Homeಮುಖಪುಟಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

ಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

- Advertisement -
- Advertisement -

ಇಲ್ಲಿ ಕಾಂಗ್ರೆಸ್ ಎಂದಾಗ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳು ಎಂದೂ, ಪ್ರಗತಿಪರರು ಎಂದಾಗ ಎಡ, ಲಿಬರಲ್ ಇತ್ಯಾದಿ ಎಂದೂ ಓದಿಕೊಳ್ಳಬಹುದು. 2019ರ ಲೋಕಸಭಾ ಚುನಾವಣೆಯಲ್ಲಿ ಕಂಡುಬಂದ ಫಲಿತಾಂಶವು ಸಮಾಜದಲ್ಲಿ ಆಗಿರುವ ಬದಲಾವಣೆಯ ಪ್ರತೀಕ ಎಂಬುದು ಈಗಂತೂ ಸಾಬೀತಾಗಿದೆ. ಸೋತು ಸೊರಗಿ ಹೋಗಿರುವ ಪ್ರಧಾನ ಪ್ರತಿಪಕ್ಷವಾದ ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್‍ಗಾಂಧಿಯವರು ರಾಜೀನಾಮೆ ಕೊಟ್ಟರಲ್ಲದೇ, ಅದು ನಾಟಕವಲ್ಲ ಎಂದು ಸ್ಪಷ್ಟಪಡಿಸಿದರು. ಅವರು ರಾಜೀನಾಮೆ ಕೊಟ್ಟಾಗ, ಪಕ್ಷದೊಳಗೆ ಇನ್ನಷ್ಟು ಅಧಿಕಾರ ಪಡೆದುಕೊಳ್ಳಲು ಮತ್ತು ಕೆಲವು ಹಿರಿಯರನ್ನು ದೂರಲು ಮಾಡಿರುವ ನಾಟಕ ಎಂದು ಭಾವಿಸಲಾಯಿತು. ಬಿಜೆಪಿಯು ವಂಶಾಡಳಿತದ ಮೇಲೆ ನಡೆಸುತ್ತಿರುವ ದಾಳಿಯಿಂದ ತಪ್ಪಿಸಿಕೊಳ್ಳಲು ರಾಹುಲ್‍ಗಾಂಧಿ ನಿಜಕ್ಕೂ ಅಧಿಕಾರ ತ್ಯಜಿಸುತ್ತಿದ್ದಾರೆ ಎಂದೂ ಹೇಳಲಾಯಿತು. ಇವೆರಡರಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುದು ಪತ್ತೆಯಾಗುವುದು ಕಷ್ಟ. ಗಾಂಧಿ ಕುಟುಂಬ ಅಧಿಕಾರ ಬೇಡವೆಂದರೂ, ಅವರಿಗೇ ಅಂಟಿಕೊಂಡಿರಬೇಕಾದ ಅನಿವಾರ್ಯತೆ ಕಾಂಗ್ರೆಸ್ಸಿಗಿರಬಹುದು. ಇಲ್ಲವೇ ಅವರಿಗೂ ಅಧಿಕಾರ ಅಭ್ಯಾಸವಾಗಿರುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ಸೋನಿಯಾಗಾಂಧಿ ಮತ್ತೆ ‘ಹಂಗಾಮಿ’ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಎಷ್ಟು ತಾತ್ಕಾಲಿಕ ಎಂಬುದನ್ನು ಮುಂದಿನ ದಿನಗಳು ಹೇಗೂ ತಿಳಿಸುತ್ತವೆ.

ಆದರೆ, ದೇಶಕ್ಕೊಂದು ಪ್ರತಿಪಕ್ಷವೂ ಗತಿಯಿರದ ಸ್ಥಿತಿಗೆ ಭಾರತದ ಪ್ರಜಾಪ್ರಭುತ್ವ ತಲುಪಿದೆ. ಸರ್ವಾಧಿಕಾರ ಲಕ್ಷಣಗಳು ಬಹಳ ಹಿಂದೆಯೇ ಕಾಣಿಸಿತ್ತಾದರೂ, ಅದು ಜಾರಿಗೆ ಬರುತ್ತಿರುವುದು ಕಣ್ಣ ಮುಂದೆಯೇ ಕಾಣುತ್ತಿದೆ. ದೇಶದ ಆರ್ಥಿಕ ಬಿಕ್ಕಟ್ಟು ತೀವ್ರವಾಗುತ್ತಿದ್ದರೂ, ದೇಶವಾಳುತ್ತಿರುವ ಪಕ್ಷವನ್ನು ಕಾಪಾಡಲು ಹೊರಗೆ ಪಾಕಿಸ್ತಾನವಿದೆ. ಒಳಗೆ ಜಾತಿ-ಧರ್ಮ ಮತ್ತು ಹಣಬಲವಿದೆ. ಹೀಗಿರುವಾಗ ಜನರೊಳಗಿಂದಲೇ ಪ್ರತಿಪಕ್ಷವು ಹುಟ್ಟಿಕೊಳ್ಳಬೇಕು ಎಂಬ ಮಾತು ಎಷ್ಟೇ ಕ್ಲೀಷೆಯೆನಿಸಿದರೂ ಬೇರೆ ಯಾವ ಷಾರ್ಟ್‍ಕಟ್ ಸಹಾ ಇದಕ್ಕಿಲ್ಲ.

ಮುಂದಣ ದಾರಿಯನ್ನು ಕಂಡುಕೊಳ್ಳುವಾಗ, ಹಿಂದಣ ಹೆಜ್ಜೆಯನ್ನು ಒಮ್ಮೆ ತಿರುಗಿ ನೋಡಿಕೊಳ್ಳಬೇಕು. ಕಳೆದ ಎರಡು ದಶಕಗಳಿಂದ, ಅದರಲ್ಲೂ 2019ರ ಚುನಾವಣೆಯ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಒಂದು ವಾದವನ್ನು ಒರೆಗೆ ಹಚ್ಚಿ ನೋಡುವ ಅಗತ್ಯವಿದೆ. ಬಿಜೆಪಿಗೆದುರಾಗಿ ಕಾಂಗ್ರೆಸ್ ಬಿಟ್ಟರೆ ಬೇರೆ ದಾರಿಯಿಲ್ಲವೆಂತಲೂ, ಕಾಂಗ್ರೆಸ್‍ನ ನೇತೃತ್ವದಲ್ಲಿ ಪ್ರತಿಪಕ್ಷಗಳೆಲ್ಲವೂ ಒಂದಾಗಬೇಕೆಂತಲೂ ಬಿಜೆಪಿ ವಿರೋಧಿಗಳು ಬಯಸಿದರು. ಅದೇ ಮುಳುವಾಯಿತು ಎಂದು ಹೇಳಲಾಗದಿದ್ದರೂ, ಅದು ಯಾವ ರೀತಿಯಲ್ಲೂ ಪ್ರಯೋಜನಕ್ಕೆ ಬರಲಿಲ್ಲ ಎಂಬುದಂತೂ ವಾಸ್ತವ.

ಈ ಒತ್ತಡವನ್ನು ವಿವಿಧ ರಾಜಕೀಯ ಪಕ್ಷಗಳ ಮೇಲೆ ಜನಪರವಾಗಿ ಆಲೋಚನೆ ಮಾಡುವ ಶಕ್ತಿಗಳಿಗಿಂತಲೂ ಮುಸ್ಲಿಂ ಮತಗಳ ಪ್ರಮಾಣವು ಉಂಟು ಮಾಡಿದ್ದವು. ಅದಕ್ಕೆ ಬೇಕಾದ ಆಟವನ್ನು ಒಂದಲ್ಲಾ ಒಂದು ರೀತಿಯಲ್ಲಿ ವಿವಿಧ ಪಕ್ಷಗಳು ಹೂಡಿದವು. ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ನೊಂದಿಗೆ ನಡೆಸಿದ ಮೈತ್ರಿಯ ವಿಫಲ ನಾಟಕವೂ ಅದಕ್ಕೇ ಆಗಿತ್ತು. ಬಲಶಾಲಿಯಲ್ಲದ ಕಾಂಗ್ರೆಸ್‍ಗೆ ಮತ ಹಾಕಬೇಡಿ ಎಂದು ಮಾಯಾವತಿಯವರು ಕರೆ ಕೊಟ್ಟಿದ್ದೂ ಮುಸ್ಲಿಮರಿಗೆ.

ಜನಪರವಾಗಿ ಆಲೋಚನೆ ಮಾಡುವ ಚುನಾವಣೇತರ ಶಕ್ತಿಗಳು ಮತ್ತು ಎಡಚಿಂತಕರು ಕಾಂಗ್ರೆಸ್ ಮೇಲೆ ಒಂದು ಒತ್ತಡ ಸೃಷ್ಟಿಸಲು ಯಶಸ್ವಿಯಾಗಿದ್ದರು. ಅದು ಒಂದು ಅಸಲೀ ಜನಪರ ನೆರೇಟಿವ್ ಮುಂದಿಡಬೇಕು ಮತ್ತು ಜನಸಾಮಾನ್ಯರ ನಿಜವಾದ ಕಷ್ಟಗಳಿಗೆ ಸ್ಪಂದಿಸಲು ಬೇಕಾದ ನೀತಿಗಳನ್ನು ಜಾರಿಗೆ ತರುವ ಆಶ್ವಾಸನೆ ಕೊಡಬೇಕು ಎಂಬ ಒತ್ತಡ ಕಾಂಗ್ರೆಸ್‍ನ ಮೇಲೆ ಉಂಟಾಗಿತ್ತು. ರಾಹುಲ್‍ಗಾಂಧಿ ನೇರವಾಗಿ ಅನಿಲ್ ಅಂಬಾನಿಯ ಮೇಲೆ ಪದೇ ಪದೇ ಆರೋಪಗಳನ್ನು ಮಾಡಿದ್ದಲ್ಲದೇ, ದೇಶದ 15-20 ಉದ್ದಿಮೆಪತಿಗಳ ಹಿತಕ್ಕಾಗಿ ಈ ಸರ್ಕಾರವು ನಡೆಯುತ್ತಿದೆ ಎಂದು ಯಾವ ಮುಲಾಜಿಲ್ಲದೇ ಹೇಳಿದರು. ಅದರ ಪ್ರಣಾಳಿಕೆಯಲ್ಲಿದ್ದ ನ್ಯಾಯ್, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಹಿಂಪಡೆತ, ರೈತರ ಸಾಲಮನ್ನಾ ಒಳಗೊಂಡಂತೆ ಹಲವು ಜನಪರ ಅಂಶಗಳು ಅದನ್ನು ಸೂಚಿಸುತ್ತಿತ್ತು. ಇವತ್ತಿನ ವ್ಯವಸ್ಥೆಯಲ್ಲಿ ಕಮ್ಯುನಿಸ್ಟ್ ಪಕ್ಷವೊಂದು ಮುಂದಿಡಬಹುದಾದ ಹಲವು ಭರವಸೆಗಳು ಅದರಲ್ಲಿದ್ದವು.

ಪಿ.ಚಿದಂಬರಂರಂತಹ ಮುಕ್ತ ಮಾರುಕಟ್ಟೆ ಪ್ರತಿಪಾದಕ, ಭಾರತದಲ್ಲಿ ಜಾಗತೀಕರಣ ನೀತಿಗಳನ್ನು ಜಾರಿಗೆ ತಂದ ಮನಮೋಹನ್‍ಸಿಂಗ್‍ರಿಂದ ಹಿಡಿದು, ಕಾಂಗ್ರೆಸ್ ಪಕ್ಷವು ತನ್ನ ಮಧ್ಯಮ ಮಾರ್ಗಕ್ಕೆ ಅಂಟಿಕೊಂಡಿರಬೇಕು ಎಂದು ಒತ್ತಾಯಿಸುವ ಕ್ವಿಂಟ್‍ನ ಸಂಪಾದಕ ರಾಘವ್ ಬೆಹ್ಲ್ ಸಹಾ ಅದನ್ನು ಸಮರ್ಥಿಸಿ ಮಾತನಾಡಿದರು. ಹೆಚ್ಚು ಕಡಿಮೆ ಒಂದು ವರ್ಷದ ಮುಂಚೆಯೇ ಪ್ರಣಾಳಿಕೆ ತಯಾರಿಯ ಪ್ರಕ್ರಿಯೆ ಆರಂಭಿಸಿದ ಕಾಂಗ್ರೆಸ್ಸು, ಅದನ್ನು ಬಿಡುಗಡೆ ಮಾಡಿದ್ದು ತಡವಾಗಿ. ಅದನ್ನು ಜನರಿಗೆ ತಲುಪಿಸಲು ಬೇಕಿದ್ದ ಸಮಯವಾಗಲೀ, ತಲುಪಿಸಬಲ್ಲ ಯಂತ್ರಾಂಗವಾಗಲೀ ಅದಕ್ಕಿರಲೇ ಇಲ್ಲ. ಒಂದು ವೇಳೆ ತಲುಪಿದ್ದರೂ ಅಂತಹ ದೊಡ್ಡ ಪ್ರಯೋಜವಾಗುತ್ತಿರಲಿಲ್ಲ ಎಂಬುದನ್ನು ಫಲಿತಾಂಶವು ಎತ್ತಿ ತೋರಿಸಿತು.

ಜನಪರವಾದ ನೆರೇಟಿವ್ ಕಟ್ಟಿಕೊಟ್ಟಿದ್ದು ತಪ್ಪಲ್ಲ. ಅದಕ್ಕಿಂತ ಒಳ್ಳೆಯದೇನಿದೆ? ಆದರೆ ಕಾಂಗ್ರೆಸ್ಸಿನ ಬಾಯಲ್ಲಿ ಜನಪರವಾದ, ಉದ್ದಿಮೆಪತಿಗಳ ವಿರುದ್ಧದ ಮಾತುಗಳನ್ನು ಜನರು ನಂಬುವುದು ಕಷ್ಟ. ಈ ಮಾತುಗಳನ್ನು ಅದರ ಸರ್ವೋಚ್ಚ ನಾಯಕ ಆಡುತ್ತಿರುವಾಗಲೇ ಅದೇ ಪಕ್ಷದಲ್ಲಿ ಸಾವಿರಾರು ಕೋಟಿ ಆಸ್ತಿ ಹೊಂದಿರುವ ಎಷ್ಟೋ ಮರಿನಾಯಕರಿದ್ದಾರೆ. ಬಿಜೆಪಿಯ ನೀತಿಗಳಿಗಿಂತ ಭಿನ್ನವಾದ ಸಾಮಾಜಿಕ ನಿಲುವನ್ನೇನೂ ಹೊಂದಿರದ ಕಾಂಗ್ರೆಸ್ ನಾಯಕರನ್ನು ಜನರು ತಮ್ಮ ಕಣ್ಣೆದುರಿಗೆ ನೋಡುತ್ತಿದ್ದರು. ಇದನ್ನೆಲ್ಲಾ ಜನರನ್ನು ಮೋಸಗೊಳಿಸಿ ಓಟು ಪಡೆಯಲು ಮಾತ್ರ ಮಾಡಬೇಕೆಂದಿದ್ದಲ್ಲಿ ಅದನ್ನು ಬಿಜೆಪಿ ಇನ್ನೂ ಅದ್ಭುತವಾಗಿ ಮಾಡುತ್ತಿತ್ತು.

ಕಾಂಗ್ರೆಸ್ಸು ಒಂದು ಮಧ್ಯಮಮಾರ್ಗದ ಪಕ್ಷವಾಗಿಯೇ ಉಳಿದುಕೊಳ್ಳುವುದು ಒಳಿತು. ದೆಹಲಿಯಿಂದ ಹಳ್ಳಿಯ ಮೂಲೆಗಳ ತನಕ ಅದಕ್ಕಿರುವ ತಳಹದಿಯನ್ನು ರಾಹುಲ್‍ಗಾಂಧಿಯೂ ಬದಲಿಸುವುದು ಸಾಧ್ಯವಿಲ್ಲ. ಹೊಸ ಅಧ್ಯಕ್ಷೆಗೂ ಸಾಧ್ಯವಿಲ್ಲ.

ಇಲ್ಲಿ ನಿಜಕ್ಕೂ ಸೋಲುಂಡಿದ್ದು ಜನಪರ ಶಕ್ತಿಗಳು. ತಮ್ಮದೇ ಪರ್ಯಾಯವನ್ನು ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಕಟ್ಟಲು ಸಾಧ್ಯವಾಗದೇ ಈಗಾಗಲೇ ತಿರಸ್ಕೃತಗೊಂಡಿರುವ ರಾಜಕೀಯ ಪಕ್ಷಗಳೇ ಅದನ್ನು ಮಾಡಲಿ ಎಂದು ಅವು ಬಯಸಿದವು. ಫಲಿತಾಂಶದ ತಕ್ಷಣದ ಶಾಕ್‍ನಿಂದ ಹೊರಬಂದ ಮೇಲಾದರೂ ಆ ನಿಟ್ಟಿನಲ್ಲಿ ಯೋಚಿಸಿ ಸಮಾಜದಲ್ಲೂ, ಸಂಸತ್ತಿನಲ್ಲೂ ಬದಲಾವಣೆ ತರಲು ಬೇಕಾದ ಸುದೀರ್ಘ ಕಷ್ಟಕರ ಪ್ರಯಾಣಕ್ಕೆ ಮುಂದಾದರೆ ಮಾತ್ರ ದೇಶಕ್ಕೆ ಭವಿಷ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...