HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...