Homeಮುಖಪುಟಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ : ಪಿ.ಮಹಮದ್

- Advertisement -
- Advertisement -

ದಕ್ಷಿಣ ಕನ್ನಡದ ಪಿ.ಮಹಮ್ಮದ್ ಭಾರತದ ಇಂದಿನ ಪ್ರಮುಖ ಕಾರ್ಟೂನಿಸ್ಟ್‍ಗಳಲ್ಲಿ ಒಬ್ಬರು. ಜನವಾಹಿನಿಯಲ್ಲಿ ಅವರ ಕಾರ್ಟೂನ್‍ಗಳನ್ನು ನೋಡಿ ಓದುಗರು ಅಚ್ಚರಿಗೊಂಡರು. ಕಾರ್ಟೂನ್‍ಗಳಿಗೇ ವಿಶಿಷ್ಟವಾದ ಮೊನಚು ವ್ಯಂಗ್ಯ ಹಾಗೂ ಗೆರೆಗಳ ಆಟದ ಜೊತೆಗೆ ಸ್ಪಷ್ಟ ರಾಜಕೀಯ, ಸಾಮಾಜಿಕ ನಿಲುವು ಮಹಮ್ಮದ್‍ರವರ ವಿಶೇಷತೆ. ಕಲಾವಿದರಿಗೆ ಇರಬೇಕಾದ ಸ್ವಾತಂತ್ರ್ಯದ ಕುರಿತೂ ಅವರದು ಕಟು ನಿಲುವು. ಪ್ರಜಾವಾಣಿ, ವಿಜಯಕರ್ನಾಟಕಗಳಲ್ಲಿ ಕೆಲಸ ಮಾಡಿದ ನಂತರ ಈಗ ಸಂಪೂರ್ಣ ಸ್ವತಂತ್ರರು. ಆಂದೋಲನ, ವಾರ್ತಾಭಾರತಿ ಪತ್ರಿಕೆಗಳ ಜೊತೆಗೆ ಫೇಸ್‍ಬುಕ್‍ನ ಲಕ್ಷಾಂತರ ಓದುಗರು ನಿತ್ಯ ಅವರ ಕಾರ್ಟೂನ್‍ಗೆ ಕಾಯುತ್ತಾರೆ.

ನಾವು ಬದುಕುತ್ತಿರುವ ಕಾಲ ಅನೇಕ ವಿರೋಧಾಭಾಸಗಳಿಂದ ಕೂಡಿದೆ. ಈಗ ಅಭಿವ್ಯಕ್ತಿಸಲು ಮಾಧ್ಯಮಗಳ ಕೊರತೆಯಿಲ್ಲ. ಕೈಯಲ್ಲಿ ಮೊಬೈಲ್ ಇದ್ದರಾಯ್ತು – ನಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಜಗತ್ತಿನ ಯಾವ ಮೂಲೆಗೂ ತಲುಪಿಸಬಹುದು. ಆದರೆ ಅದೇ ಸಾಧನವನ್ನು ಟ್ರಾಲ್‍ಗಳ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಿಕ್ಕೂ ಬಳಸಲಾಗುತ್ತದೆ. ಗುಸುಗುಸು, ವದಂತಿ, ಚಾಡಿ ಮಾತುಗಳು ಇಂಟರ್ನೆಟ್ ಮಾಧ್ಯಮದ ಮೂಲಕ ಬಹುಮುಖ್ಯ ಅಭಿಪ್ರಾಯ ಎಂಬಂತೆ ಬಿತ್ತರಗೊಳ್ಳುತ್ತಿವೆ. ಬರೀ ವಾಟ್ಸಾಪ್ ಫಾರ್ವರ್ಡ್‍ಗಳನ್ನಷ್ಟೇ ನೋಡುವ ಮತ್ತು ಅವುಗಳನ್ನು ನಂಬುವ ದೊಡ್ಡದೊಂದು ಜನವರ್ಗ ಸೃಷ್ಟಿಯಾಗಿದ್ದು ಅವರು ಚುನಾವಣೆಗಳಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದಾಗಿ ಏನೆಲ್ಲಾ ಆಗಬಹುದು ಎಂಬುದನ್ನೂ ನೋಡುತ್ತಾ ಇದ್ದೇವೆ.

