Homeಚಳವಳಿಓ ಸರ್ಕಾರವೇ, ಇತ್ತ ಗಮನ ಕೊಡು

ಓ ಸರ್ಕಾರವೇ, ಇತ್ತ ಗಮನ ಕೊಡು

- Advertisement -
ನೂರ್ ಶ್ರೀಧರ್  |
ಫಲಿತಾಂಶ ಹೊರಬಿದ್ದಿದೆ. ಮತಾಂಧ ಶಕ್ತಿಗಳು ಮೊದಲ ಸ್ಥಾನದಲ್ಲಿ ಬಂದು ನಿಂತಿವೆ. ‘ಜಾತ್ಯತೀತ’ ಎಂದು ಕರೆದುಕೊಳ್ಳುವ ಮಿಶ್ರ ಸರ್ಕಾರದ ರಚನೆಯ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಲೋಕಸಭಾ ಚುನಾವಣೆಗಳು ಕೂಗಳತೆಯ ದೂರದಲ್ಲಿವೆ.  ಕಳೆದ 4 ವರ್ಷಗಳಲ್ಲಿ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಮೂಲಕ ನೀಡಿರುವ ಆಳ್ವಿಕೆ ಮತ್ತು 2009 – 2013ರ ಅವಧಿಯ ಅದರ ಕರ್ನಾಟಕ ಆಳ್ವಿಕೆ ಭಾರತದ ಇತಿಹಾಸದಲ್ಲೇ ಅತ್ಯಂತ ಜನವಿರೋಧಿ ಆಳ್ವಿಕೆಗಳಾಗಿವೆ. ನಾಡಿನ ಸಂಪತ್ತನ್ನು ಬಾಚಲು ಗಣಿದಣಿಗಳಿಗೆ ನೆರವಾಗುವ, ಜನ ಸಾಮಾನ್ಯರ ದುಡಿಮೆಯ ಫಲವನ್ನು ದೋಚಲು ಕಾರ್ಪೋರೇಟ್ ಶಕ್ತಿಗಳಿಗೆ ರತ್ನಗಂಬಳಿ ಹಾಕಿಕೊಟ್ಟಿದೆ. ಇದಕ್ಕೆ ಅನೇಕ ಉದಾಹರಣೆಗಳನ್ನು ನೀಡಬಹುದು. ಆರ್ಥಿಕ ನೀತಿಗಳಲ್ಲಿ ಒಂದಷ್ಟು ಸಾಮ್ಯತೆಗಳಿದ್ದರೂ ಕಾಂಗ್ರೆಸ್ ಜನಸಾಮಾನ್ಯರ ವಿಚಾರದಲ್ಲಿ ಒಂದಷ್ಟು ಮೃದು ಧೋರಣೆಯನ್ನು ಅಳವಡಿಸಿದೆ ಹಾಗೂ ಒಂದಿಷ್ಟು ಸಮಾಜ ಕಲ್ಯಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ವಾಸ್ತವ ಹೀಗಿದ್ದರೂ ಕಾಂಗ್ರೆಸ್ ಪಕ್ಷವನ್ನು ಭ್ರಷ್ಟ, ಜಾತಿವಾದಿ, ಸ್ವಜನ ಪಕ್ಷಪಾತಿ ಪಕ್ಷ ಎಂಬಂತೆ ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸಿವೆ. ಅದೇ ಸಂದರ್ಭದಲ್ಲಿ ಬಿಜೆಪಿ ಅಭಿವೃದ್ಧಿಪರ, ದೇಶಪರ, ಹಿಂದುಪರ ಪಕ್ಷದಂತೆಯೂ ಸುಳ್ಳನ್ನು ಸತ್ಯವೆಂಬಂತೆ ನಂಬಿಸುವ ಸಂಘ ಪರಿವಾರದ ಪ್ರಚಾರಕ್ಕೆ ಮಾಧ್ಯಮಗಳೂ ದೊಡ್ಡ ದನಿಯ ಪ್ರಚಾರ ಕೊಟ್ಟಿವೆ. ವಾಸ್ತವಾಂಶಗಳನ್ನು ಜನರಿಗೆ ತಲುಪಿಸುವುದರಲ್ಲಿ ಕಾಂಗ್ರೆಸ್‍ನ ವೈಫಲ್ಯ ಕೂಡ ಎದ್ದು ಕಾಣುತ್ತಿದೆ.
