HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...