Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...