Homeಅಂಕಣಗಳುಕಂಡದ್ದನ್ನು ಕಂಡಹಾಗೆ ಹೇಳಿದವರು....

ಕಂಡದ್ದನ್ನು ಕಂಡಹಾಗೆ ಹೇಳಿದವರು….

- Advertisement -
- Advertisement -

 ಗೌರಿ ಲಂಕೇಶ್
ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್ ಬುಷ್‍ಗೆ ಕಪಾಳಮೋಕ್ಷವಾಗಿದೆ.
ಸ್ವೀಡನ್ ದೇಶದಲ್ಲಿನ ನೊಬೆಲ್ ಸಮಿತಿ ಈ ವರ್ಷ ಮೊಹ್ಮದ್ ಎಲ್‍ಬರದೈಗೆ ಶಾಂತಿ ಪ್ರಶಸ್ತಿ ಪ್ರಕಟಿಸಿ ಬುಷ್‍ಗೆ ಸೆಡ್ಡು ಹೊಡೆದಿತ್ತಲ್ಲದೆ, ಈ ವಾರ ಹೆರಾಲ್ಡ್ ಪಿಂಟರ್ ಎಂಬ ಬ್ರಿಟಿಷ್ ನಾಟಕಕಾರನಿಗೆ ಪ್ರಶಸ್ತಿ ನೀಡಿ ಅಮೆರಿಕಕ್ಕೆ ಅವಮಾನಿಸಿದೆ. ನೊಬೆಲ್ ಪ್ರಶಸ್ತಿಗಳು ರಾಜಕೀಯ ಪ್ರೇರಿತಗೊಂಡು ಹಲವು ದಶಕಗಳೇ ಕಳೆದಿವೆ. ಹಾಗಾಗಿ ಅಮೆರಿಕಾಕ್ಕೆ ಎದುರಾಗಿ ಈ ಪ್ರಶಸ್ತಿಗಳನ್ನು ಘೋಷಿಸಿರುವುದು ರಾಜಕೀಯ ಕಾರಣಕ್ಕೂ ವಿಪರೀತ ಕುತೂಹಲ ಮೂಡಿಸಿವೆ.
2003ರಲ್ಲಿ ಇರಾಕ್‍ನಲ್ಲಿ weapons of mass destruction ಇದೆ ಎಂಬ ನೆಪವೊಡ್ಡಿ, ಸದ್ದಾಂ ಹುಸೇನ್‍ನಿಂದ ಜಗತ್ತನ್ನೇ ರಕ್ಷಿಸಬೇಕಿದೆ ಎಂದುಹೇಳಿ ಆ ದೇಶದ ಮೇಲೆ ಅಮೆರಿಕಾ ಹರಿಹಾಯ್ದುಹೋಗಲು ಸಜ್ಜಾಗುತ್ತಿದ್ದಾಗ, ಇಂಟರ್‍ನ್ಯಾಶನಲ್ ಅಟೋಮಿಕ್ ಎನರ್ಜಿ ಅಸೋಸಿಯೇಷನ್‍ನ ಮುಖ್ಯಸ್ಥರಾಗಿರುವ ಬರದೈರವರು `ಇರಾಕ್‍ನಲ್ಲಿ ಯಾವ weapons of mass destruction ಇಲ್ಲ’ ಎಂದೇಳಿ ಬುಷ್‍ಗೆ ಸವಾಲೊಡ್ಡಿದ್ದರು. ಆದರೂ ಬುಷ್ ಇರಾಕ್ ಮೇಲೆ ದಾಳಿಯಿಟ್ಟು ಬ್ರಿಟಿಷ್ ಸೈನ್ಯದ ಜೊತೆಗೂಡಿ ಸಾವಿರಾರು ಇರಾಕಿಗಳನ್ನು ಕೊಂದುಹಾಕಿ, ಆ ದೇಶದ ಆತ್ಮವನ್ನೇ ಸರ್ವನಾಶ ಮಾಡಿದ ತರುವಾಯ ಬುಷ್ ಮತ್ತು ಬ್ರಿಟನ್ನಿನ ಬ್ಲೇರ್ ಹೇಳಿದ್ದು ಅಪ್ಪಟ ಸುಳ್ಳು, ಬರದೈ ಹೇಳಿದ್ದೇ ಸತ್ಯ ಎಂದು ಇಡೀ ಜಗತ್ತಿಗೇ ಗೊತ್ತಾಗಿತ್ತು. ತನ್ನ ಕಪಟತನವನ್ನು ಬಹಿರಂಗಪಡಿಸಿದ ಬರದೈಗೆ ಶಾಂತಿ ಪ್ರಶಸ್ತಿ ಸಿಕ್ಕರೆ ಬುಷ್ ಸರ್ಕಾರಕ್ಕೆ ಅವಮಾನವಾಗದೇ ಮತ್ತಿನ್ನೇನು?
