Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

ಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

- Advertisement -
- Advertisement -

| ಹನುಮಂತ ಹಾಲಿಗೇರಿ |

ಕೊಳ್ಳೆಹೊಡೆಯುವವರ ಕೈಗೆ ದೇಶವನ್ನು ಕೊಟ್ಟುಬಿಟ್ಟು ನಾನು ದೇಶ ಕಾಯುವ ಚೌಕಿದಾರ ಅಂತ ಹೇಳ್ಕೊಂಡವನ ಟ್ರೋಲ್‍ಗಳನ್ನು ನಾವು ಕಳೆದ ಒಂದು ವಾರದಿಂದ ಗಮನಿಸುತ್ತಿದ್ದೇವೆ. ಅಂಥವನೇ ಇನ್ನೊಬ್ಬ ಚೌಕಿದಾರರಾದ ಮನು ಬಳಿಗಾರ್ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಗಿರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಬಳಿಗಾರರು ಅಧ್ಯಕ್ಷರಾದ ಮೇಲೆ ಅವರ ಸರ್ವಾಧಿಕಾರದ ಸ್ವಯಂಕೃತ ತಪ್ಪುಗಳು ಒಂದೆರಡಲ್ಲ. ಈಗ ಸೂಕ್ಷ್ಮ ಸಂವೇದನೆಯ ಕವಯತ್ರಿ ರೂಪಾ ಹಾಸನ ಅವರು ಪರಿಷತ್ತಿನ ಅಜೀವ ಸದಸ್ಯತ್ವಕ್ಕೆ ನೀಡಿರುವ ರಾಜಿನಾಮೆ ಪಡೆದುಕೊಂಡು ಮತ್ತೊಮ್ಮೆ ಕನ್ನಡ ಸಾಂಸ್ಕೃತಿಕ ಜೀವಿಗಳಿಂದ ಗೇಲಿಗೊಳಗಾಗಿದ್ದಾರೆ.

ರೂಪಾ ಅವರು ರಾಜಿನಾಮೆ ನೀಡಿದರೆ ನಾನೇನು ಮಾಡಲಿ ಎಂದು ಅವರ ಆಪ್ತರ ಹತ್ತಿರ ಸಮರ್ಥಿಸಿಕೊಳ್ಳುತ್ತಿದ್ದಾರಂತೆ. `ಅವರೇನೋ ರಾಜಿನಾಮೆ ನೀಡಿದರು. ನೀವು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷ, ಯಾವುದನ್ನು ಸ್ವೀಕರಿಸಬೇಕು. ಯಾವುದನ್ನು ಸ್ವೀಕರಿಸಿಬಾರದು ಎಂಬ ಕಾಮನ್ ಸೆನ್ಸ್ ನಿನಗೆ ಇರಬೇಕಲ್ಲವೇ?’ ಎಂದು ಬಳಿಗಾರರ ಆಪ್ತರೇ ಹಿಂದೆಮುಂದೆ ಆಡಿಕೊಳ್ಳುತ್ತಿದ್ದಾರೆ.

ಅಷ್ಟಕ್ಕೂ ರೂಪಾ ಅವರೇನು ತಮ್ಮ ಸ್ವಾರ್ಥ ಸಾಧನೆಗಾಗಿ ರಾಜೀನಾಮೆ ನೀಡಿದವರಲ್ಲ. ಅವರ ರಾಜೀನಾಮೆಯ ಹಿಂದೆ ಕನ್ನಡ ಶಾಲೆಗಳ ಏಳ್ಗೆಯ ಕುರಿತು ಸರ್ಕಾರ ಮತ್ತು ಸಾಹಿತ್ಯ ಪರಿಷತ್ತುಗಳ ನಿರ್ಲಕ್ಷ್ಯದ ವಿರುದ್ಧದ ಪ್ರತಿರೋಧದ ದನಿ ಇತ್ತು. ಮನೆಯ ಯಜಮಾನ ದಾರಿ ತಪ್ಪಿದಾಗ ಅವನ ತಪ್ಪನ್ನು ಸರಿಪಡಿಸಿ ಸರಿ ದಾರಿಗೆ ತರುವ ಉದ್ದೇಶದಿಂದ ಕನ್ನಡ ಮನೆಯ ಹಿರಿಮಗಳಾಗಿ ರೂಪಾ ಅವರು ಈ ಪತ್ರವನ್ನು ಬರೆದಿದ್ದರೇನೋ, ರಾಜಿನಾಮೆಯನ್ನು ನೀಡಲೇಬೇಕೆಂಬ ಹಟವೇನು ಅವರಲ್ಲಿ ಇದ್ದಂತಿರಲಿಲ್ಲ. ಆದರೆ, ಬಳಿಗಾರರು ರೂಪಾ ಅವರ ಎತ್ತಿರುವ ಮುಖ್ಯ ಪ್ರಶ್ನೆಗಳಾವುದರ ಬಗ್ಗೆಯೂ ಕಿಂಚಿತ್ ಗಮನ ನೀಡದೇ ಆಯ್ತು ಬೀಡಮ್ಮ ಎನ್ನುವ ದುರಹಂಕಾರಿಯಂತೆ ರಾಜೀನಾಮೆ ಪತ್ರಕ್ಕೆ ಅಂಗೀಕಾರದ ಮುದ್ರೆ ಒತ್ತಿ ತಮ್ಮ ಉದ್ದಟತನ ಮೆರೆದಿದ್ದಾರೆ.

ರೂಪಾ ಹಾಸನ ಅವರು ಕಸಾಪದ ದುಂದುವೆಚ್ಚವನ್ನು ಮತ್ತು ಕನ್ನಡಪರ ನಿಷ್ಕಾಳಜಿಯನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಚಂಪಾ ಅವರು ಅಧ್ಯಕ್ಷರಾಗಿದ್ದಾಗಲೂ ಹೀಗೆಯೇ ಅಜೀವ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಕಳಿಸಿದ್ದರು. ಆದರೆ, ಒಬ್ಬ ಹಿರಿಯ ಜೀವಪರ ಕಾಳಜಿಯ ಸಾಹಿತಿಯೂ ಆಗಿರುವ ಚಂಪಾ ಅವರು ರೂಪಾ ಅವರನ್ನು ಕರೆಸಿಕೊಂಡು “ನಿನ್ನ ಅಜೀವ ಸದಸ್ಯತ್ವದ ರಾಜೀನಾಮೆಯನ್ನು ಸ್ವೀಕರಿಸಲು ನಾನೇನು ಅಜೀವ ಅಧ್ಯಕ್ಷನೇ. ಇನ್ನೆರಡು ವರ್ಷ ಅಷ್ಟೆ ನನ್ನ ಆಟ. ನಾನೆ ಅಜೀವ ಅಧ್ಯಕ್ಷನಲ್ಲವೆಂದ ಮೇಲೆ ನಾನ್ಹೇಗೆ ನಿನ್ನ ರಾಜೀನಾಮೆ ತೆಗೆದುಕೊಳ್ಳಲಿಕ್ಕಾಗುತ್ತೆ, ಆಗೂದಿಲ್ಲ. ಆದ್ರೆ ನೀನು ಎತ್ತಿರುವ ಪ್ರಶ್ನೆಗಳೆಲ್ಲವೂ ಮೌಲಿಕವಾದವು. ಕನ್ನಡ ಶಾಲೆಗಳ ಮುಚ್ಚುತ್ತಿರುವುದನ್ನು ನಾನು ವಿರೋಧಿಸುತ್ತೇನೆ. ಸರಕಾರದೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ” ಎಂದು ಸಮಾಧಾನ ಮಾಡಿ ಕಳಿಸಿದ್ದರಂತೆ. ಆದರೆ, ಬಳಿಗಾರರು ಮಾತ್ರ ರೂಪಾ ಅವರ ಯಾವ ಪ್ರಶ್ನೆಗಳಿಗೂ ತಲೆ ಕೆಡಿಸಿಕೊಳ್ಳದೆ ರಾಜೀನಾಮೆಯನ್ನು ಸ್ವೀಕರಿಸುವ ಮೂಲಕ ಕಸಾಪದ ಅಜೀವ ಅಧ್ಯಕ್ಷರಾದವರಂತೆ ವರ್ತಿಸಿದ್ದಾರೆ. ಅವರ ಅಧಿಕಾರ ದಾಹದ ಬಗ್ಗೆ ಗೊತ್ತಿರದ್ದೇನಿಲ್ಲ. ಮೂರು ವರ್ಷದ ಅವಧಿಯನ್ನು ಬೈಲಾ ತಿದ್ದುಪಡಿ ಮಾಡಿಸಿಕೊಂಡು ಐದು ವರ್ಷಕ್ಕೆ ಏರಿಸಿಕೊಂಡಿರುವ ಅವರು ಅಜೀವ ಅಧ್ಯಕ್ಷಗಿರಿಗೂ ಏನಾದ್ರೂ ಹುನ್ನಾರ ಮಾಡಿದ್ರೂ ಮಾಡುವವರೇ ಎಂದು ಅವರ ಪಟಾಲಮ್ಮಿನ ಬಳಗದವರೇ ಮಾತಾಡಿಕೊಳ್ಳುತ್ತಿದ್ದಾರೆ.

