Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...