Homeಅಂಕಣಗಳುನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..

ರಾಜ್ಯದ ಹೈಯರ್ ಎಜುಕೇಷನ್ ಮಿನಿಸ್ಟರ್ ‘ಜಟ್ಟಿ ದೆವ್ವೇಗೌಡ’ರ ಕಡೆಯಿಂದ ಕಾಲೇಜು ಸ್ಟೂಡೆಂಟುಗಳಿಗೆ ಬಿಸಿಬಿಸಿ ಸುದ್ದಿಯೊಂದು ಲಭ್ಯವಾಗಿದ್ದು, ಶಿಕ್ಷಣ ಮಂತ್ರಿಯ ಹೊಸ ಹೇಳಿಕೆಗೆ ಹುಡುಗ ಹುಡುಗಿಯರು ಕೆಂಡಾಮಂಡಲರಾಗಿದ್ದಾರೆ. ಆದರೆ ಈ ಮಂತ್ರಿಯ ಹೇಳಿಕೆ ಬ್ಲೂಜೆಪಿ ವಯೋವೃದ್ಧರಿಗೆ ರೋಮಾಂಚನ ಉಂಟುಮಾಡಿದೆ. ‘ಕಾಲೇಜಲ್ಲಿ ಓದೋ ಹುಡುಗ ಹುಡುಗೀರು ಲವ್ವುಗಿವ್ವು ಮಾಡ್ಬೇಡಿ, ಪಾರ್ಕು ಥೇಟ್ರು ಸುತ್ತಬೇಡಿ, ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ’ ಅಂತ ಜಟ್ಟಿ ದೆವ್ವೇಗೌಡರು ಫತ್ವಾ ಹೊರಡಿಸಿದ್ದಾರೆ. ಇದರಿಂದ ಕನಲಿ ಕೆಂಡವಾಗಿರೋ ಕಾಲೇಜು ಯುವಕ ಯುವತಿಯರು “ನಾವು ಲವ್ವಾದ್ರೂ ಮಾಡ್ಕೋತೀವಿ, ಡವ್ವಾದ್ರು ಮಾಡ್ಕೋತೀವಿ, ಮೊದಲು ತಾವು ವಯಸ್ಕರ ಶಿಕ್ಷಣ ಶಾಲೆಗೆ ಸೇರ್ಕೊಂಡು ಹೈಸ್ಕೂಲ್ ಪಾಸಾಗೋದು ನೋಡಿ, ಎಸೆಸೆಲ್ಸಿಯೂ ಪಾಸಾಗದ ಟಪಾಸ್ ಗಿರಾಕಿಗಳು ನಮಗೆ ಬುದ್ದಿವಾದ ಹೇಳೋ ಅವಶ್ಯಕತೆ ಇಲ್ಲ, ಇನ್ನೊಂದ್ಸಲ ಅದು ಮಾಡ್ಬೇಡಿ, ಇದು ಮಾಡ್ಬೇಡಿ ಅಂತ ನಮಗೆ ರೂಲ್ಸ್ ಮಾಡೋಕೆ ಬಂದ್ರೆ ಭಾಷಣ ಮಾಡ್ತಿರೋ ಸ್ಟೇಜಲ್ಲೇ ನಿಮ್ಮ ಪೈಜಾಮ ಎಳೆದು ಅರೆಬೆತ್ತಲೆ ನಿಲ್ಲಿಸ್ತೀವಿ“ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.

