Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...