Homeರಾಜಕೀಯಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

ಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

- Advertisement -
- Advertisement -
  • ಟೀಮ್ ಗೌರಿ |
ಅಪ್ಪಚ್ಚು
ಚಂದ್ರಕಲಾ
ಜೀವಿಜಯ

ಕೊಡಗಿನ ಮಡಿಕೇರಿಯ ಹಾಲಿ ಶಾಸಕ ಅಪ್ಪಚ್ಚು ರಂಜನ್. ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್‍ನ ಚಂದ್ರಕಲಾರವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದ್ದು ಕಾಂಗ್ರೆಸ್ಸಿನಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮತ್ತು ಎಂಎಲ್‍ಸಿ ವೀಣಾ ಅಚ್ಚಯ್ಯ ಇಬ್ಬರೂ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸುವ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಹೊರತು ಮಿಕ್ಕ ಸಮಯದಲ್ಲಿ ನಾಪತ್ತೆಯಾಗಿರುತ್ತಾರೆ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಿಂದ ದೂರವಿದ್ದು ಈ ಬಾರಿ ಒಂದೊಳ್ಳೆಯ ಅವಕಾಶವಿದ್ದು ