Homeಕರ್ನಾಟಕಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

ಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

- Advertisement -
| ಮಲ್ಲನಗೌಡರ್ |
ಮೇಲಿನ ತಲೆಬರಹದಷ್ಟೇ ಸಂಕೀರ್ಣವಾಗಿದೆ ರಾಜ್ಯದ ಸದ್ಯದ ರಾಜಕಾರಣ. ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸ್ನೇಹ, ಮುನಿಸು, ಅಧಿಕಾರ ಪಾಲು, ಆಂತರಿಕ ಭಿನ್ನಮತ ಮತ್ತು ಪಕ್ಷಗಳ ಬಲವರ್ಧನೆ, ನಾಯಕರ ವೈಯಕ್ತಿಕ ಆಕಾಂಕ್ಷೆಗಳು- ಇವೆಲ್ಲವೂ ಸದ್ಯ ಮೇಲುನೋಟಕ್ಕೆ ಭಿನ್ನ ಆಯಾಮಗಳಂತೆ ಕಂಡು ಬಂದರೂ, ಇವೆಲ್ಲವೂ ಹಾಸು ಹೊಕ್ಕಾಗಿ ಒಂದರೊಳಗೊಂದು ಹೆಣೆದುಕೊಂಡಿವೆ. ಸದಾ ಅಧಿಕಾರ ಹಿಡಿಯುವ ಕಾರ್ಯಾಚರಣೆಯನ್ನು ಜೀವಂತವೇ ಇಟ್ಟಿರುವ ಬಿಜೆಪಿಗೆ, 25 ಸೀಟುಗಳ ದಿಗ್ವಿಜಯದ ನಂತರ ಹೈಕಮಾಂಡಿನಿಂದ ಬೆಂಬಲವೂ ಸಿಕ್ಕಂತಿದೆ. ಇಡೀ ರಾಜ್ಯದ ಬಹುಭಾಗದಲ್ಲಿ ನೀರಿನ ಕೊರತೆಯಿದೆ, ಮಳೆಯ ವಿಳಂಬದಿಂದಾಗಿ ಜೂನ್ ಮೂರನೇ ವಾರದಲ್ಲೂ ಬಿತ್ತನೆಯಾಗಿಲ್ಲ. ರಾಜಧಾನಿಯಲ್ಲಿ ಮಾತ್ರ ‘ಕುರ್ಚಿಗಾಗಿ ಕಾಳು ಹಾಕುವ’, ಕಾಲೆಳೆಯುವ ರಾಜಕಾರಣ ಎಗ್ಗಿಲ್ಲದೇ ಸಾಗಿದೆ.
ಸದ್ಯಕ್ಕೆ ಮುಖ್ಯ ಬೆಳವಣಿಗೆ ಎನಿಸಿದ್ದು ಎಐಸಿಸಿಯು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು. ಇದರ ಜೊತೆಗೇ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಸೂಚಿಸಿರುವುದು. ಕಾಂಗ್ರೆಸ್ ಹೈಕಮಾಂಡಿನ ಈ ನಡೆಯಿಂದ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪ್ರಾಬಲ್ಯ ಇನ್ನಷ್ಟು ಹೆಚ್ಚಿದೆ, ಹೆಚ್ಚಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯರ ಮಾತಿಗೆ ತಲೆದೂಗಿರುವ ಹೈಮಾಂಡ್ ಪಕ್ಷ ಕಟ್ಟುವ ಗಟ್ಟಿ ತೀರ್ಮಾನಕ್ಕೆ ಬಂದಿದೆ. ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಬಿಟ್ಟು ಎಲ್ಲ ಹಂತದ ಪದಾಧಿಕಾರಿಗಳಿಗೆ ಗೇಟ್ ತೋರಿಸಲಾಗಿದೆ. ದಶಕಗಳಿಂದ ಪಕ್ಷ ಸಂಘಟನೆ ಮಾಡದೇ ಬರೀ ಅಧಿಕಾರದ ಲಾಭ ಪಡೆಯುತ್ತಲೇ ಬಂದಿದ್ದ ಬಹುಪಾಲು ವಿಸರ್ಜಿತ ಪದಾಧಿಕಾರಿಗಳ ಜಾಗಕ್ಕೆ ನಿಷ್ಟಾವಂತ ಕಾರ್ಯಕರ್ತರನ್ನು ನೇಮಿಸುವ ಕೆಲಸ ನಿರಾಂತಕದ ವಿಷಯ ಅಲ್ಲವೇ ಅಲ್ಲ. ಇತ್ತ ಸಿದ್ದರಾಮಯ್ಯ ಪಕ್ಷ ಸಂಘಟನೆ ಜೊತೆಗೆ ತಮ್ಮ ಶಾಸಕರು ಬಿಜೆಪಿ ಆಮಿಷಕ್ಕೆ ಬೀಳದಂತೆ ತಡೆಯುವ, ಮೂಲ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ತಡೆಯುವ ಜವಾಬ್ದಾರಿಗಳನ್ನು ತಾವೇ ಹೊತ್ತುಕೊಂಡು ಬಂದಿದ್ದಾರೆ.
