡುವ ಕ್ರಮಗಳಾಗಿವೆ. ದೇಶವನ್ನಾಳುವವರು ಭಾರತೀಯರ ಕುರಿತು ಕಾಳಜಿ ಇರುವವರೇ ಆಗಿದ್ದರೆ ಮೊದಲು ಬಡ ಭಾರತೀಯರ ಕುರಿತು ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...