Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...