Homeಕರ್ನಾಟಕಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

ಕಮ್ಯುನಿಸ್ಟ್ ಪಕ್ಷಗಳ ವಿಲೀನ ಅಗತ್ಯ. ಆದರೆ, ಅವಸರದ ಹೆರಿಗೆ ಆಗಬಾರದು

- Advertisement -
- Advertisement -

| ಡಾ. ಬಿ.ಆರ್.ಮಂಜುನಾಥ್ |(ಲೇಖಕರು, ಸುದೀರ್ಘ ಕಾಲ ಎಡಪಕ್ಷದ ಮುಂಚೂಣಿ ಸ್ಥಾನದಲ್ಲಿದ್ದವರು)

ಮತ್ತೊಮ್ಮೆ ಕಮ್ಯುನಿಸ್ಟ್ ಪಕ್ಷಗಳ ವಿಲೀನದ ಪ್ರಶ್ನೆ ಗಾಳಿಯಲ್ಲಿದೆ. ಸಿಪಿಐ ಪಕ್ಷವು ಇದನ್ನು ಮೂವತ್ತು ವರ್ಷಗಳಿಂದಲೂ ಪ್ರಸ್ತಾಪಿಸುತ್ತಲೇ ಬಂದಿದೆ. ಆದಕ್ಕೆ ಇನ್ನೊಂದು ದೊಡ್ಡ ಪಕ್ಷವಾದ ಸಿಪಿಐ ಎಮ್ ಸ್ಪಂದಿಸಿರಲಿಲ್ಲ. 2015ರಲ್ಲಿ ಆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಯಚೂರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ವಿಲೀನದ ಪ್ರಕ್ರಿಯೆಯೇನೂ ಚುರುಕಾಗಿರಲಿಲ್ಲ. ಈ ಬಾರಿ ಚುನಾವಣೆ ಮುಗಿದ ಮೇಲೆ ಸಿಪಿಐ ಮಗದೊಮ್ಮೆ ಪ್ರಸ್ತಾಪಿಸಿದೆ. ಹಾಗಾಗಿ ವಿಷಯ ಮುನ್ನೆಲೆಗೆ ಬಂದಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಡ ಪಕ್ಷಗಳು ವಿಪರೀತ ಪೆಟ್ಟು ತಿಂದಿವೆ. ಅವುಗಳ ಮೂಲ ನೆಲೆಗಳೇ ಧ್ವಂಸವಾಗಿವೆ. ಈ ಬೆಳವಣಿಗೆಯು ಕಾರ್ಯಕರ್ತರಲ್ಲೂ, ಪಕ್ಷದ ಬೆಂಬಲಿಗರಲ್ಲೂ ತೀವ್ರವಾದ ನಿರಾಶೆ, ನೋವುಗಳನ್ನು ಉಂಟು ಮಾಡುವಂಥದ್ದು. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಒಂದು ಹೊಸ ಉತ್ಸಾಹ, ಆಶಾವಾದವನ್ನು ಸೃಷ್ಟಿಸಲು ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳಲ್ಲಿ ವಿವಿಧ ಪಕ್ಷಗಳನ್ನು ಒಂದುಗೂಡಿಸುವುದೂ ಒಂದು ಎಂಬ ಭಾವನೆ ಮೂಡಿದೆ.

ಸಿಪಿಐ ಪಕ್ಷವು ಅನೇಕ ಬಾರಿ ವಿಲೀನಕ್ಕೆ ಅಡ್ಡಿಯಾಗುವಂಥ ಯಾವ ಸೈದ್ಧಾಂತಿಕ ಪ್ರಶ್ನೆಗಳೂ ಉಳಿದಿಲ್ಲ ಎಂದು ಸಾರುತ್ತಾ ಬಂದಿದೆ. ಈ ಮಾತು ಈಗ ಅನೇಕರಿಗೆ ಒಪ್ಪಿಗೆಯಾಗಬಹುದು. ಸೋವಿಯತ್ ಕಮ್ಯುನಿಸ್ಟ್ ಪಕ್ಷದ ಇಪ್ಪತ್ತನೆಯ ಮಹಾಧಿವೇಶನದ ನಂತರ ಉದ್ಭವಿಸಿದ್ದ ಪರಿಷ್ಕರಣವಾದಿ ತೀರ್ಮಾನಗಳ ಕುರಿತಾದ ಚರ್ಚೆ ಈಗ ಹಿಂದಕ್ಕೆ ಸರಿದಿದೆ. ಇನ್ನೊಂದು ಕಡೆ ಚೀನಾ ಕಮ್ಯುನಿಸ್ಟ್ ಪಕ್ಷ ಸಂಪೂರ್ಣವಾಗಿ ಮಾರುಕಟ್ಟೆ ಆರ್ಥಿಕತೆಗೆ ಒಲಿದು, ತನ್ನ ಸದಸ್ಯತ್ವವನ್ನು ಬಂಡವಾಳಗಾರರಿಗೂ ತೆರೆದನಂತರ ಆ ಪಕ್ಷದ ನಿಲುವಿನೊಂದಿಗೆ ಚರ್ಚೆಗಿಳಿಯುವ ಉತ್ಸಾಹವೂ ಯಾವ ಕಮ್ಯುನಿಸ್ಟರಲ್ಲೂ ಉಳಿದಿರಲಿಕ್ಕಿಲ್ಲ!

