Homeಕರ್ನಾಟಕಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

ಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ...’

- Advertisement -
- Advertisement -

‘ಶಾಸಕರು (ಮುಂಬೈನಲ್ಲಿರುವವರು) ರಾಜೀನಾಮೆ ನೀಡುವುದನ್ನು ಅಂಗೀಕರಿಸದಿರುವುದು ಅವರ ಬದುಕುವ ಹಕ್ಕನ್ನು ಕಿತ್ತುಕೊಂಡಂತೆ. ಅವರು ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದು….’

ಅರೆ ಇವ್ನಾ, ಅಂದರೆ ಈಗ ರಿಯಲ್ (ಎ)ಸ್ಟೇಟ್‍ಗಾಗಿ ಫೈಟ್ ಮಾಡ್ತಿರೋ ಎಸ್‍ಬಿಎಂ (ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನ), ಎಂಟಿಬಿ ನಾಗರಾಜ್, ವರ್ಷದಿಂದ ಕುಮಟಳ್ಳಿ ಎಳಕೊಂಡು ಜಾರುತ್ತಲೇ ಇದ್ದರೂ ಡೆಸ್ಟಿನೇಷನ್ ತಲುಪಲು ತಿಣುಕಾಡ್ತಿರೋ ಜಾರಕಿಹೊಳಿ, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿಕೊಂಡಿರೋ ಆನಂದಸಿಂಗ್, ಫೇಸ್‍ಬುಕ್‍ನಲ್ಲೇ ಕ್ಷೇತ್ರದ ಜನರ ಸೇವೆ ಮಾಡ್ತೀರೋ ಶಿವರಾಮ್ ಹೆಬ್ಬಾರ್, ಮುಂಬೈ ದಂಧೆ ಮೂಲಕವೇ ಇಲ್ಲಿ ಶಾಸಕರಾಗಿ ಮತ್ತೆ ಮುಂಬೈ ತಲುಪಿರೋ ನಾರಾಯಣಗೌಡ, ನಾಯಕರಿಗೆ ‘ಸಕಲ’ ವ್ಯವಸ್ಥೆ ಮಾಡಬಲ್ಲ ಚತುರ ಸುಧಾಕರ್, ಸಚಿವಗಿರಿ ಸಿಕ್ಕರೂ ಓಡಿ ಹೋಗಿರುವ ಶಂಕರ್, ನಾಗೇಶ್…….ಅಬ್ಬಬ್ಬಾ, ರಾಜೀನಾಮೆ ಸ್ವೀಕರಿಸದೇ ಇದ್ದರೆ ಇವರ ಬದುಕುವ ಹಕ್ಕಿನ ಉಲ್ಲಂಘನೆ ಆಗುತ್ತಾ?

ಅಯ್ಯೋ ಶಿವನೇ, ಇವರೆಲ್ಲ ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದಂತೆ! ‘ಬೇರೆ’ ಅಂದರೆ ಏನರ್ಥ? ಈಗಿರುವ ಶಾಸಕ ‘ವೃತ್ತಿ’ಯಿಂದ ಇನ್ನೊಂದು ದಂಧೆಗೆ ಅಲ್ಲವೇ? ಹಂಗಂದ್ರ, ಶಾಸಕನಾಗಿರುವುದೂ ಒಂದು ವೃತ್ತಿ ಅಂತೀರಾ ರೋಹ್ಟಗಿ ಸಾಹೇಬರೇ? ಇವರ್ಯಾರು ಈಗ ಬೇರೆ ವ್ಯವಹಾರವನ್ನೇ ಮಾಡ್ತಿಲ್ಲವೇ? ಈ ಪುಣ್ಯಾತ್ಮರು ಕ್ಷೇತ್ರವನ್ನೇ ಮರೆತು ಎಲ್ಲೋ ಓಡಿ ಹೋಗಿದ್ದಾರಲ್ಲ, ಅದು ನಮ್ಮ ಅಂದರೆ ಮತದಾರರ ಹಕ್ಕಿನ ಉಲ್ಲಂಘನೆ ಅಲ್ಲವೇ? ನಮಗಂತೂ ಗೊತ್ತಾಗ್ತಿಲ್ಲ. ಬಿಡ್ರಿ, ಅಲ್ಲಿ ಕುಳಿತ ಮೂರ್ಮಂದಿನೇ ತಲೆ ಕೆರೆದುಕೊಂಡು ನಾಳೆವರೆಗೆ ಏನ್ ಹೇಳಕ್ಕಾಗಲ್ಲ ಅಂದವ್ರೆ, ನಮ್ಮಂಥವರಿಗೇನು ಗೊತ್ತಾಗುತ್ತೆ…..

