Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...