Homeಅಂಕಣಗಳುಕಂಡದ್ದನ್ನು ಕಂಡಹಾಗೆ ಹೇಳಿದವರು....

ಕಂಡದ್ದನ್ನು ಕಂಡಹಾಗೆ ಹೇಳಿದವರು….

- Advertisement -
- Advertisement -

 ಗೌರಿ ಲಂಕೇಶ್
ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್ ಬುಷ್‍ಗೆ ಕಪಾಳಮೋಕ್ಷವಾಗಿದೆ.
ಸ್ವೀಡನ್ ದೇಶದಲ್ಲಿನ ನೊಬೆಲ್ ಸಮಿತಿ ಈ ವರ್ಷ ಮೊಹ್ಮದ್ ಎಲ್‍ಬರದೈಗೆ ಶಾಂತಿ ಪ್ರಶಸ್ತಿ ಪ್ರಕಟಿಸಿ ಬುಷ್‍ಗೆ ಸೆಡ್ಡು ಹೊಡೆದಿತ್ತಲ್ಲದೆ, ಈ ವಾರ ಹೆರಾಲ್ಡ್ ಪಿಂಟರ್ ಎಂಬ ಬ್ರಿಟಿಷ್ ನಾಟಕಕಾರನಿಗೆ ಪ್ರಶಸ್ತಿ ನೀಡಿ ಅಮೆರಿಕಕ್ಕೆ ಅವಮಾನಿಸಿದೆ. ನೊಬೆಲ್ ಪ್ರಶಸ್ತಿಗಳು ರಾಜಕೀಯ ಪ್ರೇರಿತಗೊಂಡು ಹಲವು ದಶಕಗಳೇ ಕಳೆದಿವೆ. ಹಾಗಾಗಿ ಅಮೆರಿಕಾಕ್ಕೆ ಎದುರಾಗಿ ಈ ಪ್ರಶಸ್ತಿಗಳನ್ನು ಘೋಷಿಸಿರುವುದು ರಾಜಕೀಯ ಕಾರಣಕ್ಕೂ ವಿಪರೀತ ಕುತೂಹಲ ಮೂಡಿಸಿವೆ.
2003ರಲ್ಲಿ ಇರಾಕ್‍ನಲ್ಲಿ weapons of mass destruction ಇದೆ ಎಂಬ ನೆಪವೊಡ್ಡಿ, ಸದ್ದಾಂ ಹುಸೇನ್‍ನಿಂದ ಜಗತ್ತನ್ನೇ ರಕ್ಷಿಸಬೇಕಿದೆ ಎಂದುಹೇಳಿ ಆ ದೇಶದ ಮೇಲೆ ಅಮೆರಿಕಾ ಹರಿಹಾಯ್ದುಹೋಗಲು ಸಜ್ಜಾಗುತ್ತಿದ್ದಾಗ, ಇಂಟರ್‍ನ್ಯಾಶನಲ್ ಅಟೋಮಿಕ್ ಎನರ್ಜಿ ಅಸೋಸಿಯೇಷನ್‍ನ ಮುಖ್ಯಸ್ಥರಾಗಿರುವ ಬರದೈರವರು `ಇರಾಕ್‍ನಲ್ಲಿ ಯಾವ weapons of mass destruction ಇಲ್ಲ’ ಎಂದೇಳಿ ಬುಷ್‍ಗೆ ಸವಾಲೊಡ್ಡಿದ್ದರು. ಆದರೂ ಬುಷ್ ಇರಾಕ್ ಮೇಲೆ ದಾಳಿಯಿಟ್ಟು ಬ್ರಿಟಿಷ್ ಸೈನ್ಯದ ಜೊತೆಗೂಡಿ ಸಾವಿರಾರು ಇರಾಕಿಗಳನ್ನು ಕೊಂದುಹಾಕಿ, ಆ ದೇಶದ ಆತ್ಮವನ್ನೇ ಸರ್ವನಾಶ ಮಾಡಿದ ತರುವಾಯ ಬುಷ್ ಮತ್ತು ಬ್ರಿಟನ್ನಿನ ಬ್ಲೇರ್ ಹೇಳಿದ್ದು ಅಪ್ಪಟ ಸುಳ್ಳು, ಬರದೈ ಹೇಳಿದ್ದೇ ಸತ್ಯ ಎಂದು ಇಡೀ ಜಗತ್ತಿಗೇ ಗೊತ್ತಾಗಿತ್ತು. ತನ್ನ ಕಪಟತನವನ್ನು ಬಹಿರಂಗಪಡಿಸಿದ ಬರದೈಗೆ ಶಾಂತಿ ಪ್ರಶಸ್ತಿ ಸಿಕ್ಕರೆ ಬುಷ್ ಸರ್ಕಾರಕ್ಕೆ ಅವಮಾನವಾಗದೇ ಮತ್ತಿನ್ನೇನು?
