Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...