ಪ್ರಾಥಮಿಕ ಶಾಲೆಗಳಲ್ಲಿಯೇ ಸತ್ಯಮೇವ ಜಯತೆ ಎಂದು ಪಾಠ ಕೇಳುತ್ತಾ ಬಂದಿದ್ದೇನೆ. ಆದರೆ ಈಗ ಸತ್ಯ ಹೇಳುವುದು ಅತ್ಯಂತ ಕಠಿಣ ಕಾರ್ಯವಾಗಿ ಪರಿಣಮಿಸಿದೆ. ಮೊದಲೆಲ್ಲ ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಹೇಳುವವರನ್ನು ನೋಡಿದ್ದೆವು. ಈಗ ಸತ್ಯದ ತಲೆಯನ್ನೇ ಹಾರಿಸಿ ಸುಳ್ಳು ಹೇಳಲಾಗುತ್ತಿದೆ.

ವೃತ್ತಿಪರ ಕಾರ್ಟೂನಿಸ್ಟ್ ಆಗಿ ಕೆಲಸ ಮಾಡುತ್ತಿರುವ ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಎಂದರೆ ಏನು ಎಂದು ನನ್ನ ವೃತ್ತಿಜೀವನದ ಮೂವ್ವತ್ತು ವರ್ಷಗಳಲ್ಲಿ ಚೆನ್ನಾಗಿ ಮನದಟ್ಟಾಗಿದೆ. ಶಾ ಬಾನು ವಿವಾದ, ಬಾಬರಿ ಮಸೀದಿ ಧ್ವಂಸ ಸಂದರ್ಭಗಳಲ್ಲಿ ನಾನು ರಚಿಸಿದ ಕಾರ್ಟೂನುಗಳಿಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಎದುರಿಸಿದ್ದೇನೆ. ಆದರೆ ಅವುಗಳಿಂದ ನಾನು ಮತ್ತು ನನ್ನಂಥ ಕಾರ್ಟೂನಿಸ್ಟರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಶಕ್ತಿಗೆ ಏನೂ ತೊಂದರೆಯಾಗಿರಲಿಲ್ಲ. 2002ರ ಗುಜರಾತ್ ನರಮೇಧ ನಡೆದಾಗಲೂ ನಾವು ನಮ್ಮ ಮಾಧ್ಯಮವನ್ನು ಬಳಸಿಕೊಂಡು ಆ ಘಟನೆಗಳ ಬಗ್ಗೆ ಓದುಗರಿಗೆ ತಿಳಿಸಬೇಕಾದ್ದನ್ನು ತಿಳಿಸಿದ್ದೆವು.

ಆದರೆ 2014ರ ನಂತರದ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ. ಒಂದು ನಿರ್ದಿಷ್ಟ ರಾಜಕೀಯ ನಾಯಕನ ವಿರುದ್ಧವಾದ ಕಾರ್ಟೂನ್ ರಚಿಸಿದರೆ ರಚಿಸಿದಾತನ ವಿರುದ್ಧ ‘ಟ್ರೋಲ್’ ಕಾಲಾಳುಗಳು ಮುಗಿಬೀಳುತ್ತಾರೆ. ಆತಂಕದ ವಿಷಯವೆಂದರೆ ಈ ಟ್ರೋಲ್‍ಗಳನ್ನು ದುಡ್ಡುಕೊಟ್ಟು ಈ ಉದ್ದೇಶಕ್ಕಾಗಿಯೇ ಇಟ್ಟುಕೊಳ್ಳಲಾಗುತ್ತದೆಯಂತೆ! ಇಂಥದಕ್ಕೆ ಮಣಿಯದವರ ಕುಟುಂಬ ಸದಸ್ಯರ ಮೇಲೇ ದೈಹಿಕ ದಾಳಿ ನಡೆಸುವ ಬೆದರಿಕೆ ಹಾಕಲಾಗುತ್ತದೆ. ಇವುಗಳನ್ನೆಲ್ಲ ಎದುರಿಸಿಯೂ ತಾನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಿಟ್ಟುಕೊಡಲಾರೆ ಎಂದು ಹೇಳಲು ಸಾಕಷ್ಟು ಗಟ್ಟಿಯಾದ ಗುಂಡಿಗೆಯೇ ಬೇಕು. ಆದರೆ ಇಂಥ ಗುಂಡಿಗೆಯವರಿದ್ದರೂ ಅವರಿಗೆ ಮುಕ್ತವಾದ ಕೆಲಸ ಮಾಡಲು ಅವಕಾಶ ನೀಡಬೇಕಾದ ಮಾಧ್ಯಮ ಸಂಸ್ಥೆಗಳಿಗೇ ಧೈರ್ಯದ ಕೊರತೆಯಿರುತ್ತದೆ. ಕಾರ್ಪೊರೇಟ್ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಸರಕಾರವನ್ನು ಎದುರುಹಾಕಿಕೊಳ್ಳಲು ಯಾರೂ ತಯಾರಿಲ್ಲ.

