Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...