Homeಎಕಾನಮಿಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

- Advertisement -
- Advertisement -

ಭ್ರಷ್ಟಾಚಾರಭರಿತ ಎಲೆಕ್ಟೋರಲ್ ಬಾಂಡ್ ಎಂಬ ಕಾನೂನುಬಾಹಿರ ಬಾಂಡನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ರಿಸರ್ವ್ ಬ್ಯಾಂಕ್ ಮತ್ತು ಚುನಾವಣಾ ಆಯೋಗಗಳು ಈ ಕಣ್‍ಕಟ್ಟಿನ ರಾಜಕೀಯ ನಿಧಿ ಹಂಚಿಕೆಯ ಬಗೆಗೆ ವ್ಯಾಪಕ ಚರ್ಚೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಈ ಕರಾಳಕೃತ್ಯದ ವಿವರಗಳು ಹೊರಬರದಂತೆ ತಡೆಗೋಡೆ ನಿರ್ಮಿಸಿದೆ.
2017ರಲ್ಲಿ ಚುನಾವಣೆಗೆ ನಿಧಿಯನ್ನು ನೀಡುವ ಬಾಂಡ್‍ಗಳ ಬಿಡುಗಡೆಗೆ ಮೊದಲು, ಹಣಕಾಸು ಸಚಿವಾಲಯ ರಿಸರ್ವ್ ಬ್ಯಾಂಕ್‍ನ ಸಲಹೆ ಕೋರಿತ್ತು. ಈ ಬಾಂಡ್‍ಗಳ ಪ್ರಸ್ತಾವನೆಗೆ ರಿಸರ್ವ್ ಬ್ಯಾಂಕ್ ಗಂಭೀರ ವಿರೋಧ ವ್ಯಕ್ತಪಡಿಸಿತ್ತು. ಈ ಚುನಾವಣೆ ಬಾಂಡ್‍ಗಳನ್ನು ಸರ್ಕಾರ ಬಿಡುಗಡೆ ಮಾಡುವುದಾದರೆ ಹಣಕಾಸು ದುವ್ರ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಮತ್ತು ಬಾಂಡುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆ ಮಾಡಿದರೆ ಭಾರತೀಯ ಬ್ಯಾಂಕುಗಳ ಬಗೆಗೆ ನಂಬಿಕೆ ಕಳೆದುಹೋಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿತ್ತು.

“ಈ ಬಾಂಡುಗಳ bearer bond ಜಗಳು. ಅವುಗಳನ್ನು ಬೇರೆಯವರಿಗೆ ವರ್ಗಾವಣೆ ಮಾಡಲೂ ಅವಕಾಶ ಕಲ್ಪಿಸಿರುವುದರಿಂದ ಯಾರು ಹಣವನ್ನು ನೀಡಿದ್ದಾರೆ ಎಂಬುದು ಪತ್ತೆಯಾಗುವುದೇ ಇಲ್ಲ” ಎಂದು ರಿಸರ್ವ್ ಬ್ಯಾಂಕ್ ತಿಳಿಸಿತು. ಆದರೆ ಸರ್ಕಾರ ಆರ್‍ಬಿಐನ ಎಚ್ಚರಿಕೆಯ ಮಾತುಗಳನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಆಗಿನ ಕಂದಾಯ ವಿಭಾಗದ ಕಾರ್ಯದರ್ಶಿಯಾಗಿದ್ದ ಹಸಮುಖ್ ಅಧಿಯ “ರಿಸರ್ವ ಬ್ಯಾಂಕ್ ಸರ್ಕಾರದ ಕಾರ್ಯತಂತ್ರವನ್ನು ಅರ್ಥಮಾಡಿಕೊಂಡಿಲ್ಲ. ಅಲ್ಲದೆ ಫೈನಾನ್ಸ್ ಬಿಲ್ ಅಚ್ಚಾದ ಮೇಲೆ ಈ ಸಲಹೆ ನೀಡಿದೆ. ಈ ವಿಳಂಬ ಸಲಹೆಯನ್ನು ಪರಿಗಣಿಸಲು ಸಾಧ್ಯವಿಲ್ಲ” ಎಂದು ಹೇಳಿ ಆರ್.ಬಿ.ಐ ಸಲಹೆಯನ್ನು ತಳ್ಳಿಹಾಕಿದ್ದರು. 2017 ಫೆಬ್ರವರಿ ಮೊದಲ ತಾರೀಖು ಆಗಿನ ಅರ್ಥಸಚಿವರಾದ ಜೈಟ್ಲಿಯವರು ತಮ್ಮ ಬಜೆಟ್ ಭಾಷಣದಲ್ಲಿ ಚುನಾವಣೆ ಬಾಂಡ್‍ಗಳನ್ನು ಸೃಷ್ಟಿಮಾಡುವ ಪ್ರಸ್ತಾಪ ಮಾಡಿದರು ಹಾಗೂ ರಾಜಕೀಯ ಪಕ್ಷಗಳಿಗೆ ಹಣ ಒದಗಿಸುವ ಪದ್ಧತಿಯಲ್ಲಿ ನುಸುಳಿರುವ ಲೋಪದೋಷಗಳನ್ನು ಅಳಿಸಿಹಾಕುವ ಕಾರಣಕ್ಕಾಗಿ ಈ ಆರ್.ಬಿ.ಐ ತಿದ್ದುಪಡಿ ಬಿಲ್ ಮಾಡಿರುವುದಾಗಿ ಹೇಳಿದರು.
ಅದಾದನಂತರ ಚುನಾವಣೆ ಆಯೋಗವು ಕೂಡಾ ಮೇ 2017ರಲ್ಲಿ ಕಾನೂನು ಇಲಾಖೆ ಮಂತ್ರಾಲಯಕ್ಕೆ ಚುನಾವಣೆ ಬಾಂಡ್ ಬಿಡುಗಡೆ ಮಾಡುವ ಬಗೆಗೆ ಎಚ್ಚರಿಕೆ ನೀಡಿತ್ತು. 2017 ಮೇ 26ರ ಕಾಗದದಲ್ಲಿ “Representation of People Actನ 29 ಸಿ ವಿಧಿಗೆ ಸರ್ಕಾರ ಮಾಡಿರುವ ತಿದ್ದುಪಡಿ ಸರಿಯಲ್ಲ, ಇದು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಹೆಸರುಗಳನ್ನು ಮುಚ್ಚಿಡುವ ಹುನ್ನಾರ” ಎಂದು ಪತ್ರ ಬರೆಯಿತು. ಈ ತಿದ್ದುಪಡಿಯನ್ನು ವಾಪಾಸ್ ಪಡೆಯಿರಿ ಎಂಬ ಸಲಹೆಯನ್ನೂ ನೀಡಿತ್ತು.