ಮೈತ್ರಿಯಿಂದ ಕಾಂಗ್ರೆಸ್‍ಗೆ ನಷ್ಟ
ಇದನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಲೋಕಸಭೆಯಲ್ಲಿ ಮೈತ್ರಿ ಕಾರಣದಿಂದಾಗಿಯೇ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಗಿದ್ದು ಮತ್ತು ಅದರ ಲಾಭ ಬಿಜೆಪಿಗೆ ಹೋಗಿದ್ದು ಸತ್ಯ. ಹೀಗಾಗಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಂಡೇ, ಪಕ್ಷ ಸಂಘಟನೆ ಮಾಡುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಆದರೆ, ಬಿಜೆಪಿಯ ಆಪರೇಷನ್ ಕಮಲ ಮುಂದುವರೆದೇ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ತನ್ನ ಭಿನ್ನಮತೀಯ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತನ್ನೂ ಮಾಡಬೇಕಿದೆ. ಸದ್ಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಸರ್ಕಾರ ಬೀಳದೇ ಇದ್ದರೆ ಸಾಕು ಎಂಬ ಗುರಿಯಷ್ಟೇ ಇರುವಂತಿದೆ.
ಬಿಜೆಪಿ ಹೈಕಮ್ಯಾಂಡ್‍ನಿಂದ ಯಡ್ಡಿಗೆ ಗ್ರೀನ್ ಸಿಗ್ನಲ್?
ಲೋಕಸಭಾ ಚುನಾವಣೆಯ ಗೆಲುವು ಸಿಕ್ಕ ತಕ್ಷಣ ಭಾರೀ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದನ್ನು ಬಿಜೆಪಿ ನಾಯಕರು ಪದೇ ಪದೇ ಹೇಳಿಯೂ ಇದ್ದರು. ಆದರೆ, ಫಲಿತಾಂಶದ ನಂತರ ಅಂಥದ್ದೇನಕ್ಕೂ ಕೈ ಹಾಕಬೇಡಿ ಎಂದು ಹೈಕಮ್ಯಾಂಡ್ ಸೂಚಿಸಿದೆ ಎಂಬ ಮಾತನ್ನು ಸ್ವತಃ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‍ನೊಳಗಿನಿಂದಲೇ ಸರ್ಕಾರ ಬೀಳಿಸುವ ಕೆಲಸ ನಡೆಯುವ ಸಾಧ್ಯತೆ ಇರುವಾಗ, ನಾವೇಕೆ ಕೆಟ್ಟ ಹೆಸರು ತಂದುಕೊಳ್ಳಬೇಕು ಎಂಬುದು ಬಿಜೆಪಿಯ ಇರಾದೆಯಾಗಿತ್ತು. ಆಪರೇಷನ್ ಮಾಡುವುದಕ್ಕಿಂತ ಚುನಾವಣೆಗೇ ಹೋದರೆ ಗೆಲುವು ಬಿಜೆಪಿಯದ್ದೇ ಎನ್ನುವ ಅನಿಸಿಕೆಯೂ ಆ ವಲಯಗಳಲ್ಲಿತ್ತು. ಹಾಗಾಗಿ ಕೆಡವುವುದಕ್ಕಿಂತ, ತಾನೇ ಬಿದ್ದು ಹೋಗಲಿ ಎಂದು ಕಾಯುವುದೇ ಸರಿ ಎಂಬುದು ಬಿಜೆಪಿಯ ನಾಯಕರ ತೀರ್ಮಾನವಾಗಿತ್ತು.
