Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...