ಚುನಾವಣೆ ಆಯೋಗದ ಸೂಚನೆಯನ್ನು ಧಿಕ್ಕರಿಸಿದ ಹಣಕಾಸು ಇಲಾಖೆಯ ರಾಜ್ಯ ಖಾತೆ ಸಚಿವ ಪೊನ್ ರಾಧಾಕೃಷ್ಣನ್ 2018ರ ಚಳಿಗಾಲದ ಪಾರ್ಲಿಮೆಂಟ್ ಅಧಿವೇಶನದಲ್ಲಿ ‘ಈ ವಿಚಾರದಲ್ಲಿ ಚುನಾವಣಾ ಆಯೋಗ ಯಾವುದೇ ಸೂಚನೆ ನೀಡಿಲ್ಲ’ ಎಂದು ತಿಳಿಸಿದರು. Breach of privilege notice ನೀಡಿದಾಗ ಸಚಿವರು ಪಾರ್ಲಿಮೆಂಟಿನ ದಾರಿತಪ್ಪಿಸಲು ಯತ್ನಿಸುತ್ತಿದ್ದಾರೆ ಎಂಬುದು ಬಯಲಿಗೆ ಬಂದಿತ್ತು.

ಮಾರ್ಚ್ 2018ರವರೆಗೆ 6128 ಕೋಟಿ ರೂ. ಮೌಲ್ಯದ ಚುನಾವಣೆ ಬಾಂಡ್‍ಗಳು ಮಾರಾಟವಾಗಿವೆ. ಇದರಲ್ಲಿ ಶೇ.95ರಷ್ಟು ಹಣ ಬಿಜೆಪಿಗೇ ಪಾವತಿಯಾಗಿದೆ. ಚುನಾವಣೆ ಬಾಂಡ್‍ಗಳು ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ, ಒಂದು ಕೋಟಿ ಮೌಲ್ಯಗಳ ಮುಖಬೆಲೆಯಲ್ಲಿ ಬಿಡುಗಡೆ ಆಗಿವೆ. ಭಾರತೀಯ ಸ್ಟೇಟ್ ಬ್ಯಾಂಕ್ ಮಾತ್ರ ಈ ಬಾಂಡ್‍ಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಈ ಬಾಂಡುಗಳನ್ನು ವರ್ಷದಲ್ಲಿ 4 ಸಾರಿ ಮಾತ್ರ ತಲಾ 8-10 ದಿನಗಳ ಅಲ್ಪಾವಧಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ವರ್ಷದಲ್ಲಿ ಮಾತ್ರ ಈ ನಾಲ್ಕು ಅವಧಿಯಲ್ಲದೆ 30 ದಿನಗಳ ಒಂದು ದೀರ್ಘಾವಧಿಯ ವಿಶೇಷ ಮಾರಾಟದ ಅವಕಾಶ ಕಲ್ಪಿಸಲಾಗುವುದು. ಬಾಂಡ್ ಕೊಂಡವರು ಅದನ್ನು ತಮಗೆ ಇಷ್ಟಬಂದ ರಾಜಕೀಯ ಪಕ್ಷಕ್ಕೆ ನೀಡಬಹುದು. ಹಿಂದಿನ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಕನಿಷ್ಠ ಶೇ.1ಕ್ಕಿಂತ ಹೆಚ್ಚು ಮತಗಳಿಸಿದ ಪಕ್ಷಗಳಿಗೆ ಮಾತ್ರ ಈ ಬಾಂಡ್‍ಗಳನ್ನು ನೀಡಬಹುದಾಗಿದೆ. ಬ್ಯಾಂಕ್‍ನಿಂದ ಬಾಂಡ್ ಕೊಂಡುಕೊಂಡ ಹದಿನೈದು ದಿನಗಳ ಒಳಗಾಗಿ ಅದನ್ನು ನಗದು ಮಾಡಿಕೊಳ್ಳಬೇಕು. ಅಂದರೆ ಅಷ್ಟರೊಳಗೆ ಕೊಂಡವರು, ಅದನ್ನು ತಮಗಿಷ್ಟ ಬಂದ ಪಕ್ಷಕ್ಕೆ ಕೊಟ್ಟು, ಆ ಪಕ್ಷ ಅದನ್ನು ಕ್ಯಾಶ್ ಮಾಡಿಕೊಳ್ಳಬೇಕು.