ಆದರೆ, ಅದಾಗಲಿಲ್ಲ. ಯಡಿಯೂರಪ್ಪನವರಿಗೂ ಸುಮ್ಮನೇ ಕೂರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ‘ಆಪರೇಷನ್‍ಗೆ ಮುಂದಾಗಿ’ ಎಂಬ ಗ್ರೀನ್ ಸಿಗ್ನಲ್ ಬಂದಿದೆ ಎಂಬ ಸುದ್ದಿಗೆ ವಿಶೇಷ ಮಹತ್ವ ಬಂದಿದೆ. ಮಧ್ಯಂತರ ಚುನಾವಣೆ ಸದ್ಯಕ್ಕಂತೂ ಯಾರಿಗೂ ಬೇಡವಾಗಿದೆ. ಹಾಗಾಗಿ ಆಪರೇಷನ್ ನಡೆಯುವುದೇ ಲೇಸು ಎಂಬ ಪರಿಸ್ಥಿತಿ ಸದ್ಯಕ್ಕಿದೆ.
ಗ್ರಾಮ ವಾಸ್ತವ್ಯ ಜನಪ್ರಿಯತೆ ಮರಳಿ ಪಡೆಯುವುದಕ್ಕೋ, ಜನಪರ ಕೆಲಸ ಮಾಡುವುದಕ್ಕೋ?
ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರುವ ಜನರನ್ನು ಭೇಟಿ ಮಾಡುತ್ತಿದ್ದಾರಾದರೂ, ಅಧಿಕೃತ ಜನತಾದರ್ಶನವನ್ನು ನಡೆಸುತ್ತಿಲ್ಲ. ಗ್ರಾಮ ವಾಸ್ತವ್ಯವೂ ಇರುವುದಿಲ್ಲ ಎಂದು ಹೇಳಿದ್ದರು. ಆದರೀಗ, ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಬರದ ಬಿಸಿ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕೆಲಸ ಮಾಡುವ ತುರ್ತಂತೂ ಈಗಿದೆ. ಆ ಮೂಲಕ ಜನರ ಹತ್ತಿರಕ್ಕೆ ಹೋಗುವ ಅವಕಾಶವೂ ಇದೆ. ಆದರೆ, ಅದನ್ನು ಮಾಡುತ್ತಾರಾ ಅಥವಾ ಪ್ರಚಾರವಷ್ಟೇ ನಡೆಯುತ್ತದಾ ಎಂಬುದನ್ನು ಕಾದು ನೋಡಬೇಕು.
ಸಿದ್ದರಾಮಯ್ಯನವರ ಡಬಲ್ ಕಷ್ಟ
ಮುಖ್ಯಮಂತ್ರಿಯಾಗಿ ಇಳಿದಿರುವ ಸಿದ್ದರಾಮಯ್ಯನವರಿಗೆ ಎರಡರಲ್ಲೊಂದು ಆಗಲೇಬೇಕು. ಒಂದೋ ಅಧಿಕಾರದಲ್ಲಿರಬೇಕು, ಇಲ್ಲವೇ ಜನನಾಯಕನಾಗಿ ಪ್ರತಿಷ್ಠಾಪನೆಯಾಗಬೇಕು. ಕುಮಾರಸ್ವಾಮಿಯವರನ್ನು ಇಳಿಸಿದರೂ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಜೆಡಿಎಸ್‍ನವರು ಒಪ್ಪುವುದು ಸಾಧ್ಯವೇ ಇಲ್ಲ. ಇನ್ನು ಜನನಾಯಕನಾಗಬೇಕೆಂದರೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನೂ ಸಂಘಟಿಸಲು ಬೆವರು ಹರಿಸಬೇಕು. ಆದರೆ, ರಾಜ್ಯದೆಲ್ಲೆಡೆ ಹೋದಾಗ, ದೂರದ ದೆಹಲಿ ಸರ್ಕಾರವನ್ನು ಟೀಕಿಸುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರವನ್ನು ಬಯ್ಯುವುದಿರಲಿ, ಹೊಗಳುತ್ತಾ, ಸಮರ್ಥಿಸುತ್ತಾ ಇರಬೇಕಾಗುತ್ತದೆ. ಹೀಗಾಗಿ ಏನು ಮಾಡುವುದೋ ಗೊತ್ತಾಗದೇ, ರಾಜ್ಯ ಸರ್ಕಾರವನ್ನು ಅಭದ್ರತೆಯಲ್ಲಿಡುತ್ತಲೇ, ತಮ್ಮ ಪ್ರಸ್ತುತತೆ ಉಳಿಸಿಕೊಳ್ಳುವ ಕಸರತ್ತಷ್ಟೇ ಮಾಡುತ್ತಿದ್ದಾರೆ. ಅದರಾಚೆಗೆ, ರಾಜ್ಯದ ಜನರ ಹಿತಾಸಕ್ತಿಯಿಂದ ವರ್ತಿಸುವ ಕಷ್ಟಕರವಾದ ಕೆಲಸ ಅವರಿಂದಾಗುತ್ತಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...