Homeಕರ್ನಾಟಕಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

ಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ...’

- Advertisement -
- Advertisement -

‘ಶಾಸಕರು (ಮುಂಬೈನಲ್ಲಿರುವವರು) ರಾಜೀನಾಮೆ ನೀಡುವುದನ್ನು ಅಂಗೀಕರಿಸದಿರುವುದು ಅವರ ಬದುಕುವ ಹಕ್ಕನ್ನು ಕಿತ್ತುಕೊಂಡಂತೆ. ಅವರು ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದು….’

ಅರೆ ಇವ್ನಾ, ಅಂದರೆ ಈಗ ರಿಯಲ್ (ಎ)ಸ್ಟೇಟ್‍ಗಾಗಿ ಫೈಟ್ ಮಾಡ್ತಿರೋ ಎಸ್‍ಬಿಎಂ (ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನ), ಎಂಟಿಬಿ ನಾಗರಾಜ್, ವರ್ಷದಿಂದ ಕುಮಟಳ್ಳಿ ಎಳಕೊಂಡು ಜಾರುತ್ತಲೇ ಇದ್ದರೂ ಡೆಸ್ಟಿನೇಷನ್ ತಲುಪಲು ತಿಣುಕಾಡ್ತಿರೋ ಜಾರಕಿಹೊಳಿ, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿಕೊಂಡಿರೋ ಆನಂದಸಿಂಗ್, ಫೇಸ್‍ಬುಕ್‍ನಲ್ಲೇ ಕ್ಷೇತ್ರದ ಜನರ ಸೇವೆ ಮಾಡ್ತೀರೋ ಶಿವರಾಮ್ ಹೆಬ್ಬಾರ್, ಮುಂಬೈ ದಂಧೆ ಮೂಲಕವೇ ಇಲ್ಲಿ ಶಾಸಕರಾಗಿ ಮತ್ತೆ ಮುಂಬೈ ತಲುಪಿರೋ ನಾರಾಯಣಗೌಡ, ನಾಯಕರಿಗೆ ‘ಸಕಲ’ ವ್ಯವಸ್ಥೆ ಮಾಡಬಲ್ಲ ಚತುರ ಸುಧಾಕರ್, ಸಚಿವಗಿರಿ ಸಿಕ್ಕರೂ ಓಡಿ ಹೋಗಿರುವ ಶಂಕರ್, ನಾಗೇಶ್…….ಅಬ್ಬಬ್ಬಾ, ರಾಜೀನಾಮೆ ಸ್ವೀಕರಿಸದೇ ಇದ್ದರೆ ಇವರ ಬದುಕುವ ಹಕ್ಕಿನ ಉಲ್ಲಂಘನೆ ಆಗುತ್ತಾ?

ಅಯ್ಯೋ ಶಿವನೇ, ಇವರೆಲ್ಲ ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದಂತೆ! ‘ಬೇರೆ’ ಅಂದರೆ ಏನರ್ಥ? ಈಗಿರುವ ಶಾಸಕ ‘ವೃತ್ತಿ’ಯಿಂದ ಇನ್ನೊಂದು ದಂಧೆಗೆ ಅಲ್ಲವೇ? ಹಂಗಂದ್ರ, ಶಾಸಕನಾಗಿರುವುದೂ ಒಂದು ವೃತ್ತಿ ಅಂತೀರಾ ರೋಹ್ಟಗಿ ಸಾಹೇಬರೇ? ಇವರ್ಯಾರು ಈಗ ಬೇರೆ ವ್ಯವಹಾರವನ್ನೇ ಮಾಡ್ತಿಲ್ಲವೇ? ಈ ಪುಣ್ಯಾತ್ಮರು ಕ್ಷೇತ್ರವನ್ನೇ ಮರೆತು ಎಲ್ಲೋ ಓಡಿ ಹೋಗಿದ್ದಾರಲ್ಲ, ಅದು ನಮ್ಮ ಅಂದರೆ ಮತದಾರರ ಹಕ್ಕಿನ ಉಲ್ಲಂಘನೆ ಅಲ್ಲವೇ? ನಮಗಂತೂ ಗೊತ್ತಾಗ್ತಿಲ್ಲ. ಬಿಡ್ರಿ, ಅಲ್ಲಿ ಕುಳಿತ ಮೂರ್ಮಂದಿನೇ ತಲೆ ಕೆರೆದುಕೊಂಡು ನಾಳೆವರೆಗೆ ಏನ್ ಹೇಳಕ್ಕಾಗಲ್ಲ ಅಂದವ್ರೆ, ನಮ್ಮಂಥವರಿಗೇನು ಗೊತ್ತಾಗುತ್ತೆ…..

