Homeಮುಖಪುಟಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

ಈ ಸೋಲು ಕಾಂಗ್ರೆಸ್ಸಿನದೋ? ಪ್ರಗತಿಪರರದ್ದೋ?

- Advertisement -
- Advertisement -

ಇಲ್ಲಿ ಕಾಂಗ್ರೆಸ್ ಎಂದಾಗ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳು ಎಂದೂ, ಪ್ರಗತಿಪರರು ಎಂದಾಗ ಎಡ, ಲಿಬರಲ್ ಇತ್ಯಾದಿ ಎಂದೂ ಓದಿಕೊಳ್ಳಬಹುದು. 2019ರ ಲೋಕಸಭಾ ಚುನಾವಣೆಯಲ್ಲಿ ಕಂಡುಬಂದ ಫಲಿತಾಂಶವು ಸಮಾಜದಲ್ಲಿ ಆಗಿರುವ ಬದಲಾವಣೆಯ ಪ್ರತೀಕ ಎಂಬುದು ಈಗಂತೂ ಸಾಬೀತಾಗಿದೆ. ಸೋತು ಸೊರಗಿ ಹೋಗಿರುವ ಪ್ರಧಾನ ಪ್ರತಿಪಕ್ಷವಾದ ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್‍ಗಾಂಧಿಯವರು ರಾಜೀನಾಮೆ ಕೊಟ್ಟರಲ್ಲದೇ, ಅದು ನಾಟಕವಲ್ಲ ಎಂದು ಸ್ಪಷ್ಟಪಡಿಸಿದರು. ಅವರು ರಾಜೀನಾಮೆ ಕೊಟ್ಟಾಗ, ಪಕ್ಷದೊಳಗೆ ಇನ್ನಷ್ಟು ಅಧಿಕಾರ ಪಡೆದುಕೊಳ್ಳಲು ಮತ್ತು ಕೆಲವು ಹಿರಿಯರನ್ನು ದೂರಲು ಮಾಡಿರುವ ನಾಟಕ ಎಂದು ಭಾವಿಸಲಾಯಿತು. ಬಿಜೆಪಿಯು ವಂಶಾಡಳಿತದ ಮೇಲೆ ನಡೆಸುತ್ತಿರುವ ದಾಳಿಯಿಂದ ತಪ್ಪಿಸಿಕೊಳ್ಳಲು ರಾಹುಲ್‍ಗಾಂಧಿ ನಿಜಕ್ಕೂ ಅಧಿಕಾರ ತ್ಯಜಿಸುತ್ತಿದ್ದಾರೆ ಎಂದೂ ಹೇಳಲಾಯಿತು. ಇವೆರಡರಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುದು ಪತ್ತೆಯಾಗುವುದು ಕಷ್ಟ. ಗಾಂಧಿ ಕುಟುಂಬ ಅಧಿಕಾರ ಬೇಡವೆಂದರೂ, ಅವರಿಗೇ ಅಂಟಿಕೊಂಡಿರಬೇಕಾದ ಅನಿವಾರ್ಯತೆ ಕಾಂಗ್ರೆಸ್ಸಿಗಿರಬಹುದು. ಇಲ್ಲವೇ ಅವರಿಗೂ ಅಧಿಕಾರ ಅಭ್ಯಾಸವಾಗಿರುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ಸೋನಿಯಾಗಾಂಧಿ ಮತ್ತೆ ‘ಹಂಗಾಮಿ’ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಎಷ್ಟು ತಾತ್ಕಾಲಿಕ ಎಂಬುದನ್ನು ಮುಂದಿನ ದಿನಗಳು ಹೇಗೂ ತಿಳಿಸುತ್ತವೆ.