ಇನ್ನು ತನ್ನ ಬರಹಗಳಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ವಿಶ್ಲೇಷಿಸುವ ನಾಟಕಕಾರ ಹೆರಾಲ್ಡ್ ಪಿಂಟರ್ ಅದೆಂತಹ ಅಗ್ರಸ್ಥಾನದಲ್ಲಿದ್ದಾರೆಂದರೆ ಶೇಕ್ಸ್‍ಪಿರಿಯನ್, ಶೆಕಾವಿಯನ್ ಎಂಬ ಪದಗಳು ಗುಣವಾಚಕಗಳಾಗಿವೆಯೋ ಹಾಗೆ ಪಿಂಟರೆಸ್ಕ್ ಎಂಬ ಪದವೂ ಇಂಗ್ಲಿಷ್ ಭಾಷೆಯ ಅಂಗವಾಗಿ ಹೋಗಿದೆ. ಇವರು ಕಳೆದ ಮೂರು ವರ್ಷದಿಂದ ಬುಷ್‍ರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಬುಷ್ ಹೇಳಿದ್ದಕ್ಕೆಲ್ಲ ತಲೆದೂಗುವ ತನ್ನ ದೇಶದ ಪ್ರಧಾನಿ ಬ್ಲೇರ್‍ಗೂ ಕ್ಯಾಕರಿಸಿ ಉಗಿದಿದ್ದಾರೆ. ಅಮೆರಿಕಾದಲ್ಲಿ ಅಧಿಕಾರ ಹಿಡಿದಿರುವವರನ್ನು ಕ್ರಿಮಿನಲ್‍ಗಳ ಗ್ಯಾಂಗ್ ಎಂದೂ, ಬ್ಲೇರ್ ಅನ್ನು ಅಮೆರಿಕಾ ಸರ್ಕಾರದ ಬಾಡಿಗೆಗೆ ಹಿಡಿದಿರುವ ಕ್ರಿಶ್ಚಿಯನ್ ಗೂಂಡಾ ಎಂದೂ ಲೇವಡಿ ಮಾಡಿದ್ದರು. ಅಮೆರಿಕಾ ಮತ್ತು ಬ್ರಿಟನ್ ಸರ್ಕಾರಗಳಿಗೆ ಕಡಿವಾಣ ಹಾಕದಿದ್ದರೆ ಇಡೀ ಜಗತ್ತನ್ನೇ ಮುಳುಗಿಸಿಬಿಡುತ್ತಾರೆ ಎಂಬುದು ಅವರ ಪ್ರಾಮಾಣಿಕ ಆತಂಕ.
ಇಲ್ಲಿ ಬುಷ್ ಮತ್ತು ಬ್ಲೇರ್ ಬಗ್ಗೆ ಪಿಂಟರ್‍ರವರು ನೀಡಿರುವ ಹೇಳಿಕೆಯ ಸ್ಯಾಂಪಲ್‍ಗಳಿವೆ ನೋಡಿ; “ಇರಾಕ್ ಮೇಲೆ ನಡೆದದ್ದು ಭಯೋತ್ಪಾದನೆ. ಆದ್ದರಿಂದ ಬುಷ್ ಮತ್ತು ಬ್ಲೇರ್ ಭಯೋತ್ಪಾದಕರು. ಅವರಿಬ್ಬರನ್ನು ಬಂಧಿಸಿ ಯುದ್ಧಕೋರರೆಂದು ವಿಚಾರಣೆಗೊಳಪಡಿಸಿ ಶಿಕ್ಷಿಸಬೇಕು…..”, “ಅಮೆರಿಕಾ ಈಗ ನಾಜಿಗಳ ಜರ್ಮನಿಯನ್ನು ಹೋಲುತ್ತಿದೆ”, “ಜಗತ್ತಿನ ಅತಿ ಅನಾಹುತಕಾರಿ ಅಸ್ತ್ರಗಳು ಅತಿ ಅನಾಹುತಕಾರಿ ನಾಯಕರ ಕೈಯಲ್ಲಿರದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾನೆ ಬುಷ್. ಆದ್ದರಿಂದ ಅತಿ ಅನಾಹುತಕಾರಿ ನಾಯಕ ಯಾರೆಂದು ತಿಳಿದುಕೊಳ್ಳಲು ಆತ ಒಮ್ಮೆ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳಲಿ”, “ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಬಿಡುಗಡೆಯ ಬಗ್ಗೆ ಮಾತಾಡುವ ಬುಷ್ ಹಾಗೂ ಬ್ಲೇರ್ ನಿಜವಾಗಲೂ ಹೇಳುತ್ತಿರುವುದು ಸಾವು, ನಾಶ ಮತ್ತು ಅಭದ್ರತೆಯ ಬಗ್ಗೆ”…..
ಇವೆಲ್ಲ ಇಂದು ಅಮೆರಿಕಾ ಸರ್ಕಾರ ಕೊತಕೊತ ಕುದಿಯುವಂತೆ ಮಾಡಿರುವುದು ಅಚ್ಚರಿಯೇನಲ್ಲ. ಭಿನ್ನಮತ, ವಾಕ್ ಸ್ವಾತಂತ್ರ್ಯ, ಮಾನವಹಕ್ಕುಗಳು, ದಬ್ಬಾಳಿಕೆ ವಿರೋಧಗಳು ನಿಜಕ್ಕೂ, `ನೋಬಲ್’, ಅಲ್ಲವೇ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...