ಮನು ಬಳಿಗಾರರ ಸರ್ವಾಧಿಕಾರಿ ಉದ್ದಟತನಗಳು ಒಂದೆರಡಲ್ಲ ಮತ್ತು ಇದೇ ಮೊದಲಲ್ಲ. ಈ ಹಿಂದೆ ಹಿರಿಯರಾದ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದಾಗ, ಆ ಹತ್ಯೆಯನ್ನು ವಿರೋಧಿಸಿ ಯುವ ಬರಹಗಾರರು ಕಸಾಪದ ಅರಳು ಪ್ರಶಸ್ತಿಯನ್ನು ವಾಪಸ್ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಇದೇ ಬಳಿಗಾರರು “ಈ ಹುಡುಗರು ಪ್ರಚಾರಕ್ಕಾಗಿ ಇಂಥ ಅಗ್ಗದ ಗಿಮಿಕ್ ಮಾಡುತ್ತಿದ್ದಾರೆ” ಎಂದು ಲೂಜುಲೂಜಾಗಿ ಮಾತನಾಡುವ ಮೂಲಕ ತಮ್ಮ ಮರ್ಯಾದೆ ಕಳೆದುಕೊಂಡಿದ್ದರು. ತಮ್ಮ ಅಧಿಕಾರದ ಅವಧಿ ಮುಗಿಯಲು ಬಂದಾಗ ಕಸಾಪದ ಬೈಲಾವನ್ನೇ ಬದಲಾಯಿಸಿ ಮೂರು ವರ್ಷದ ಅವಧಿಯನ್ನು ಐದು ವರ್ಷಕ್ಕೆ ಏರಿಸಿಕೊಂಡರು. ಬೈಲಾ ಬದಲಾಯಿಸಿ ಐದು ವರ್ಷ ಮಾಡಿದ್ದು ಕಾನೂನು ಪ್ರಕಾರ ತಪ್ಪೇನೂ ಅಲ್ಲ, ಆದರೆ, ನಿಮಗೆ ಆತ್ಮಸಾಕ್ಷಿ ಅನ್ನೋದಿದ್ರೆ ಈಗ ಖುರ್ಚಿಯಿಂದ ಕೆಳಗಿಳಿಯಿರಿ. ಮುಂದಿನ ಅಧಿಕಾರಾವಧಿಯ ಅಧ್ಯಕ್ಷರು ಬೇಕಾದರೆ ಐದು ವರ್ಷ ಖುರ್ಚಿಯಲ್ಲಿರಲಿ ಎಂಬ ಪ್ರಜ್ಞಾವಂತರ ಕೂಗಿಗೆ ಬಳಿಗಾರರು ಕಿವಿಗೊಡುತ್ತಲೇ ಇಲ್ಲ.