ಹೊಸ ಸರ್ಕಾರ ರಚಿಸುವುದರಲ್ಲಿ ನಾಟಕೀಯ ರಾಜಕೀಯ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು, ಹುದ್ದೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಅಂತೂ ಯಾವುದೋ ಒಂದು ಸರ್ಕಾರ ಬರಲಿದೆ. ಯಾವುದೇ ಸರ್ಕಾರ ಬಂದರೂ ರಾಜ್ಯದ ಜನತೆಯ ಹಿತಾಸಕ್ತಿಯ ದೃಷ್ಟಿಯಿಂದ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕಾದ ಪ್ರಮುಖ ಅಂಶಗಳು ಯಾವುವು ಎಂಬುದು ನಮ್ಮ ಮುಂದಿರುವ ಪ್ರಶ್ನೆ.
1. ಕೃಷಿ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕುವ ಪ್ರಾಮಾಣಿಕ ಪ್ರಯತ್ನವಾಗಬೇಕು. ಕೃಷಿ ಬಿಕ್ಕಟ್ಟು ಪರಿಹಾರವಾಗಬೇಕಾದರೆ ಕೃಷಿ ವೆಚ್ಚ ಕಡಿಮೆಯಾಗಬೇಕು, ಕೃಷಿ ಆದಾಯ ನಿಶ್ಚಿತಗೊಳ್ಳಬೇಕು. ಕೃಷಿ ವೆಚ್ಚ ತಗ್ಗಿಸಬೇಕಾದರೆ ಸಹಕಾರಿ ಹಾಗೂ ಸಹಜ ಕೃಷಿಯನ್ನು ಉತ್ತೇಜಿಸಲು ವಿಶೇಷ ಪ್ಯಾಕೇಜನ್ನು ಜಾರಿಗೆ ತರಬೇಕು. ಅಲ್ಲದೆ ಬೀಜ, ಗೊಬ್ಬರ, ರಾಸಾಯನಿಕ ಇತ್ಯಾದಿ ಒಳಸುರಿಗಳ ಮೇಲಿನ, ಕೃಷಿ ಯಂತ್ರೋಪಕರಣಗಳ ಮೇಲಿನ ಹಾಗೂ ಕೃಷಿ ಮಾರುಕಟ್ಟೆ ಮೇಲಿನ ಕಾರ್ಪೋರೇಟ್ – ದಲ್ಲಾಳಿ ಹಿಡಿತ ತಪ್ಪಿ ಬೆಲೆಗಳು ನಿಯಂತ್ರಣಕ್ಕೆ ಬರಬೇಕು. ಜೊತೆಗೆ ಇದುವರೆತನಕ ಸರ್ಕಾರಗಳು ಅಳವಡಿಸಿದ ರೈತ ವಿರೋಧಿ – ಕಾರ್ಪೋರೇಟ್ ಪರ ನೀತಿಗಳಿಂದಾಗಿ ರೈತರಿಗೆ ಆಗಿರುವ ನಷ್ಟವನ್ನು ಸಂಪೂರ್ಣ ಸಾಲ ಮನ್ನಾದ ರೂಪದಲ್ಲಾದರೂ ತುಂಬಿಕೊಡಬೇಕು.
