Homeಕರ್ನಾಟಕಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

ಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ...’

- Advertisement -
- Advertisement -

‘ಶಾಸಕರು (ಮುಂಬೈನಲ್ಲಿರುವವರು) ರಾಜೀನಾಮೆ ನೀಡುವುದನ್ನು ಅಂಗೀಕರಿಸದಿರುವುದು ಅವರ ಬದುಕುವ ಹಕ್ಕನ್ನು ಕಿತ್ತುಕೊಂಡಂತೆ. ಅವರು ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದು….’

ಅರೆ ಇವ್ನಾ, ಅಂದರೆ ಈಗ ರಿಯಲ್ (ಎ)ಸ್ಟೇಟ್‍ಗಾಗಿ ಫೈಟ್ ಮಾಡ್ತಿರೋ ಎಸ್‍ಬಿಎಂ (ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನ), ಎಂಟಿಬಿ ನಾಗರಾಜ್, ವರ್ಷದಿಂದ ಕುಮಟಳ್ಳಿ ಎಳಕೊಂಡು ಜಾರುತ್ತಲೇ ಇದ್ದರೂ ಡೆಸ್ಟಿನೇಷನ್ ತಲುಪಲು ತಿಣುಕಾಡ್ತಿರೋ ಜಾರಕಿಹೊಳಿ, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿಕೊಂಡಿರೋ ಆನಂದಸಿಂಗ್, ಫೇಸ್‍ಬುಕ್‍ನಲ್ಲೇ ಕ್ಷೇತ್ರದ ಜನರ ಸೇವೆ ಮಾಡ್ತೀರೋ ಶಿವರಾಮ್ ಹೆಬ್ಬಾರ್, ಮುಂಬೈ ದಂಧೆ ಮೂಲಕವೇ ಇಲ್ಲಿ ಶಾಸಕರಾಗಿ ಮತ್ತೆ ಮುಂಬೈ ತಲುಪಿರೋ ನಾರಾಯಣಗೌಡ, ನಾಯಕರಿಗೆ ‘ಸಕಲ’ ವ್ಯವಸ್ಥೆ ಮಾಡಬಲ್ಲ ಚತುರ ಸುಧಾಕರ್, ಸಚಿವಗಿರಿ ಸಿಕ್ಕರೂ ಓಡಿ ಹೋಗಿರುವ ಶಂಕರ್, ನಾಗೇಶ್…….ಅಬ್ಬಬ್ಬಾ, ರಾಜೀನಾಮೆ ಸ್ವೀಕರಿಸದೇ ಇದ್ದರೆ ಇವರ ಬದುಕುವ ಹಕ್ಕಿನ ಉಲ್ಲಂಘನೆ ಆಗುತ್ತಾ?

ಅಯ್ಯೋ ಶಿವನೇ, ಇವರೆಲ್ಲ ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದಂತೆ! ‘ಬೇರೆ’ ಅಂದರೆ ಏನರ್ಥ? ಈಗಿರುವ ಶಾಸಕ ‘ವೃತ್ತಿ’ಯಿಂದ ಇನ್ನೊಂದು ದಂಧೆಗೆ ಅಲ್ಲವೇ? ಹಂಗಂದ್ರ, ಶಾಸಕನಾಗಿರುವುದೂ ಒಂದು ವೃತ್ತಿ ಅಂತೀರಾ ರೋಹ್ಟಗಿ ಸಾಹೇಬರೇ? ಇವರ್ಯಾರು ಈಗ ಬೇರೆ ವ್ಯವಹಾರವನ್ನೇ ಮಾಡ್ತಿಲ್ಲವೇ? ಈ ಪುಣ್ಯಾತ್ಮರು ಕ್ಷೇತ್ರವನ್ನೇ ಮರೆತು ಎಲ್ಲೋ ಓಡಿ ಹೋಗಿದ್ದಾರಲ್ಲ, ಅದು ನಮ್ಮ ಅಂದರೆ ಮತದಾರರ ಹಕ್ಕಿನ ಉಲ್ಲಂಘನೆ ಅಲ್ಲವೇ? ನಮಗಂತೂ ಗೊತ್ತಾಗ್ತಿಲ್ಲ. ಬಿಡ್ರಿ, ಅಲ್ಲಿ ಕುಳಿತ ಮೂರ್ಮಂದಿನೇ ತಲೆ ಕೆರೆದುಕೊಂಡು ನಾಳೆವರೆಗೆ ಏನ್ ಹೇಳಕ್ಕಾಗಲ್ಲ ಅಂದವ್ರೆ, ನಮ್ಮಂಥವರಿಗೇನು ಗೊತ್ತಾಗುತ್ತೆ…..

