Homeಮುಖಪುಟಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

ಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

- Advertisement -
- Advertisement -

ಅತ್ಯಚಾರದಲ್ಲಿ ಭಾಗಿಯಾದ 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಸಾಕ್ಷ್ಯನಾಶ ಮಾಡಿದ ಉಳಿದ ಮೂವರಿಗೆ 5 ವರ್ಷ ಜೈಲು ಸಜೆಯ ಶಿಕ್ಷೆಯನ್ನು ಕೋರ್ಟ್ ಘೋಷಿಸಿದೆ. ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್ ಗೆ ಜೀವಾವಧಿ ಘೋಷಿಸಿದ್ದು, ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಪೊಲೀಸರಿಗೆ 5 ವರ್ಷಗಳ ಜೈಲು ಸಜೆಯನ್ನು ವಿಧಿಸಲಾಗಿದೆ.

ಇಂದು ಬೆಳಿಗ್ಗೆ ಆರೋಪಿಗಳನ್ನು ಘೋಷಿಸಿದ್ದು ಸಂಜೆ 4.45ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಯಿತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂದು ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯರ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋರ್ಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅತ್ಯಾಚಾರ ಆರೋಪಿಗಾಳದ ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್, ತಿಲಕ್ ರಾಜ್, ಸುರೇಂದ್ರ, ಪ್ರವೇಶ್ ದೋಷಿಗಳೆಂದು ಪಠಾಣ್ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ವಿಶಾಲ್ ನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಆಡಳಿತದಲ್ಲಿದ್ದ ಬಿಜೆಪಿ-ಪೀಪಲ್ಸ್ ಡೆಮೊಕ್ರಾಟಿಕ್ ಪಾರ್ಟಿ (ಪಿಡಿಪಿ) ಮೈತ್ರಿಕೂಟದ ನಡುವೆ ಬಿಜೆಪಿ ನಾಯಕರು ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಈ ಇಬ್ಬರು ಆರೋಪಿಗಳ ರಕ್ಷಣೆಗೆ ನಿಂತಿದ್ದರು ಎಂಬುದು ವಿವಾದ ಸಹ ಆಯಿತು ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.

ಅಷ್ಟು ಮಾತ್ರವಲ್ಲದೇ ಸಂತ್ರಸ್ತೆಯ ಪರವಾಗಿ ವಕೀಲಿಕೆ ನಡೆಸಿದ್ದ ದೀಪಿಕಾ ಸಿಂಗ್ ರಾವತ್ ರವರ ಮೇಲೆ ವಕೀಲರ ಸಂಘದ ಅಧ್ಯಕ್ಷರಾದ ಬಿ.ಎಸ್ ಸಲಾತಿಯ ಎಂಬುವವರು ನ್ಯಾಯಾಲಕ್ಕೆ ಹಾಜರಾಗದಂತೆ ಬಹಿರಂಗವಾಗಿ ಬೆದರಿಕೆ ಹಾಕಿದ್ದ ಘಟನೆಯೂ ಸಹ ನಡೆದಿತ್ತು. ಅವರು ಕೇಸಿನಿಂದ ಹಿಂದೆ ಸರಿಯಬೇಕೆಂದು ಹಲವಾರು ಜೀವಬೆದರಿಕೆಯ ಕರೆಗಳು ಸಹ ದೀಪಿಕಾ ಸಿಂಗ್ ರವರಿಗೆ ಬಂದಿದ್ದವು. ತೀವ್ರ ಒತ್ತಡದ ಕಾರಣದಿಂದಾಗಿ ಕೊನೆಗೆ ಅವರು ಕೇಸಿನಿಂದ ಹಿಂದೆ ಸರಿಯಬೇಕಾಗಿತ್ತು.

ದೀಪಿಕಾ ಸಿಂಗ್ ರಾಜಾವತ್

ನಂತರ ಸಂತ್ರಸ್ತೆಯ ಪರವಾಗಿ ಮುಬಿನ್ ಫಾರೂಖಿ ಎಂಬುವವರು ವಕೀಲಿಕೆ ನಡೆಸಿದ್ದರು. ಇಂದು ಈ ಕೇಸಿನಲ್ಲಿ ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಮೂವರು ಪೋಲಿಸರ ಮೇಲೆ ಸಾಕ್ಷ್ಯನಾಶದ ಆರೋಪ ಸಾಬೀತಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...