2. ಓದಿದರೂ ಉದ್ಯೋಗವಿಲ್ಲದ ಕಡೆ ಸಾಗುತ್ತಿರುವ ಅಂಧಕಾರಿ ಭವಿಷ್ಯದಲ್ಲಿ ದೀಪ ಬೆಳಗುವಂತೆ ಮಾಡಬೇಕು. ಉದ್ಯೋಗ ಸೃಷ್ಟಿ ಸರ್ಕಾರದ ಎರಡನೇ ಪರಮೋಚ್ಛ ಕರ್ತವ್ಯವಾಗಬೇಕು. “ಉದ್ಯೋಗಕ್ಕಾಗಿ ಯುವಜನರು” ಮುಂದಿಟ್ಟ ಯುವ ಪ್ರಣಾಳಿಕೆ ಸೂಚಿಸುವ ರೀತಿಯಲ್ಲಿ “ಉದ್ಯೋಗ ಆಯೋಗ”ವೊಂದನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ವಿಧಾನ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲೇಬೇಕಾದ ಅಧಿಕಾರ ಇರಬೇಕು. ಹಾಲಿ ಚಾಲ್ತಿಯಲ್ಲಿರುವ ಉದ್ಯೋಗ ಕಡಿತದ ಮಾದರಿಯ ಬದಲು ಉದ್ಯೋಗ ಸೃಷ್ಟಿಯ ಮಾದರಿ ಅಭಿವೃದ್ಧಿಗೊಳ್ಳುವಂತೆ ಮಾಡಬೇಕು.
3. ಕೆಲಸ ಸಿಕ್ಕರೆ ಸಾಲದು, ನೆಮ್ಮದಿಯ ಬದುಕಿಗೆ ಉದ್ಯೋಗ ಭದ್ರತೆ ಖಾತ್ರಿಯಾಗಬೇಕು, ದುಡಿಮೆಗೆ ತಕ್ಕ ಪ್ರತಿಫಲ ಲಭ್ಯವಾಗಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಂಟ್ರಾಕ್ಟ್ ಪದ್ದತಿ ಶಾಶ್ವತೀಕರಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವೂ ಹೋರಾಡಬೇಕು. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಕಂಟ್ರಾಕ್ಟ್ ಪದ್ದತಿಯನ್ನು ತೆಗೆದುಹಾಕಬೇಕು. ಉಚ್ಛ ನ್ಯಾಯಾಲಯವೇ ಅನೇಕ ಬಾರಿ ಎಚ್ಚರಿಸಿರುವ ಕನಿಷ್ಟ ವೇತನವನ್ನು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಬೇಕು.
4. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಖಾಸಗೀ ಹಿಡಿತ ಹಾಗೂ ಸುಲಿಗೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಮತ್ತು ಉಚಿತ ಹಾಗೂ ಉಚ್ಛ ಸರ್ಕಾರಿ ಶಿಕ್ಷಣ ಮತ್ತು ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು.
5. ಬಡವರ ಬಹುತೇಕ ದುಡಿಮೆಯನ್ನೆಲ್ಲಾ ಬಾಟಲಿ ದಣಿಗಳ ಪಾಲಾಗಿಸುತ್ತಿರುವ ಹಾಗೂ ಯುವಜನರನ್ನು ದುಷ್ಟಚಟದ ದಾಸರನ್ನಾಗಿಸುತ್ತಿರುವ ಮಧ್ಯಪಾನವನ್ನು ನಿಶೇಧಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಕ್ಕಬೇಕು. ಕನಿಷ್ಟ ಮೊದಲ ಹಂತವಾಗಿ ಮಧ್ಯವ್ಯಸನ ತಗ್ಗಿಸುವ ಟಾರ್ಗೆಟ್ ಹಾಕಿ ಫಲಿತಾಂಶ ತೋರಬೇಕು. ಇಡೀ ದೇಶದಲ್ಲಿ ಏಕ ಕಾಲದಲ್ಲಿ ಮಧ್ಯಪಾನ ನಿಷೇಧಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.
6. ಧಾರ್ಮಿಕ ಸಹಬಾಳ್ವೆಯನ್ನು ಉತ್ತೇಜಿಸಬೇಕು. ಧಾರ್ಮಿಕ ದ್ವೇಷ, ಸಾಂಸ್ಕøತಿಕ ಅಸಹನೆ, ಆಹಾರ ಪದ್ದತಿಗಳ ಹೇರಿಕೆಯಂತಹ ಕ್ರಮಗಳನ್ನು ಪ್ರಚೋದಿಸುವ ಸಂಘ ಸಂಸ್ಥೆಗಳನ್ನು ನಿಷೇಧಿಸಬೇಕು.
