Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...