Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...