7. ಮೀಸಲಾತಿಯಂತಹ ಸಂಕೀರ್ಣ ಸಮಸ್ಯೆಗಳಿಗೆ ಸಮಗ್ರ ಉತ್ತರ ಕಂಡುಕೊಳ್ಳಲು ಕಾಲಮಿತಿಯೊಳಗೆ ಪರಿಹಾರ ಸೂಚಿಸುವ ಸಾಮಾಜಿಕ ಮನ್ನಣೆ ಹೊಂದಿರುವ ಸಮಿತಿಯನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ದಿಟ್ಟವಾಗಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಖಾತ್ರಿಗೊಳಸಿಬೇಕು ಮತ್ತು ಸಾಮಾಜಿಕ ಕಲಹಕ್ಕೆ ಕೊನೆ ಹಾಡಬೇಕು.
8. ಅಲ್ಪಸಂಖ್ಯಾತರ ಸ್ಥಿತಿಗತಿಯಲ್ಲಿ ಬದಲಾವಣೆ ತರಲು ಈಗಾಗಲೇ ಸಾಚಾರ್ ಕಮಿಟಿಯ ಸೂಕ್ಷ್ಮಮತಿ ಶಿಫಾರಸುಗಳು ಇರುವುದರಿಂದ ಅವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು.
9. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಅಭಿಯಾನ ಆರಂಭಿಸಬೇಕು. ಅವರ ಸ್ವಾವಲಂಬಿ ಶಕ್ತಿ ವೃದ್ಧಿಸುವಂತೆ ಮಾಡಲು ಹಾಗೂ ಅವರ ಸ್ಥಾನ ಮತ್ತು ಹಕ್ಕಿನ ಬಗ್ಗೆ ಪ್ರಜ್ಞೆ ಸಾಮಾಜಿಕ ಪ್ರಜ್ಞೆ ಹೆಚ್ಚಾಗುವಂತೆ ಮಾಡಲು ಸಾಮಾಜಿಕ ಅಭಿಯಾನ ಆರಂಭಿಸಬೇಕು. ಸಾಮಾಜಿಕ ಸಂಘ ಸಂಸ್ಥೆಗಳನ್ನು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
10. ನಿರ್ಲಕ್ಷಿತರಲ್ಲಿ ನಿರ್ಲಕ್ಷಿತರಾಗಿ ಬದುಕುತ್ತಿರುವ ತೃತೀಯ ಲಿಂಗೀಯರು, ವಿಕಲಚೇತನರು, ವೇಶ್ಯೆಯರು, ವೃದ್ಧರು ಹಾಗೂ ನಿರಾಶ್ರಿತರ ಬಗ್ಗೆ ಅಂತಃಕರಣವುಳ್ಳ ಪುನರ್ವಸತಿ ಕ್ರಮಗಳನ್ನು ಆಚರಣೆಗೆ ತರಬೇಕು.
ಇದೆಲ್ಲವನ್ನು ಮಾಡಲೇಬೇಕು. ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವಂತೆ ಮಾಡುವ ನಿಟ್ಟಿನಲ್ಲಿ ನಮ್ಮ ಹೋರಾಟಗಳು  ನಡೆಯಬೇಕಿದೆ.   ಜನಪರ ಆಳ್ವಿಕೆ ನೀಡುವುದು ಜಾತ್ಯತೀತ ಪಕ್ಷಗಳ ಉಳಿವು ಮತ್ತು ಬೆಳವಣಿಗೆಗೆ ಹೇಗೆ ಪೂರ್ವ ಶರತ್ತೋ ಹಾಗೆಯೇ ನಿಜವಾದ ಜನಪರ ಶಕ್ತಿಗಳು ಪರ್ಯಾಯ ಪಕ್ಷಗಳನ್ನು ಕಟ್ಟಿದರೆ ಸಾಲದು, ಪರ್ಯಾಯ ಜನ ಚಳವಳಿಯನ್ನು ಕಟ್ಟಿಬೆಳೆಸಬೇಕು. ವಿಶಾಲ ತಳಹದಿಯ ಪ್ರಬಲ ಜನಾಂದೋಲನಗಳನ್ನು ರೂಪಿಸಬೇಕಾದ ಕರ್ತವ್ಯ ನಮ್ಮ ಮುಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...