ಇನ್ನು ದೇಶದ ಎಡ ವಲಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಗ್ರಹಿಸಬೇಕು ಎಂಬುದನ್ನು ಕುರಿತಂತೆ ವಿಭಿನ್ನ ಅಭಿಪ್ರಾಯಗಳಿವೆ. ಕೇರಳದಲ್ಲಿ ಕಾಂಗ್ರೆಸ್‍ಅನ್ನೇ ಮುಖ್ಯ ಪ್ರತಿಸ್ಪರ್ಧಿಯಾಗಿ ಎದುರಿಸಬೇಕಾದ ಅನಿವಾರ್ಯತೆ ಇರುವುದು ಆ ಪಕ್ಷದೊಂದಿಗಿನ ಮೈತ್ರಿಗೆ ತೊಡಕಾಗುವ ಅಂಶ. ಕಾಂಗ್ರೆಸ್ ಜೊತೆ ಸೇರಿದರೆ ಮುಂದೆ ಅಲ್ಲಿ ಬಿಜೆಪಿ ಬಲವಾಗಬಹುದು ಎಂಬ ಆತಂಕ ಕಾಡುತ್ತದೆ. ಬಂಗಾಳದಲ್ಲಿ ಪರಿಸ್ಥಿತಿ ಹಾಗಿಲ್ಲ. ಅಲ್ಲಿ ಎಡ ಪಕ್ಷಗಳು ಬದುಕುಳಿಯುವುದೇ ಇಂದು ದೊಡ್ಡ ಸವಾಲು.

ಅರವತ್ತು- ಎಪ್ಪತ್ತರ ದಶಕದಲ್ಲಿ ಎಡಪಕ್ಷಗಳ ಮಧ್ಯದ ಚರ್ಚೆ, ಪಾಲೆಮಿಕ್ಸ್ ಅನವಶ್ಯಕವಾಗಿ ತಾರಕಕ್ಕೆ ಹೋಗುತ್ತಿತ್ತು. ಆಗ “ನೀನು ಟ್ರಾಟ್ಸ್ಕಿ, ನೀನು ಬುಖಾರಿನ್” ಎಂದು, “ನೀನು ಲಿನ್ ಪಿಯಾವೊನಂತಹ ಎಡ ದುಸ್ಸಾಹಸವಾದಿ”, ನೀನು ಲಿಯು ಶಾವೊ ಕಿ ಯಂತಹ ಬಲ ಪರಿಷ್ಕರಣವಾದಿ” ಎಂದು ಬಯ್ಯುವುದು, ಅದನ್ನು ನಂಬುವುದು ಸಾಮಾನ್ಯವಾಗಿತ್ತು! ಈಗ ಆ ಚಾಳಿ ಕೆಲವೊಂದು ತೀವ್ರಪಂಥೀಯವಾದಿಗಳಾದ ಚಿಕ್ಕ ಪುಟ್ಟ ಪಕ್ಷಗಳಲ್ಲಿ ಉಳಿದಿದೆ. ಈ ಪಕ್ಷಗಳು ನಮ್ಮ ಪಕ್ಷ ಮಾತ್ರ ಭಾರತದ ಕಾರ್ಮಿಕ ವರ್ಗದ ಪಕ್ಷ, ಉಳಿದವು ಪೆಟಿ ಬೂಶ್ರ್ವಾ ಪಕ್ಷಗಳು ಎಂಬ ನಿಲುವನ್ನು ತಾಳುತ್ತವೆ. ಅದು ಅವುಗಳ ಅಸ್ತಿತ್ವದ ಕಾರಣ ಮಾತ್ರವಲ್ಲ, ಅವರವರ ಪ್ರಾಮಾಣಿಕ ನಂಬುಗೆ ಸಹ. ಇನ್ನು ಸಶಸ್ತ್ರ ಹೋರಾಟದಲ್ಲಿರುವ ಸಂಘಟನೆಗಳು ಸಹ ಹೀಗೇ ಭಾವಿಸುತ್ತವೆ. ಅಲ್ಲದೆ ಅವರ ಸಂಘಟನಾತ್ಮಕ ವಿಧಾನಗಳೂ ಯಾರೊಡನೆಯೂ ಹೊಂದಿಕೆಯಾಗದಿರುವುದರಿಂದ ಅವರು ಚರ್ಚೆಯ ಪರಿಧಿಯಿಂದ ಹೊರಗೇ ಉಳಿಯುತ್ತಾರೆ.