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ…’

ಕರೆಕ್ಟು ವಕೀಲರೇ, ಫೆಬ್ರುವರಿ 11ಕ್ಕೆ ಮೊಟ್ಟೆಯೇ (ಜಾರಕಿ, ಕುಮಟಳ್ಳಿ ಅನರ್ಹತೆ) ಕೈಗೇ ಸಿಕ್ಕಿತ್ತಲ್ಲ್ಲ? ಇಲ್ಲಿವರೆಗೆ ಅದನ್ನ ಕೋಳಿ ಮಾಡೋಕೆ ಹೊರಟಿದ್ದರಾ? ಹುಂಜಗಳ ಸಹವಾಸದಲ್ಲಿ ಮೈಮರೆತು ಬಿಟ್ಟರಾ ನಿಮ್ಮ ಸಾಹೇಬರು…?

‘ಜುಲೈ 5ರಿಂದ 11ರವರೆಗೆ ಸ್ಪೀಕರ್ ಏನ್ ಮಾಡ್ತಿದ್ದರು?  ರಾಜೀನಾಮೆ ಅಂಗೀಕಾರ ಮಾಡೋಕೆ ಅಷಟೊಂದು ಟೈಮ್ ಬೇಕಿತ್ತಾ?’

ಪಟ್ಟಂತ ಡಿಸೈಡ್ ಮಾಡಬಹುದಿತ್ತು. ಆದರೆ ಸ್ಟಡಿ ಮಾಡಬೇಕು, ವಿಚಾರಣೆ ಮಾಡಬೇಕು ಅಲ್ಲವಾ? ಹಂಗೆಲ್ಲ ಏಕಾಏಕಿ ನಿರ್ಧಾರ ತಗೊಳ್ಳಕ್ಕೆ ಸಾಧ್ಯವಾ? ಈಗ ನೋಡಿ ಮುಂಬೈವಾಲಾಗಳು ದೆಹಲಿಗೆ ಅರ್ಜಿ ಸಲ್ಲಿಸಿ ಎಷ್ಟು ದಿನಾ ಆಯ್ತು? ನಿರ್ಧಾರ ತಗೊಳ್ಳಕ್ಕೆ ಆಯ್ತಾ? ತಲೆಕೆಟ್ಟು ಕೆರ ಹಿಡಿದು, ನೀವೇ ಒಂದ್ ಸಲ ಮುಂದಕ್ಕೆ ಹಾಕಿದ್ರಿ. ಇವತ್ ನೋಡಿದ್ರೆ 4 ತಾಸು ವಿಚಾರಣೆ ನಡೆಸಿದರೂ ಮೂರ್ಮಂದಿಗೆ ನಿರ್ಣಯ ತಗಳಕ್ಕೆ ಆಗ್ಲಿಲ್ಲ. ಅಂಥದ್ದರಲ್ಲಿ ಒಬ್ಬರೇ ಸ್ಪೀಕರ್ ಪಟ್ಟಂತ ನಿರ್ಣಯ ಕೈಗೊಳಬೇಕಿತ್ತು ಅನ್ನಾದು ನ್ಯಾಯವೇ ಸ್ವಾಮಿ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...