ಆದರೆ, ದೇಶಕ್ಕೊಂದು ಪ್ರತಿಪಕ್ಷವೂ ಗತಿಯಿರದ ಸ್ಥಿತಿಗೆ ಭಾರತದ ಪ್ರಜಾಪ್ರಭುತ್ವ ತಲುಪಿದೆ. ಸರ್ವಾಧಿಕಾರ ಲಕ್ಷಣಗಳು ಬಹಳ ಹಿಂದೆಯೇ ಕಾಣಿಸಿತ್ತಾದರೂ, ಅದು ಜಾರಿಗೆ ಬರುತ್ತಿರುವುದು ಕಣ್ಣ ಮುಂದೆಯೇ ಕಾಣುತ್ತಿದೆ. ದೇಶದ ಆರ್ಥಿಕ ಬಿಕ್ಕಟ್ಟು ತೀವ್ರವಾಗುತ್ತಿದ್ದರೂ, ದೇಶವಾಳುತ್ತಿರುವ ಪಕ್ಷವನ್ನು ಕಾಪಾಡಲು ಹೊರಗೆ ಪಾಕಿಸ್ತಾನವಿದೆ. ಒಳಗೆ ಜಾತಿ-ಧರ್ಮ ಮತ್ತು ಹಣಬಲವಿದೆ. ಹೀಗಿರುವಾಗ ಜನರೊಳಗಿಂದಲೇ ಪ್ರತಿಪಕ್ಷವು ಹುಟ್ಟಿಕೊಳ್ಳಬೇಕು ಎಂಬ ಮಾತು ಎಷ್ಟೇ ಕ್ಲೀಷೆಯೆನಿಸಿದರೂ ಬೇರೆ ಯಾವ ಷಾರ್ಟ್‍ಕಟ್ ಸಹಾ ಇದಕ್ಕಿಲ್ಲ.

ಮುಂದಣ ದಾರಿಯನ್ನು ಕಂಡುಕೊಳ್ಳುವಾಗ, ಹಿಂದಣ ಹೆಜ್ಜೆಯನ್ನು ಒಮ್ಮೆ ತಿರುಗಿ ನೋಡಿಕೊಳ್ಳಬೇಕು. ಕಳೆದ ಎರಡು ದಶಕಗಳಿಂದ, ಅದರಲ್ಲೂ 2019ರ ಚುನಾವಣೆಯ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಒಂದು ವಾದವನ್ನು ಒರೆಗೆ ಹಚ್ಚಿ ನೋಡುವ ಅಗತ್ಯವಿದೆ. ಬಿಜೆಪಿಗೆದುರಾಗಿ ಕಾಂಗ್ರೆಸ್ ಬಿಟ್ಟರೆ ಬೇರೆ ದಾರಿಯಿಲ್ಲವೆಂತಲೂ, ಕಾಂಗ್ರೆಸ್‍ನ ನೇತೃತ್ವದಲ್ಲಿ ಪ್ರತಿಪಕ್ಷಗಳೆಲ್ಲವೂ ಒಂದಾಗಬೇಕೆಂತಲೂ ಬಿಜೆಪಿ ವಿರೋಧಿಗಳು ಬಯಸಿದರು. ಅದೇ ಮುಳುವಾಯಿತು ಎಂದು ಹೇಳಲಾಗದಿದ್ದರೂ, ಅದು ಯಾವ ರೀತಿಯಲ್ಲೂ ಪ್ರಯೋಜನಕ್ಕೆ ಬರಲಿಲ್ಲ ಎಂಬುದಂತೂ ವಾಸ್ತವ.

ಈ ಒತ್ತಡವನ್ನು ವಿವಿಧ ರಾಜಕೀಯ ಪಕ್ಷಗಳ ಮೇಲೆ ಜನಪರವಾಗಿ ಆಲೋಚನೆ ಮಾಡುವ ಶಕ್ತಿಗಳಿಗಿಂತಲೂ ಮುಸ್ಲಿಂ ಮತಗಳ ಪ್ರಮಾಣವು ಉಂಟು ಮಾಡಿದ್ದವು. ಅದಕ್ಕೆ ಬೇಕಾದ ಆಟವನ್ನು ಒಂದಲ್ಲಾ ಒಂದು ರೀತಿಯಲ್ಲಿ ವಿವಿಧ ಪಕ್ಷಗಳು ಹೂಡಿದವು. ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ನೊಂದಿಗೆ ನಡೆಸಿದ ಮೈತ್ರಿಯ ವಿಫಲ ನಾಟಕವೂ ಅದಕ್ಕೇ ಆಗಿತ್ತು. ಬಲಶಾಲಿಯಲ್ಲದ ಕಾಂಗ್ರೆಸ್‍ಗೆ ಮತ ಹಾಕಬೇಡಿ ಎಂದು ಮಾಯಾವತಿಯವರು ಕರೆ ಕೊಟ್ಟಿದ್ದೂ ಮುಸ್ಲಿಮರಿಗೆ.