ಹೀಗಾಗಿ ವಿವಿಧ ಕಮ್ಯುನಿಸ್ಟ್ ಪಕ್ಷಗಳ ವಿಲೀನ ಎಂಬುದು ಅಂತಿಮ ಲೆಕ್ಕಾಚಾರದಲ್ಲಿ ಸಿಪಿಐ ಮತ್ತು ಸಿಪಿಎಮ್ ಪಕ್ಷಗಳ ವಿಲೀನದ ಪ್ರಶ್ನೆಯಾಗಿ ಉಳಿಯುತ್ತದೆ. ಆದರೆ ಅದೂ ಸುಲಭವಲ್ಲ. ದಶಕಗಳಿಂದ ಬೆಳೆದು ಬಂದಿರುವ ನಿರಾಶೆ, ಅಪನಂಬುಗೆ, ತಳಮಟ್ಟದಲ್ಲಿ -ವಿಶೇಷವಾಗಿ ಯೂನಿಯನ್‍ಗಳಲ್ಲಿ – ತಲೆದೋರುವ ನಾಯಕತ್ವದ ಪ್ರಶ್ನೆ ಇವೆಲ್ಲ ಮೇಲೆ ಒಗ್ಗಟ್ಟು ಬಂದೊಡನೆ ಸ್ವಯಂಚಾಲಿತವಾಗಿ ಪರಿಹಾರ ಕಂಡುಕೊಳ್ಳುವ ಸಮಸ್ಯೆಗಳಲ್ಲ. ಇದಲ್ಲದೆ ದೃಷ್ಟಿಕೋನಗಳಲ್ಲೂ, ಕಾರ್ಯಶೈಲಿಯಲ್ಲೂ ಭಿನ್ನತೆಗಳಿರುತ್ತವೆ. ಒಬ್ಬರಿಗೆ ಇನ್ನೊಬ್ಬರ ನಿಲುವು ಗಡುಸು ಎನಿಸಿದರೆ, ಇನ್ನೊಬ್ಬರಿಗೆ ಮೊದಲಿನವರು ಸಡಿಲ ಎನಿಸಬಹುದು! “ಆಶೆಗಳೇ ಸವಾರಿಗೆ ಅಶ್ವಗಳಾಗುವುದಿಲ್ಲ”!!

ಹಾಗಿದ್ದರೆ ಕಾರ್ಯಸಾಧುವಾದ ಹೆಜ್ಜೆ ಯಾವುದು? ಎರಡೂ ಪಕ್ಷಗಳೂ ಎಲ್ಲ ಕಾರ್ಯಕ್ರಮ, ತೀರ್ಮಾನ ನೀತಿ ನಿರೂಪಣೆಗಳನ್ನು ಒಟ್ಟಾಗಿ ತೆಗೆದುಕೊಳ್ಳುವ ನಿರ್ಧಾರ ಮಾಡಬಹುದು. ಅದು ಗಟ್ಟಿಯಾಗುತ್ತಿದ್ದಂತೆ ಮುಂದೆ ವಿಲೀನಕ್ಕೆ ಭೂಮಿಕೆ ಸಿದ್ಧವಾಗುತ್ತದೆ. ಅದು ಅನೇಕ ವರ್ಷಗಳ ಪ್ರಕ್ರಿಯೆಯಾಗಬಹುದು. ಆದರೆ ಸಂಬಂಧಪಟ್ಟ ಪಕ್ಷಗಳ ದೃಷ್ಟಿಯಿಂದ ಅದು ಅತ್ಯಂತ ಮಹತ್ವದ ಹೆಜ್ಜೆ ಆಗುವುದರಲ್ಲಿ ಸಂದೇಹವಿಲ್ಲ.

ಅದೇನೇ ಇರಲಿ ಪ್ರತಿಗಾಮಿ ಪಕ್ಷಗಳು ವಿಜೃಂಭಿಸುತ್ತಿರುವ ಇಂದಿನ ಸಂದರ್ಭದಲ್ಲಿ ಎಡ ಪಕ್ಷಗಳು ಪರಸ್ಪರ ಹತ್ತಿರವಾಗಬೇಕಾದದ್ದು ಎಲ್ಲರಿಗೂ ಜೀವನ್ಮರಣದ ಪ್ರಶ್ನೆಯೇ. ಶೋಷಿತ ಸಮುದಾಯಗಳು ಇದಕ್ಕಾಗಿ ಹಂಬಲಿಸುತ್ತಾರೆ ಎಂಬುದನ್ನು ಮರೆಯಬಾರದು.

