Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...