ಜನಪರವಾಗಿ ಆಲೋಚನೆ ಮಾಡುವ ಚುನಾವಣೇತರ ಶಕ್ತಿಗಳು ಮತ್ತು ಎಡಚಿಂತಕರು ಕಾಂಗ್ರೆಸ್ ಮೇಲೆ ಒಂದು ಒತ್ತಡ ಸೃಷ್ಟಿಸಲು ಯಶಸ್ವಿಯಾಗಿದ್ದರು. ಅದು ಒಂದು ಅಸಲೀ ಜನಪರ ನೆರೇಟಿವ್ ಮುಂದಿಡಬೇಕು ಮತ್ತು ಜನಸಾಮಾನ್ಯರ ನಿಜವಾದ ಕಷ್ಟಗಳಿಗೆ ಸ್ಪಂದಿಸಲು ಬೇಕಾದ ನೀತಿಗಳನ್ನು ಜಾರಿಗೆ ತರುವ ಆಶ್ವಾಸನೆ ಕೊಡಬೇಕು ಎಂಬ ಒತ್ತಡ ಕಾಂಗ್ರೆಸ್‍ನ ಮೇಲೆ ಉಂಟಾಗಿತ್ತು. ರಾಹುಲ್‍ಗಾಂಧಿ ನೇರವಾಗಿ ಅನಿಲ್ ಅಂಬಾನಿಯ ಮೇಲೆ ಪದೇ ಪದೇ ಆರೋಪಗಳನ್ನು ಮಾಡಿದ್ದಲ್ಲದೇ, ದೇಶದ 15-20 ಉದ್ದಿಮೆಪತಿಗಳ ಹಿತಕ್ಕಾಗಿ ಈ ಸರ್ಕಾರವು ನಡೆಯುತ್ತಿದೆ ಎಂದು ಯಾವ ಮುಲಾಜಿಲ್ಲದೇ ಹೇಳಿದರು. ಅದರ ಪ್ರಣಾಳಿಕೆಯಲ್ಲಿದ್ದ ನ್ಯಾಯ್, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಹಿಂಪಡೆತ, ರೈತರ ಸಾಲಮನ್ನಾ ಒಳಗೊಂಡಂತೆ ಹಲವು ಜನಪರ ಅಂಶಗಳು ಅದನ್ನು ಸೂಚಿಸುತ್ತಿತ್ತು. ಇವತ್ತಿನ ವ್ಯವಸ್ಥೆಯಲ್ಲಿ ಕಮ್ಯುನಿಸ್ಟ್ ಪಕ್ಷವೊಂದು ಮುಂದಿಡಬಹುದಾದ ಹಲವು ಭರವಸೆಗಳು ಅದರಲ್ಲಿದ್ದವು.

ಪಿ.ಚಿದಂಬರಂರಂತಹ ಮುಕ್ತ ಮಾರುಕಟ್ಟೆ ಪ್ರತಿಪಾದಕ, ಭಾರತದಲ್ಲಿ ಜಾಗತೀಕರಣ ನೀತಿಗಳನ್ನು ಜಾರಿಗೆ ತಂದ ಮನಮೋಹನ್‍ಸಿಂಗ್‍ರಿಂದ ಹಿಡಿದು, ಕಾಂಗ್ರೆಸ್ ಪಕ್ಷವು ತನ್ನ ಮಧ್ಯಮ ಮಾರ್ಗಕ್ಕೆ ಅಂಟಿಕೊಂಡಿರಬೇಕು ಎಂದು ಒತ್ತಾಯಿಸುವ ಕ್ವಿಂಟ್‍ನ ಸಂಪಾದಕ ರಾಘವ್ ಬೆಹ್ಲ್ ಸಹಾ ಅದನ್ನು ಸಮರ್ಥಿಸಿ ಮಾತನಾಡಿದರು. ಹೆಚ್ಚು ಕಡಿಮೆ ಒಂದು ವರ್ಷದ ಮುಂಚೆಯೇ ಪ್ರಣಾಳಿಕೆ ತಯಾರಿಯ ಪ್ರಕ್ರಿಯೆ ಆರಂಭಿಸಿದ ಕಾಂಗ್ರೆಸ್ಸು, ಅದನ್ನು ಬಿಡುಗಡೆ ಮಾಡಿದ್ದು ತಡವಾಗಿ. ಅದನ್ನು ಜನರಿಗೆ ತಲುಪಿಸಲು ಬೇಕಿದ್ದ ಸಮಯವಾಗಲೀ, ತಲುಪಿಸಬಲ್ಲ ಯಂತ್ರಾಂಗವಾಗಲೀ ಅದಕ್ಕಿರಲೇ ಇಲ್ಲ. ಒಂದು ವೇಳೆ ತಲುಪಿದ್ದರೂ ಅಂತಹ ದೊಡ್ಡ ಪ್ರಯೋಜವಾಗುತ್ತಿರಲಿಲ್ಲ ಎಂಬುದನ್ನು ಫಲಿತಾಂಶವು ಎತ್ತಿ ತೋರಿಸಿತು.