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ…’

ಕರೆಕ್ಟು ವಕೀಲರೇ, ಫೆಬ್ರುವರಿ 11ಕ್ಕೆ ಮೊಟ್ಟೆಯೇ (ಜಾರಕಿ, ಕುಮಟಳ್ಳಿ ಅನರ್ಹತೆ) ಕೈಗೇ ಸಿಕ್ಕಿತ್ತಲ್ಲ್ಲ? ಇಲ್ಲಿವರೆಗೆ ಅದನ್ನ ಕೋಳಿ ಮಾಡೋಕೆ ಹೊರಟಿದ್ದರಾ? ಹುಂಜಗಳ ಸಹವಾಸದಲ್ಲಿ ಮೈಮರೆತು ಬಿಟ್ಟರಾ ನಿಮ್ಮ ಸಾಹೇಬರು…?

‘ಜುಲೈ 5ರಿಂದ 11ರವರೆಗೆ ಸ್ಪೀಕರ್ ಏನ್ ಮಾಡ್ತಿದ್ದರು?  ರಾಜೀನಾಮೆ ಅಂಗೀಕಾರ ಮಾಡೋಕೆ ಅಷಟೊಂದು ಟೈಮ್ ಬೇಕಿತ್ತಾ?’

ಪಟ್ಟಂತ ಡಿಸೈಡ್ ಮಾಡಬಹುದಿತ್ತು. ಆದರೆ ಸ್ಟಡಿ ಮಾಡಬೇಕು, ವಿಚಾರಣೆ ಮಾಡಬೇಕು ಅಲ್ಲವಾ? ಹಂಗೆಲ್ಲ ಏಕಾಏಕಿ ನಿರ್ಧಾರ ತಗೊಳ್ಳಕ್ಕೆ ಸಾಧ್ಯವಾ? ಈಗ ನೋಡಿ ಮುಂಬೈವಾಲಾಗಳು ದೆಹಲಿಗೆ ಅರ್ಜಿ ಸಲ್ಲಿಸಿ ಎಷ್ಟು ದಿನಾ ಆಯ್ತು? ನಿರ್ಧಾರ ತಗೊಳ್ಳಕ್ಕೆ ಆಯ್ತಾ? ತಲೆಕೆಟ್ಟು ಕೆರ ಹಿಡಿದು, ನೀವೇ ಒಂದ್ ಸಲ ಮುಂದಕ್ಕೆ ಹಾಕಿದ್ರಿ. ಇವತ್ ನೋಡಿದ್ರೆ 4 ತಾಸು ವಿಚಾರಣೆ ನಡೆಸಿದರೂ ಮೂರ್ಮಂದಿಗೆ ನಿರ್ಣಯ ತಗಳಕ್ಕೆ ಆಗ್ಲಿಲ್ಲ. ಅಂಥದ್ದರಲ್ಲಿ ಒಬ್ಬರೇ ಸ್ಪೀಕರ್ ಪಟ್ಟಂತ ನಿರ್ಣಯ ಕೈಗೊಳಬೇಕಿತ್ತು ಅನ್ನಾದು ನ್ಯಾಯವೇ ಸ್ವಾಮಿ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...