******

ABP ನ್ಯೂಸ್ ಚಾನೆಲ್ ಇತ್ತೀಚೆಗೊಂದು ಕುಟುಕು ಕಾರ್ಯಾಚರಣೆ ನಡೆಸಿ ಗೋರಕ್ಷಕರ ಹೆಸರಿನಲ್ಲಿ ಕೊಲೆ ದರೋಡೆ ಮಾಡುತ್ತ ಹಫ್ತಾ ವಸೂಲಿ ದಂಧೆ ನಡೆಸುತ್ತಿದ್ದ ಹೋಪ್ಲೆಸ್ ಹೇತ್ಲಾಂಡಿಗಳನ್ನು ಜನರ ಮುಂದೆ ಬೆತ್ತಲು ಮಾಡಿದೆ. ಮನೆಯಲ್ಲಿ ಹೆಂಡ್ತಿಮಕ್ಕಳಿಗೆ ಎರಡೊತ್ತಿನ ಅನ್ನ ಹಾಕಲು ಯೋಗ್ಯತೆಯಿಲ್ಲದ ಚಿಳ್ಳೆಪಿಳ್ಳೆಗಳೆಲ್ಲ ಗಂಟಲಿಗೊಂದು ಬಾವುಟ ಹೆಟ್ಟಿಕೊಂಡು “ಜೈ ಶ್ರೀ ಮಾಮ್” ಎನ್ನುತ್ತ ಹಸು ದನ ಸಾಕಿದವರ ಮೇಲೆ ಬಿದ್ದು ಸಾಯ ಹೊಡೆದು ಕೊಂದು ಜೈಲು ಸೇರುತ್ತಿವೆ. ಇಂಥದ್ದೇ ಹೀನಾಯ ಸಾಹಸದಲ್ಲಿ ಇಬ್ಬರನ್ನು ಕೊಂದು ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ಎರಡು ಹೇತ್ಲಾಂಡಿ ವೀರರನ್ನು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಬಾಯಿ ಬಿಡಿಸಿದೆ. ಇವರು ಕೋರ್ಟಿನಲ್ಲಿ ‘ನಮಗೇನೂ ಗೊತ್ತಿಲ್ಲ, ಆ ಕೊಲೆಗಳು ನಡೆದ ದಿನ ನಾವು “ಅಂತರರಾಷ್ಟ್ರೀಯ ಗೋಮೂತ್ರ ಸೇವಕರ ದಿನಾಚರಣೆ”ಯಲ್ಲಿ ಭಾಗವಹಿಸಿ ಬಕೇಟಿನಲ್ಲಿ ಗೋಮೂತ್ರ ಕುಡಿಯುತ್ತಿದ್ದೆವು, ಈ ಕೊಲೆಗೂ ನಮಗೂ ಸಂಬಂಧವಿಲ್ಲ’ ಎಂದಿದ್ದರು. ಜಾಮೀನು ಪಡೆದು ಹೊರಬಂದ ಕೂಡಲೆ ಇದ್ದಕ್ಕಿದ್ದಂತೆ ಗಂಡಸರಾದ ಈ ಕೊಲೆಗಡುಕರು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಆ ಕೊಲೆಗಳನ್ನು ಮಾಡಿದ್ದು ನಾವೇ, ನಮ್ ಸಪೋರ್ಟಿಗೆ ಪಿಳ್ಳಜುಟ್ಟು ಪಾರ್ಟಿಯವ್ರು ಇದ್ದಾರೆ, ಇನ್ನೊಂದೆರಡು ಕೊಲೆ ಮಾಡಿ ನೀವು ಸಾಯೋಮಟ ಜೈಲಿಗೆ ಹೋಗಿ, ನಿಮ್ಮ ಮನೆಮಂದಿ ಬಾಯಿಗೆ ಮಣ್ಣು ಹಾಕೋ ಜವಾಬ್ದಾರಿ ನಮ್ದು ಅಂತ ಪಿಳ್ಳಜುಟ್ಟು