Homeಕರ್ನಾಟಕಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

ಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

- Advertisement -
| ಮಲ್ಲನಗೌಡರ್ |
ಮೇಲಿನ ತಲೆಬರಹದಷ್ಟೇ ಸಂಕೀರ್ಣವಾಗಿದೆ ರಾಜ್ಯದ ಸದ್ಯದ ರಾಜಕಾರಣ. ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸ್ನೇಹ, ಮುನಿಸು, ಅಧಿಕಾರ ಪಾಲು, ಆಂತರಿಕ ಭಿನ್ನಮತ ಮತ್ತು ಪಕ್ಷಗಳ ಬಲವರ್ಧನೆ, ನಾಯಕರ ವೈಯಕ್ತಿಕ ಆಕಾಂಕ್ಷೆಗಳು- ಇವೆಲ್ಲವೂ ಸದ್ಯ ಮೇಲುನೋಟಕ್ಕೆ ಭಿನ್ನ ಆಯಾಮಗಳಂತೆ ಕಂಡು ಬಂದರೂ, ಇವೆಲ್ಲವೂ ಹಾಸು ಹೊಕ್ಕಾಗಿ ಒಂದರೊಳಗೊಂದು ಹೆಣೆದುಕೊಂಡಿವೆ. ಸದಾ ಅಧಿಕಾರ ಹಿಡಿಯುವ ಕಾರ್ಯಾಚರಣೆಯನ್ನು ಜೀವಂತವೇ ಇಟ್ಟಿರುವ ಬಿಜೆಪಿಗೆ, 25 ಸೀಟುಗಳ ದಿಗ್ವಿಜಯದ ನಂತರ ಹೈಕಮಾಂಡಿನಿಂದ ಬೆಂಬಲವೂ ಸಿಕ್ಕಂತಿದೆ. ಇಡೀ ರಾಜ್ಯದ ಬಹುಭಾಗದಲ್ಲಿ ನೀರಿನ ಕೊರತೆಯಿದೆ, ಮಳೆಯ ವಿಳಂಬದಿಂದಾಗಿ ಜೂನ್ ಮೂರನೇ ವಾರದಲ್ಲೂ ಬಿತ್ತನೆಯಾಗಿಲ್ಲ. ರಾಜಧಾನಿಯಲ್ಲಿ ಮಾತ್ರ ‘ಕುರ್ಚಿಗಾಗಿ ಕಾಳು ಹಾಕುವ’, ಕಾಲೆಳೆಯುವ ರಾಜಕಾರಣ ಎಗ್ಗಿಲ್ಲದೇ ಸಾಗಿದೆ.
ಸದ್ಯಕ್ಕೆ ಮುಖ್ಯ ಬೆಳವಣಿಗೆ ಎನಿಸಿದ್ದು ಎಐಸಿಸಿಯು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು. ಇದರ ಜೊತೆಗೇ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಸೂಚಿಸಿರುವುದು. ಕಾಂಗ್ರೆಸ್ ಹೈಕಮಾಂಡಿನ ಈ ನಡೆಯಿಂದ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪ್ರಾಬಲ್ಯ ಇನ್ನಷ್ಟು ಹೆಚ್ಚಿದೆ, ಹೆಚ್ಚಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯರ ಮಾತಿಗೆ ತಲೆದೂಗಿರುವ ಹೈಮಾಂಡ್ ಪಕ್ಷ ಕಟ್ಟುವ ಗಟ್ಟಿ ತೀರ್ಮಾನಕ್ಕೆ ಬಂದಿದೆ. ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಬಿಟ್ಟು ಎಲ್ಲ ಹಂತದ ಪದಾಧಿಕಾರಿಗಳಿಗೆ ಗೇಟ್ ತೋರಿಸಲಾಗಿದೆ. ದಶಕಗಳಿಂದ ಪಕ್ಷ ಸಂಘಟನೆ ಮಾಡದೇ ಬರೀ ಅಧಿಕಾರದ ಲಾಭ ಪಡೆಯುತ್ತಲೇ ಬಂದಿದ್ದ ಬಹುಪಾಲು ವಿಸರ್ಜಿತ ಪದಾಧಿಕಾರಿಗಳ ಜಾಗಕ್ಕೆ ನಿಷ್ಟಾವಂತ ಕಾರ್ಯಕರ್ತರನ್ನು ನೇಮಿಸುವ ಕೆಲಸ ನಿರಾಂತಕದ ವಿಷಯ ಅಲ್ಲವೇ ಅಲ್ಲ. ಇತ್ತ ಸಿದ್ದರಾಮಯ್ಯ ಪಕ್ಷ ಸಂಘಟನೆ ಜೊತೆಗೆ ತಮ್ಮ ಶಾಸಕರು ಬಿಜೆಪಿ ಆಮಿಷಕ್ಕೆ ಬೀಳದಂತೆ ತಡೆಯುವ, ಮೂಲ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ತಡೆಯುವ ಜವಾಬ್ದಾರಿಗಳನ್ನು ತಾವೇ ಹೊತ್ತುಕೊಂಡು ಬಂದಿದ್ದಾರೆ.