ಇನ್ನು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ವಾನಗಳಂತೂ ಒಂದೆರಡಲ್ಲ. ಆರಂಭದಲ್ಲೇ ಸುಮಂಗಲಿಯರಿಂದ ಪೂರ್ಣಕುಂಭ ಮೆರವಣಿಗೆ ಎಂಬ ಕಂದಾಚಾರದ ವಿರುದ್ಧ ರಾಜ್ಯಾದ್ಯಂತ ಪ್ರತಿರೋಧ ಬುಗಿಲೆದ್ದರೂ ತಮ್ಮ ನವರಂದ್ರಗಳನ್ನೆಲ್ಲ ಮುಚ್ಚಿಕೊಂಡಿದ್ದ ಈ ಬಳಿಗಾರ ಸಾಹೇಬರು ಕೊನೆ ಕ್ಷಣದಲ್ಲಿ  ತಾವು ಅಂದುಕೊಂಡು ಸುಮಂಗಲಿಯರ ಕುಂಭ ಮೆರವಣಿಗೆಯನ್ನು ನಡೆಸಿ ತಮ್ಮ ಹಟವನ್ನೇ ಸಾಧಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೀಗ್ಲಿಯವರಾದ ಈ ಬಳಿಗಾರರ ಮೂಲತಃ ಗೌಡ್ಕಿ ಮನೆತನದಿಂದ ಬಂದವರು. ಆ ಜಮೀನ್ದಾರಿಕೆಯ ಪಳಿಯುಳಿಕೆಯೂ ಅವರ ನಡೆನುಡಿಗಳಲ್ಲಿ ಈಗಲೂ ಜೀವಂತವಾಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉನ್ನತ ಅಧಿಕಾರದ ಹುದ್ದೆಗಳನ್ನು ಕೂಡ ಅದೇ ಗೌಡ್ಕಿ ಗತ್ತಿನಲ್ಲಿಯೇ ನಿಭಾಯಿಸಿದ್ದರು. ಕುಂತರೂ, ನಿಂತರೂ ಭಲೆ, ಭಲೆ ಎನ್ನುವ, ಬಹುಫರಾಕ್ ಹೇಳುವ ಬಾಲಬಡುಕರಿಗೆ ಮಾತ್ರ ಬಹುತೇಕ ಅನುದಾನ ಮತ್ತು ಅವಕಾಶಗಳನ್ನು ನೀಡಿದವರು. ಮುಂದೆ ಈ ಬಾಲಬಡುಕರೇ ಇವರನ್ನು ಕಸಾಪ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ನೆರವಾದರು. ಕೆಲವು ಪ್ರಜ್ಞಾವಂತ ಹಿರಿಯರು ಕೂಡ ಬಳಿಗಾರರನ್ನು ಚುನಾವಣೆಯ ಸಂದರ್ಭದಲ್ಲಿ ಬೆಂಬಲಿಸಿದ್ದು ವಿಷಾದನೀಯ. ಯಾಕಾದ್ರೂ ಈ ಪುಣ್ಯಾತ್ಮನನ್ನು ಗೆಲ್ಲಿಸಿದೆವೋ ಎಂದು ಈಗ ಅವರೆಲ್ಲ ಮುಖ ಕಿವುಚಿತ್ತಿದ್ದಾರಂತೆ.

ಒಟ್ನಲ್ಲಿ ಈ ಮನುಷ್ಯ ಮನು`ಸ್ಮತಿ’ ಬಳಿಗಾರ್ ಕಸಾಪವವನ್ನು ವಸಾಹತು ಮಾಡಿಕೊಂಡಿದ್ದು ಮತ್ತೊಮ್ಮೆ ಸಾಬೀತಾಗಿದೆ. ಒಂಚೂರು ಸಾಹಿತ್ಯಿಕ ಸಂವೇದನೆ ಇದ್ದಿದ್ದರೆ, ಒಂದಿಷ್ಟು ಕನ್ನಡ ಪುಸ್ತಕಗಳನ್ನು ಓದಿಕೊಂಡಿದ್ದರೆ, ಬಹುಶಃ ಬಳಿಗಾರರು ಹೀಗೆ ಮಾಡುತ್ತಿರಲಿಲ್ಲವೇನೋ. ಈಗಲೂ ಕಾಲ ಮಿಂಚಿಲ್ಲ. ಸಾಂಸ್ಕೃತಿಕ ವಲಯದ ಪ್ರಜ್ಞಾವಂತರೆಲ್ಲರೂ ಒಟ್ಟಾಗಿ ನೀನು ನಿನ್ನ ದುರಾಡಳಿತವನ್ನು ಬಿಡದಿದ್ದರೆ ನಾವೆಲ್ಲರೂ ಸೇರಿ ಅಜೀವ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿ ತಿದ್ದಬೇಕಿದೆ. ಇಲ್ಲದಿದ್ದರೆ ರೂಪಾ ಅವರ ರಾಜೀನಾಮೆ ಅರ್ಥ ಕಳೆದುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...