Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...