ಮೈತ್ರಿಯಿಂದ ಕಾಂಗ್ರೆಸ್‍ಗೆ ನಷ್ಟ
ಇದನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಲೋಕಸಭೆಯಲ್ಲಿ ಮೈತ್ರಿ ಕಾರಣದಿಂದಾಗಿಯೇ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಗಿದ್ದು ಮತ್ತು ಅದರ ಲಾಭ ಬಿಜೆಪಿಗೆ ಹೋಗಿದ್ದು ಸತ್ಯ. ಹೀಗಾಗಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಂಡೇ, ಪಕ್ಷ ಸಂಘಟನೆ ಮಾಡುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಆದರೆ, ಬಿಜೆಪಿಯ ಆಪರೇಷನ್ ಕಮಲ ಮುಂದುವರೆದೇ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ತನ್ನ ಭಿನ್ನಮತೀಯ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತನ್ನೂ ಮಾಡಬೇಕಿದೆ. ಸದ್ಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಸರ್ಕಾರ ಬೀಳದೇ ಇದ್ದರೆ ಸಾಕು ಎಂಬ ಗುರಿಯಷ್ಟೇ ಇರುವಂತಿದೆ.
ಬಿಜೆಪಿ ಹೈಕಮ್ಯಾಂಡ್‍ನಿಂದ ಯಡ್ಡಿಗೆ ಗ್ರೀನ್ ಸಿಗ್ನಲ್?
ಲೋಕಸಭಾ ಚುನಾವಣೆಯ ಗೆಲುವು ಸಿಕ್ಕ ತಕ್ಷಣ ಭಾರೀ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದನ್ನು ಬಿಜೆಪಿ ನಾಯಕರು ಪದೇ ಪದೇ ಹೇಳಿಯೂ ಇದ್ದರು. ಆದರೆ, ಫಲಿತಾಂಶದ ನಂತರ ಅಂಥದ್ದೇನಕ್ಕೂ ಕೈ ಹಾಕಬೇಡಿ ಎಂದು ಹೈಕಮ್ಯಾಂಡ್ ಸೂಚಿಸಿದೆ ಎಂಬ ಮಾತನ್ನು ಸ್ವತಃ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‍ನೊಳಗಿನಿಂದಲೇ ಸರ್ಕಾರ ಬೀಳಿಸುವ ಕೆಲಸ ನಡೆಯುವ ಸಾಧ್ಯತೆ ಇರುವಾಗ, ನಾವೇಕೆ ಕೆಟ್ಟ ಹೆಸರು ತಂದುಕೊಳ್ಳಬೇಕು ಎಂಬುದು ಬಿಜೆಪಿಯ ಇರಾದೆಯಾಗಿತ್ತು. ಆಪರೇಷನ್ ಮಾಡುವುದಕ್ಕಿಂತ ಚುನಾವಣೆಗೇ ಹೋದರೆ ಗೆಲುವು ಬಿಜೆಪಿಯದ್ದೇ ಎನ್ನುವ ಅನಿಸಿಕೆಯೂ ಆ ವಲಯಗಳಲ್ಲಿತ್ತು. ಹಾಗಾಗಿ ಕೆಡವುವುದಕ್ಕಿಂತ, ತಾನೇ ಬಿದ್ದು ಹೋಗಲಿ ಎಂದು ಕಾಯುವುದೇ ಸರಿ ಎಂಬುದು ಬಿಜೆಪಿಯ ನಾಯಕರ ತೀರ್ಮಾನವಾಗಿತ್ತು.
