Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...