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ…’

ಕರೆಕ್ಟು ವಕೀಲರೇ, ಫೆಬ್ರುವರಿ 11ಕ್ಕೆ ಮೊಟ್ಟೆಯೇ (ಜಾರಕಿ, ಕುಮಟಳ್ಳಿ ಅನರ್ಹತೆ) ಕೈಗೇ ಸಿಕ್ಕಿತ್ತಲ್ಲ್ಲ? ಇಲ್ಲಿವರೆಗೆ ಅದನ್ನ ಕೋಳಿ ಮಾಡೋಕೆ ಹೊರಟಿದ್ದರಾ? ಹುಂಜಗಳ ಸಹವಾಸದಲ್ಲಿ ಮೈಮರೆತು ಬಿಟ್ಟರಾ ನಿಮ್ಮ ಸಾಹೇಬರು…?

‘ಜುಲೈ 5ರಿಂದ 11ರವರೆಗೆ ಸ್ಪೀಕರ್ ಏನ್ ಮಾಡ್ತಿದ್ದರು?  ರಾಜೀನಾಮೆ ಅಂಗೀಕಾರ ಮಾಡೋಕೆ ಅಷಟೊಂದು ಟೈಮ್ ಬೇಕಿತ್ತಾ?’

ಪಟ್ಟಂತ ಡಿಸೈಡ್ ಮಾಡಬಹುದಿತ್ತು. ಆದರೆ ಸ್ಟಡಿ ಮಾಡಬೇಕು, ವಿಚಾರಣೆ ಮಾಡಬೇಕು ಅಲ್ಲವಾ? ಹಂಗೆಲ್ಲ ಏಕಾಏಕಿ ನಿರ್ಧಾರ ತಗೊಳ್ಳಕ್ಕೆ ಸಾಧ್ಯವಾ? ಈಗ ನೋಡಿ ಮುಂಬೈವಾಲಾಗಳು ದೆಹಲಿಗೆ ಅರ್ಜಿ ಸಲ್ಲಿಸಿ ಎಷ್ಟು ದಿನಾ ಆಯ್ತು? ನಿರ್ಧಾರ ತಗೊಳ್ಳಕ್ಕೆ ಆಯ್ತಾ? ತಲೆಕೆಟ್ಟು ಕೆರ ಹಿಡಿದು, ನೀವೇ ಒಂದ್ ಸಲ ಮುಂದಕ್ಕೆ ಹಾಕಿದ್ರಿ. ಇವತ್ ನೋಡಿದ್ರೆ 4 ತಾಸು ವಿಚಾರಣೆ ನಡೆಸಿದರೂ ಮೂರ್ಮಂದಿಗೆ ನಿರ್ಣಯ ತಗಳಕ್ಕೆ ಆಗ್ಲಿಲ್ಲ. ಅಂಥದ್ದರಲ್ಲಿ ಒಬ್ಬರೇ ಸ್ಪೀಕರ್ ಪಟ್ಟಂತ ನಿರ್ಣಯ ಕೈಗೊಳಬೇಕಿತ್ತು ಅನ್ನಾದು ನ್ಯಾಯವೇ ಸ್ವಾಮಿ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...