Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...