ಈ ಬಾಂಡ್‍ಗಳಲ್ಲಿ ಕ್ರಮಾಂಕ ಸೂಚಿಸಬಾರದೆಂದು ಬಿಜೆಪಿ ಪಕ್ಷ ಸರ್ಕಾರಕ್ಕೆ ಸೂಚಿಸಿತ್ತು. ಬಾಂಡ್‍ಗಳಿಗೆ ಕ್ರಮಸಂಖ್ಯೆ ಹಾಕದಿದ್ದರೆ ಯಾವ ಮೊತ್ತದ ಬಾಂಡ್ ಯಾರ ಕೈಸೇರಿತು ಎಂಬುದು ಗೊತ್ತಾಗುವುದಿಲ್ಲ. ಗೊತ್ತಾಗಬಾರದು ಎಂಬುದೇ ಉದ್ದೇಶ. ಈ ಮೊದಲು ಬೇರೆ ದೇಶದವರು ದೇಣಿಗೆ ಕೊಡಲು ನಿಷೇಧವಿತ್ತು. ಈಗ ಬೇರೆ ದೇಶದವರು ದೇಣಿಗೆ ಕೊಟ್ಟರೂ ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಸರ್ಕಾರ ಸೂಚಿಸಿತ್ತು.

ರಾಜಕೀಯ ಪಕ್ಷಗಳಿಗೆ ತಾವಾಗಿಯೇ ಯಾರೂ ಚುನಾವಣೆಗೆ ಹಣ ನೀಡುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾರ್ಪೊರೇಟ್ ಸಂಸ್ಥೆಗಳಂತೂ ತಮಗೆ ಲಾಭ ಮಾಡಿಕೊಡುವವರಿಗೆ ದೇಣಿಗೆ ಕೂಡುವರೆಂಬುದೂ ಗುಟ್ಟಿನ ವಿಚಾರವೇನಲ್ಲ. ತನಿಖಾ ಇಲಾಖೆ ಹಾಗೂ Regulatory bodyಜಥಿಗಳು ಸರ್ಕಾರವನ್ನು ಬಳಸಿಕೊಂಡು ಕಾರ್ಪೊರೇಟ್ ಕಂಪೆನಿಗಳನ್ನು ಹಣ್ಣು ಮಾಡುವ ವ್ಯವಸ್ಥೆ ಇದ್ದೇಇದೆ. ಆ ಮೂಲಕ ಚುನಾವಣೆಗೆ ಹಣ ತಾನಾಗಿಯೇ ಬಂದುಬೀಳುತ್ತದೆ. ಈ ಸೌಲಭ್ಯ ದೊರೆಯುವುದು ಆಡಳಿತ ಪಕ್ಷಕ್ಕೆ ಮಾತ್ರ.
`ಕಾಮನ್ ಕಾಸ್’ ಸಂಸ್ಥೆ ಸರ್ವೋಚ್ಚ ನ್ಯಾಯಾಲಯದಲ್ಲಿ ಚುನಾವಣೆ ಬಾಂಡ್ ವಿಚಾರವಾಗಿ ಖಟ್ಲೆ ಹೂಡಿದೆ. ರಾಜಕೀಯ ಪಕ್ಷಗಳು ತಮಗೆ ಸಂದಾಯವಾಗಿರುವ ಎಲೆಕ್ಟೋರಲ್ ಬಾಂಡುಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ ಎಂದು ನಿರ್ದೇಶನ ನೀಡಿತ್ತು. ಈ ನಡುವೆ ಚುನಾವಣೆ ಆಯೋಗ ಕೂಡ ನ್ಯಾಯಾಲಯಕ್ಕೆ ಚುನಾವಣಾ ಬಾಂಡ್ ಬಿಡುಗಡೆಯನ್ನು ಪ್ರಶ್ನಿಸಿ ಒಂದು ಅಫಿಡವಿಟ್ ಸಲ್ಲಿಸಿದೆ.

