HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...