ಆದರೆ, ಅದಾಗಲಿಲ್ಲ. ಯಡಿಯೂರಪ್ಪನವರಿಗೂ ಸುಮ್ಮನೇ ಕೂರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ‘ಆಪರೇಷನ್‍ಗೆ ಮುಂದಾಗಿ’ ಎಂಬ ಗ್ರೀನ್ ಸಿಗ್ನಲ್ ಬಂದಿದೆ ಎಂಬ ಸುದ್ದಿಗೆ ವಿಶೇಷ ಮಹತ್ವ ಬಂದಿದೆ. ಮಧ್ಯಂತರ ಚುನಾವಣೆ ಸದ್ಯಕ್ಕಂತೂ ಯಾರಿಗೂ ಬೇಡವಾಗಿದೆ. ಹಾಗಾಗಿ ಆಪರೇಷನ್ ನಡೆಯುವುದೇ ಲೇಸು ಎಂಬ ಪರಿಸ್ಥಿತಿ ಸದ್ಯಕ್ಕಿದೆ.
ಗ್ರಾಮ ವಾಸ್ತವ್ಯ ಜನಪ್ರಿಯತೆ ಮರಳಿ ಪಡೆಯುವುದಕ್ಕೋ, ಜನಪರ ಕೆಲಸ ಮಾಡುವುದಕ್ಕೋ?
ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರುವ ಜನರನ್ನು ಭೇಟಿ ಮಾಡುತ್ತಿದ್ದಾರಾದರೂ, ಅಧಿಕೃತ ಜನತಾದರ್ಶನವನ್ನು ನಡೆಸುತ್ತಿಲ್ಲ. ಗ್ರಾಮ ವಾಸ್ತವ್ಯವೂ ಇರುವುದಿಲ್ಲ ಎಂದು ಹೇಳಿದ್ದರು. ಆದರೀಗ, ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಬರದ ಬಿಸಿ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕೆಲಸ ಮಾಡುವ ತುರ್ತಂತೂ ಈಗಿದೆ. ಆ ಮೂಲಕ ಜನರ ಹತ್ತಿರಕ್ಕೆ ಹೋಗುವ ಅವಕಾಶವೂ ಇದೆ. ಆದರೆ, ಅದನ್ನು ಮಾಡುತ್ತಾರಾ ಅಥವಾ ಪ್ರಚಾರವಷ್ಟೇ ನಡೆಯುತ್ತದಾ ಎಂಬುದನ್ನು ಕಾದು ನೋಡಬೇಕು.
ಸಿದ್ದರಾಮಯ್ಯನವರ ಡಬಲ್ ಕಷ್ಟ
ಮುಖ್ಯಮಂತ್ರಿಯಾಗಿ ಇಳಿದಿರುವ ಸಿದ್ದರಾಮಯ್ಯನವರಿಗೆ ಎರಡರಲ್ಲೊಂದು ಆಗಲೇಬೇಕು. ಒಂದೋ ಅಧಿಕಾರದಲ್ಲಿರಬೇಕು, ಇಲ್ಲವೇ ಜನನಾಯಕನಾಗಿ ಪ್ರತಿಷ್ಠಾಪನೆಯಾಗಬೇಕು. ಕುಮಾರಸ್ವಾಮಿಯವರನ್ನು ಇಳಿಸಿದರೂ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಜೆಡಿಎಸ್‍ನವರು ಒಪ್ಪುವುದು ಸಾಧ್ಯವೇ ಇಲ್ಲ. ಇನ್ನು ಜನನಾಯಕನಾಗಬೇಕೆಂದರೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನೂ ಸಂಘಟಿಸಲು ಬೆವರು ಹರಿಸಬೇಕು. ಆದರೆ, ರಾಜ್ಯದೆಲ್ಲೆಡೆ ಹೋದಾಗ, ದೂರದ ದೆಹಲಿ ಸರ್ಕಾರವನ್ನು ಟೀಕಿಸುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರವನ್ನು ಬಯ್ಯುವುದಿರಲಿ, ಹೊಗಳುತ್ತಾ, ಸಮರ್ಥಿಸುತ್ತಾ ಇರಬೇಕಾಗುತ್ತದೆ. ಹೀಗಾಗಿ ಏನು ಮಾಡುವುದೋ ಗೊತ್ತಾಗದೇ, ರಾಜ್ಯ ಸರ್ಕಾರವನ್ನು ಅಭದ್ರತೆಯಲ್ಲಿಡುತ್ತಲೇ, ತಮ್ಮ ಪ್ರಸ್ತುತತೆ ಉಳಿಸಿಕೊಳ್ಳುವ ಕಸರತ್ತಷ್ಟೇ ಮಾಡುತ್ತಿದ್ದಾರೆ. ಅದರಾಚೆಗೆ, ರಾಜ್ಯದ ಜನರ ಹಿತಾಸಕ್ತಿಯಿಂದ ವರ್ತಿಸುವ ಕಷ್ಟಕರವಾದ ಕೆಲಸ ಅವರಿಂದಾಗುತ್ತಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...