Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...