ಪಾರ್ಟಿಯ ಪುಟಗೋಸಿಗಳು ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ. ತಮ್ಮ ಮನೆಮಕ್ಕಳನ್ನು ಹೈಯರ್ ಎಜುಕೇಷನ್ನಿಗೆ ಹೊರದೇಶಕ್ಕೆ ಕಳಿಸಿ ಅವರ ಬಾಳು ಬಂಗಾರ ಮಾಡುವ ಈ ಪಿಳ್ಳಜುಟ್ಟು ಪುಟಗೋಸಿಗಳು, ತಳ ಸಮುದಾಯದ ಜನರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆದು ಅದರ ಮೇಲೆ ಬಾಳೆಎಲೆ ಹಾಸಿಕೊಂಡು ಪಾಯಸ ನೆಕ್ಕಿಕೊಂಡು ಕುಳಿತುಬಿಡುತ್ತಾರೆಂಬುದು ಬಡ ಸಮುದಾಯಗಳಿಗೆ ಇನ್ನೂ ಅರಿವಾಗಿಲ್ಲವೆಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ‘ಗ್ಯಾಂಗ್ಸ್ ಆಫ್ ವಾಸ್ಸೆಪುರ್’ ಎಂಬ ಚಿತ್ರ ತೆಗೆದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಈ ಭಡವ ರಾಸ್ಕಲ್‍ಗಳ ಬಗ್ಗೆ “ ಗ್ಯಾಂಗ್ಸ್ ಆಫ್ ಗಂಜಳಾಪುರ್” ಎಂಬ ಚಿತ್ರ ತೆಗೆಯಲಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

******

‘ಹಾಳೂರಿಗೆ ಉಳಿದೋನೆ ಐಲುಗಿರಾಕಿ’ ಎನ್ನೋ ಗಾದೆಗೆ ಕರೆಕ್ಟಾಗಿ ಫಿಟ್ ಆಗುವ ‘ಅನಂತ್ ಗಮಾಡ್ ಹೆಗಡೆ’ ಹೋದಲ್ಲಿ ಬಂದಲ್ಲೆಲ್ಲ ಕಯ್ಯಯ್ಯೋ ಕಯ್ಯಯ್ಯೋ ಅನ್ನುತ್ತ ಅತ್ತ ಪಕ್ಷದಿಂದಲೂ, ಇತ್ತ ಜನರಿಂದಲೂ ಸಮಪ್ರಮಾಣದಲ್ಲಿ ಉಗಿಸಿಕೊಂಡು ತಿರುಗುತ್ತಿರುವುದು ನಿಮಗೆಲ್ಲರಿಗೂ ತಿಳಿದಿದೆ. ಹೊಸಾ ವಿಷ್ಯ ಏನಪ್ಪ ಅಂತಂದ್ರೆ.. “ ಬ್ಲೂಜೆಪಿ”ಯವ್ರು ಹುಲಿ ಇದ್ದಂಗೆ ಮಿಕ್ಕಿದೋರೆಲ್ಲ ಜಿಂಕೆ ಪಂಕೆ ಇದ್ದಂಗೆ, ನಮ್ದು ಹಂಗೈತೆ-ಹಿಂಗೈತೆ, ಲೊಟ್ಟೆ-ಲೊಸಕು, ಮಣ್ಣು ಮಸಕು ಅಂತೆಲ್ಲ ಕಯ್ಯಯ್ಯೋ ಅಂದಿದೆ. ಇವೆಲ್ಲವನ್ನು ‘ಅನಿಮಲ್ ಪ್ಲಾನೆಟ್’ ಚಾನೆಲ್‍ನ ನೇರಪ್ರಸಾರದಲ್ಲಿ ನೋಡಿದದವರು ಈ ಟೈಗರ್ ಸ್ಟೋರಿಗೆ ಥರಾವರಿ ಟ್ವಿಸ್ಟುಗಳನ್ನು ಕೊಡುತ್ತಿದ್ದಾರೆ. ಬ್ಲೂಜೆಪಿಯವರು ಟೈಗರ್‍ಗಳಾದರೆ ಮೊದಲು ಬಟ್ಟೆ ಬಿಚ್ಚಿ ಬರೇಬೆತ್ತಲೆ ಓಡಾಡಬೇಕು, ಯಾಕಂದ್ರೆ ಟೈಗರ್‍ಗಳು ಬಟ್ಟೆ ಹಾಕ್ಕಳಲ್ಲ ಅಂತ ಒಬ್ರು ಅಂದಿದ್ದಾರೆ. ತೊಡೆ ಸಂದಿಯಿಂದ ಮೂರಡಿ ಬಾಲ ನೇತಾಡ್ತಿದ್ರೆ ಮಾತ್ರ ಅದು ಟೈಗರ್ ಅನಿಸಿಕೊಳ್ತದೆ, ಆದ್ರಿಂದ ಗಮಾಡ್ ಹೆಗಡೆಗೂ ಒಂದು ಬಾಲ ಸಿಗಿಸಿ ಅದನ್ನವನು ಲಳ ಲಳ ಅಲ್ಲಾಡಿಸಿಕೊಂಡು ಓಡಾಡಬೇಕು, ಅವಾಗಷ್ಟೇ ಟೈಗರ್ ಅಂತ ಕನ್ಸಿಡರ್ ಮಾಡಬಹುದೆಂದು ಮತ್ತೊಬ್ಬರು ಅಂದಿದ್ದಾರೆ. ಇಲ್ಲ, ಇಲ್ಲ, ಟೈಗರ್‍ಗಳು ಹಸಿವಾದರೆ ಪುದೀನ ಕೊತ್ತಂಬರಿ ಸೊಪ್ಪು ತಿನ್ನೋದಿಲ್ಲ, ಅವಕ್ಕೆ ಹಸೀಮಾಂಸವೇ ಆಗಬೇಕು, ಆದ್ದರಿಂದ ಅನಂತ್ ಗಮಾಡ್ ಹೆಗಡೆ ಪಕ್ಷದೋರು ಊರಲ್ಲಿರೋ ಕೋಳಿ ಅಂಗಡಿ, ಮಟನ್ ಅಂಗಡಿಗಳಿಗೆ ಹುಲಿಗಳಂತೆ ಮಂಡಿ ಕೈಗಳನ್ನು ನೆಲಕ್ಕೂರಿ ನಾಲಿಗೆ ಹೊರಚಾಚಿ ನಡೆದುಕೊಂಡು ಹೋಗಿ ಅಲ್ಲಿ ವೇಸ್ಟ್ ಎಂದು ಎಸೆಯುವ ತ್ಯಾಜ್ಯಮಾಂಸವನ್ನು ಕಸದಡಬ್ಬಿಗೆ ಬಾಯಿ ಹಾಕಿ ಕಚಪಚನೆ ತಿನ್ನಬೇಕು, ಆಗಷ್ಟೇ ಇವರೆಲ್ಲ ಹುಲಿಗಳಾಗಲು ಸಾಧ್ಯ ಎಂದು ಜನರು ತರಾವರಿ ಐಡಿಯಾಗಳನ್ನು ಅನಂತ್ ಗಮಾಡ್ ಹೆಗಡೆಗೆ ಕೊಡುತ್ತಿದ್ದಾರೆ. ಅಗಣಿ ಹಾಕೋಕೆ ಹೋಗಿ ಇನ್ನೇನೋ ಸಿಗಿಸಿಕೊಂಡಂತಾಯ್ತಲ್ಲ ಎಂದು ಗಾಬರಿಯಾಗಿರೋ ಗಮಾರ್ ಹೆಗಡೆ ತನ್ನ ರಷ್ಯನ್ ಹೇರ್ ಸ್ಟೈಲ್ ತಲೆಗೂದಲಿಗೆ ಕೇಸರಿ ಕಲರ್ ಹೊಡೆಸಿಕೊಳ್ಳಲು ಕಟಿಂಗ್ ಶಾಪ್‍ಗೆ ಹೋದವರು ಇನ್ನೂ ಮನೆಗೆ ವಾಪಸಾಗಿಲ್ಲ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...