ಜನಪರವಾದ ನೆರೇಟಿವ್ ಕಟ್ಟಿಕೊಟ್ಟಿದ್ದು ತಪ್ಪಲ್ಲ. ಅದಕ್ಕಿಂತ ಒಳ್ಳೆಯದೇನಿದೆ? ಆದರೆ ಕಾಂಗ್ರೆಸ್ಸಿನ ಬಾಯಲ್ಲಿ ಜನಪರವಾದ, ಉದ್ದಿಮೆಪತಿಗಳ ವಿರುದ್ಧದ ಮಾತುಗಳನ್ನು ಜನರು ನಂಬುವುದು ಕಷ್ಟ. ಈ ಮಾತುಗಳನ್ನು ಅದರ ಸರ್ವೋಚ್ಚ ನಾಯಕ ಆಡುತ್ತಿರುವಾಗಲೇ ಅದೇ ಪಕ್ಷದಲ್ಲಿ ಸಾವಿರಾರು ಕೋಟಿ ಆಸ್ತಿ ಹೊಂದಿರುವ ಎಷ್ಟೋ ಮರಿನಾಯಕರಿದ್ದಾರೆ. ಬಿಜೆಪಿಯ ನೀತಿಗಳಿಗಿಂತ ಭಿನ್ನವಾದ ಸಾಮಾಜಿಕ ನಿಲುವನ್ನೇನೂ ಹೊಂದಿರದ ಕಾಂಗ್ರೆಸ್ ನಾಯಕರನ್ನು ಜನರು ತಮ್ಮ ಕಣ್ಣೆದುರಿಗೆ ನೋಡುತ್ತಿದ್ದರು. ಇದನ್ನೆಲ್ಲಾ ಜನರನ್ನು ಮೋಸಗೊಳಿಸಿ ಓಟು ಪಡೆಯಲು ಮಾತ್ರ ಮಾಡಬೇಕೆಂದಿದ್ದಲ್ಲಿ ಅದನ್ನು ಬಿಜೆಪಿ ಇನ್ನೂ ಅದ್ಭುತವಾಗಿ ಮಾಡುತ್ತಿತ್ತು.

ಕಾಂಗ್ರೆಸ್ಸು ಒಂದು ಮಧ್ಯಮಮಾರ್ಗದ ಪಕ್ಷವಾಗಿಯೇ ಉಳಿದುಕೊಳ್ಳುವುದು ಒಳಿತು. ದೆಹಲಿಯಿಂದ ಹಳ್ಳಿಯ ಮೂಲೆಗಳ ತನಕ ಅದಕ್ಕಿರುವ ತಳಹದಿಯನ್ನು ರಾಹುಲ್‍ಗಾಂಧಿಯೂ ಬದಲಿಸುವುದು ಸಾಧ್ಯವಿಲ್ಲ. ಹೊಸ ಅಧ್ಯಕ್ಷೆಗೂ ಸಾಧ್ಯವಿಲ್ಲ.

ಇಲ್ಲಿ ನಿಜಕ್ಕೂ ಸೋಲುಂಡಿದ್ದು ಜನಪರ ಶಕ್ತಿಗಳು. ತಮ್ಮದೇ ಪರ್ಯಾಯವನ್ನು ಸಮಾಜದಲ್ಲಿ ಮತ್ತು ಸಂಸತ್ತಿನಲ್ಲಿ ಕಟ್ಟಲು ಸಾಧ್ಯವಾಗದೇ ಈಗಾಗಲೇ ತಿರಸ್ಕೃತಗೊಂಡಿರುವ ರಾಜಕೀಯ ಪಕ್ಷಗಳೇ ಅದನ್ನು ಮಾಡಲಿ ಎಂದು ಅವು ಬಯಸಿದವು. ಫಲಿತಾಂಶದ ತಕ್ಷಣದ ಶಾಕ್‍ನಿಂದ ಹೊರಬಂದ ಮೇಲಾದರೂ ಆ ನಿಟ್ಟಿನಲ್ಲಿ ಯೋಚಿಸಿ ಸಮಾಜದಲ್ಲೂ, ಸಂಸತ್ತಿನಲ್ಲೂ ಬದಲಾವಣೆ ತರಲು ಬೇಕಾದ ಸುದೀರ್ಘ ಕಷ್ಟಕರ ಪ್ರಯಾಣಕ್ಕೆ ಮುಂದಾದರೆ ಮಾತ್ರ ದೇಶಕ್ಕೆ ಭವಿಷ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...