ಸರ್ಕಾರ ಭ್ರಷ್ಟಾಚಾರವನ್ನು ಈ ಕಾನೂನುಬದ್ಧವಾಗಿ ಜಾರಿಗೆ ತಂದಿರುವ ಈ ಚುನಾವಣೆ ಬಾಂಡನ್ನು ಹಿಂತೆಗೆಯಬೇಕೆಂದು ಒತ್ತಾಯ ತರಬೇಕಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ಕೊಡುವ ಕ್ರಮವನ್ನು ಪರಿಶುದ್ಧಗೊಳಿಸುತ್ತೇನೆ ಎಂದೇಳಿದ್ದ ಮೋದಿ ಸರ್ಕಾರ, ಚುನಾವಣಾ ಬಾಂಡ್ ವಿತರಣೆ ಮಾಡುವ ಮೂಲಕ ಕಾರ್ಪೊರೇಟ್ ಕಂಪನಿಗಳ ಕಪ್ಪುಹಣ ಆಡಳಿತ ನಡೆಸುವವರ ಕೈಸೇರುವಂತೆ ವ್ಯವಸ್ಥೆ ಮಾಡಿಕೊಂಡಿದೆ. ತಮ್ಮ ಬಳಿ ಇರುವ ಬ್ಲ್ಯಾಕ್‍ಮನಿಯನ್ನು ಸರ್ಕಾರದ ಚುಕ್ಕಾಣಿ ಹಿಡಿದವರಿಗೆ ಒಪ್ಪಿಸುವ ಕಾರ್ಪೊರೇಟ್ ಕಂಪನಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಅನುಕೂಲವಾಗುತ್ತದೆ. ದೇಣಿಗೆ ಪಡೆದ ಋಣಕ್ಕೆ ಪ್ರತಿಯಾಗಿ ಸರ್ಕಾರದ ಗದ್ದುಗೆ ಏರುವ ರಾಜಕೀಯ ಪಕ್ಷವೂ ಅಂತಹ ಕಂಪನಿಗಳ ಲಾಭಕೋರತನಕ್ಕೆ ಬೆಂಬಲ ನೀಡಬೇಕಾಗುತ್ತದೆ. ಕೊನೆಗೆ ಕತ್ತರಿ ಬೀಳುವುದು ಶ್ರೀಸಾಮಾನ್ಯನ ಜೇಬಿಗೆ!

ಭ್ರಷ್ಟಾಚಾರವನ್ನು ಮಾನ್ಯಮಾಡುವ ಈ ಅನೀತಿಯನ್ನು ಮನಗಂಡು ಸರ್ಕಾರ ಈ ಕೂಡಲೇ ಚುನಾವಣಾ ಬಾಂಡ್ ಸ್ಕೀಮನ್ನು ರದ್ದುಗೊಳಿಸುವಂತೆ ಒತ್ತಾಯಿಸುವುದು ಇಂದಿನ ತುರ್ತಾಗಿದೆ. ಇಲ್ಲವಾದಲ್ಲಿ ಚುನಾವಣೆಗಳಲ್ಲಿ ಸಿದ್ಧಾಂತ, ಜನಪರ ಚಿಂತನೆಗಳು ಶಾಶ್ವತವಾಗಿ ಮೂಲೆಗುಂಪಾಗಿ ಹಣವೇ ಫಲಿತಾಂಶವನ್ನು ಖಾಯಮ್ಮಾಗಿ ನಿರ್ಧರಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...