ಪರಿಸ್ಥಿತಿ ಹೀಗಿರುವಾಗ ನನ್ನಂಥ ಸ್ಥಳೀಯ ಭಾಷೆಗಳಲ್ಲಿ ಕೆಲಸ ಮಾಡುವ ಕಾರ್ಟೂನಿಸ್ಟರಿಗೆ ಜೀವನ ನಿರ್ವಹಣೆಗಾಗಿ ದುಡಿಯುವುದೋ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲಿಕ್ಕಾಗಿ ದುಡಿಯುವುದೋ ಎನ್ನುವುದು ಅಕ್ಷರಶಃ ಜೀವನ್ಮರಣದ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಕ್ಷರಶಃ ಜೀವನ್ಮರಣದ ಪ್ರಶ್ನೆ! ನಿಮ್ಮ ಮಾತು ನೂರರಷ್ಟು ನಿಜ. ಆದರೆ, ನಮ್ಮಂಥವರು ನಿಮ್ಮ ವಿಡಂಭನಾತ್ಮಕ ಕಾರ್ಟೂನ್ ಗಳನ್ನು ನೋಡುತ್ತಾ ಬೆಳೆದವರು. ಅನುಸರಿಸಿದವರು. ಎದೆಗುಂದುವ ಹಾಗೆ ಇಲ್ಲ. ನಿಮ್ಮೊಂದಿಗೆ ನಾವುಗಳು ಇದ್ದೇವೆ. ನೀವೇ ಹೇಳಿದ ಹಾಗೆ ಹಿಂದೆಂದಿಗಿಂತಲೂ ನಿಮ್ಮಂಥವರ ಅಗತ್ಯ ಬಹಳವಿದೆ. ಮುಂದುವರೆಸಿ ಸಾರ್…ಸತ್ಯಕ್ಕೆ ತಡವಾಗಿಯಾದರೂ ಗೆಲುವೇ ಇದ್ದೇ ಇರುತ್ತೆ..

  2. ಪಿ.ಮುಹಮ್ಮದ್ ಅವರ ಮಾತುಗಳಲ್ಲಿ ಹುರುಳಿದೆ ,ಇದೆಯಂದು ಎಲ್ಲರಿಗೂ ಗೊತ್ತು ಇದೆ. ಹಾಗೆಂದು ಮಾತು ಆರಂಭಿಸುವವರು ಯಾರು, ಎಂಬುದು ಪ್ರಶ್ನೆ. ಇದಕ್ಕೆ ವ್ಯಂಗ್ಯಚಿತ್ರಗಳೇ ಉತ್ತರಿಸುತ್ತಿದ್ದವು. ಆರ್. ಕೆ..ಲಕ್ಷ್ಮಣ್ರು ನಮ್ಮ ಸೂಪ್ತ ಉತ್ತರಗಳನ್ನು ತಮ್ಮ ವ್ಯಂಗ್ಯಚಿತ್ರಗಳಲ್ಲಿ ಕೊಟ್ಟಂತೆ ಭಾಸವಾಗುತ್ತಿತ್ತು.
    ಇಂದು ಕರ್ನಾಟಕದ ವ್ಯಂಗ್ಯಚಿತ್ರಕಾರರೊಬ್ಬರ ಉದ್ಗಾರಗಳು ಆತಂಕ ತಡಿ ಎಮ್ ನದಾಫ್ ಅಫಜಲಪುರ.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...