ಇದಕ್ಕಾಗಿ ಅನೇಕ ಸಣ್ಣ ಪುಟ್ಟ ಹೆಜ್ಜೆಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಏನೇ ಭಿನ್ನಾಭಿಪ್ರಾಯಗಳಿರಲಿ ಅದನ್ನು ಸೂಕ್ತವಾದ ವೇದಿಕೆಗಳಲ್ಲಿ ಬಗೆಹರಿಸಿಕೊಳ್ಳುವುದು, ಟೀಕೆ ಅನಗತ್ಯವಾಗಿ ಕಟುವಾಗದಂತೆ ಎಚ್ಚರವಹಿಸುವುದು ಅಗತ್ಯ. ಒಬ್ಬರು ಇನ್ನೊಬ್ಬರ ತ್ಯಾಗ- ಬಲಿದಾನಗಳನ್ನು ಗೌರವಿಸುವುದು, ಪ್ರಯತ್ನಗಳನ್ನು ಮೆಚ್ವಿಕೊಳ್ಳುವುದು, ತಾತ್ವಿಕ ಸಹನೆಯನ್ನು ಹೊಂದಿರುವುದೂ ಸಹ ಅತ್ಯಗತ್ಯ. ಸ್ನೇಹ ವಿಶ್ವಾಸಗಳನ್ನು ಬೆಳೆಸಿಕೊಳ್ಳುತ್ತಾ, ಪರಸ್ಪರ ವಿನಯದಿಂದ ಕಲಿಯುತ್ತಾ ಮುಂದೆ ಸಾಗಬೇಕು. ಇದರ ಅರ್ಥ ಸೈದ್ಧಾಂತಿಕವಾಗಿ ರಾಜಿಯಾಗಬೇಕು ಎಂದಲ್ಲ. ಯಾವ ಭಿನ್ನಾಭಿಪ್ರಾಯವನ್ನು ಎಷ್ಡು ದೂರ ಒಯ್ಯಬೇಕು, ಎಲ್ಲಿಗೆ ನಿಲ್ಲಿಸಬೇಕು ಎಂಬ ಯುಕ್ತಾಯುಕ್ತ ಪರಿಜ್ಞಾನ ಅಷ್ಟೇ. ಸ್ಟಾಲಿನ್ ಅವರು ಲೆನಿನ್ ವ್ಯಕ್ತಿತ್ವವನ್ನು ಮೆಚ್ಚಿಕೊಳ್ಳುತ್ತಾ ಹೇಳಿದ ಮಾತು ಸ್ಮರಣಾರ್ಹ: “ತಾತ್ವಿಕತೆಯಲ್ಲಿ ನಿಷ್ಠೆ, ಅನುಷ್ಠಾನದಲ್ಲಿ ಬಾಗಿ ಬಳುಕುವ ಆಸ್ಥೆ”!

ಒಟ್ಟಿನಲ್ಲಿ ಕ್ರಾಂತಿಕಾರಿ ರಾಜಕೀಯದಲ್ಲಿ ಆದರ್ಶವನ್ನು ಧ್ರುವ ನಕ್ಷತ್ರದಂತೆ ಪರಿಭಾವಿಸುತ್ತಲೇ ದೈನಂದಿನ ಹೋರಾಟದಲ್ಲಿ ಸತತವಾಗಿ ಕಾರ್ಯಕ್ಷಮತೆಗೆ, ಸಾಧ್ಯಾಸಾಧ್ಯತೆಗೆ ಗಮನಕೊಡುತ್ತಾ ಮುನ್ನಡೆಯಬೇಕು. ಬೂಶ್ರ್ವಾ ಪಕ್ಷಗಳೊಂದಿಗೆ ಸಹ ಹೋರಾಟಗಳಲ್ಲಿ ಹೆಜ್ಜೆ ಹಾಕಬೇಕಾಗಬಹುದು. ಗಯಟೆ ಮಹಾ ಕವಿಯ ಈ ಸಾಲುಗಳು ಮಾಕ್ರ್ಸ್‍ಗೆ ತುಂಬಾ ಪ್ರಿಯವಾಗಿತ್ತು:
“ಒಣ ಸಿದ್ಧಾಂತ ಬರಡು ಗೆಳೆಯ! ಬದುಕು ಮಾತ್ರ ನಿತ್ಯ ಹರಿದ್ವರ್ಣ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...