ಇನ್ನು ತನ್ನ ಬರಹಗಳಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ವಿಶ್ಲೇಷಿಸುವ ನಾಟಕಕಾರ ಹೆರಾಲ್ಡ್ ಪಿಂಟರ್ ಅದೆಂತಹ ಅಗ್ರಸ್ಥಾನದಲ್ಲಿದ್ದಾರೆಂದರೆ ಶೇಕ್ಸ್‍ಪಿರಿಯನ್, ಶೆಕಾವಿಯನ್ ಎಂಬ ಪದಗಳು ಗುಣವಾಚಕಗಳಾಗಿವೆಯೋ ಹಾಗೆ ಪಿಂಟರೆಸ್ಕ್ ಎಂಬ ಪದವೂ ಇಂಗ್ಲಿಷ್ ಭಾಷೆಯ ಅಂಗವಾಗಿ ಹೋಗಿದೆ. ಇವರು ಕಳೆದ ಮೂರು ವರ್ಷದಿಂದ ಬುಷ್‍ರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಬುಷ್ ಹೇಳಿದ್ದಕ್ಕೆಲ್ಲ ತಲೆದೂಗುವ ತನ್ನ ದೇಶದ ಪ್ರಧಾನಿ ಬ್ಲೇರ್‍ಗೂ ಕ್ಯಾಕರಿಸಿ ಉಗಿದಿದ್ದಾರೆ. ಅಮೆರಿಕಾದಲ್ಲಿ ಅಧಿಕಾರ ಹಿಡಿದಿರುವವರನ್ನು ಕ್ರಿಮಿನಲ್‍ಗಳ ಗ್ಯಾಂಗ್ ಎಂದೂ, ಬ್ಲೇರ್ ಅನ್ನು ಅಮೆರಿಕಾ ಸರ್ಕಾರದ ಬಾಡಿಗೆಗೆ ಹಿಡಿದಿರುವ ಕ್ರಿಶ್ಚಿಯನ್ ಗೂಂಡಾ ಎಂದೂ ಲೇವಡಿ ಮಾಡಿದ್ದರು. ಅಮೆರಿಕಾ ಮತ್ತು ಬ್ರಿಟನ್ ಸರ್ಕಾರಗಳಿಗೆ ಕಡಿವಾಣ ಹಾಕದಿದ್ದರೆ ಇಡೀ ಜಗತ್ತನ್ನೇ ಮುಳುಗಿಸಿಬಿಡುತ್ತಾರೆ ಎಂಬುದು ಅವರ ಪ್ರಾಮಾಣಿಕ ಆತಂಕ.
ಇಲ್ಲಿ ಬುಷ್ ಮತ್ತು ಬ್ಲೇರ್ ಬಗ್ಗೆ ಪಿಂಟರ್‍ರವರು ನೀಡಿರುವ ಹೇಳಿಕೆಯ ಸ್ಯಾಂಪಲ್‍ಗಳಿವೆ ನೋಡಿ; “ಇರಾಕ್ ಮೇಲೆ ನಡೆದದ್ದು ಭಯೋತ್ಪಾದನೆ. ಆದ್ದರಿಂದ ಬುಷ್ ಮತ್ತು ಬ್ಲೇರ್ ಭಯೋತ್ಪಾದಕರು. ಅವರಿಬ್ಬರನ್ನು ಬಂಧಿಸಿ ಯುದ್ಧಕೋರರೆಂದು ವಿಚಾರಣೆಗೊಳಪಡಿಸಿ ಶಿಕ್ಷಿಸಬೇಕು…..”, “ಅಮೆರಿಕಾ ಈಗ ನಾಜಿಗಳ ಜರ್ಮನಿಯನ್ನು ಹೋಲುತ್ತಿದೆ”, “ಜಗತ್ತಿನ ಅತಿ ಅನಾಹುತಕಾರಿ ಅಸ್ತ್ರಗಳು ಅತಿ ಅನಾಹುತಕಾರಿ ನಾಯಕರ ಕೈಯಲ್ಲಿರದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾನೆ ಬುಷ್. ಆದ್ದರಿಂದ ಅತಿ ಅನಾಹುತಕಾರಿ ನಾಯಕ ಯಾರೆಂದು ತಿಳಿದುಕೊಳ್ಳಲು ಆತ ಒಮ್ಮೆ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳಲಿ”, “ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಬಿಡುಗಡೆಯ ಬಗ್ಗೆ ಮಾತಾಡುವ ಬುಷ್ ಹಾಗೂ ಬ್ಲೇರ್ ನಿಜವಾಗಲೂ ಹೇಳುತ್ತಿರುವುದು ಸಾವು, ನಾಶ ಮತ್ತು ಅಭದ್ರತೆಯ ಬಗ್ಗೆ”…..
ಇವೆಲ್ಲ ಇಂದು ಅಮೆರಿಕಾ ಸರ್ಕಾರ ಕೊತಕೊತ ಕುದಿಯುವಂತೆ ಮಾಡಿರುವುದು ಅಚ್ಚರಿಯೇನಲ್ಲ. ಭಿನ್ನಮತ, ವಾಕ್ ಸ್ವಾತಂತ್ರ್ಯ, ಮಾನವಹಕ್ಕುಗಳು, ದಬ್ಬಾಳಿಕೆ ವಿರೋಧಗಳು ನಿಜಕ್ಕೂ, `ನೋಬಲ್’, ಅಲ್ಲವೇ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...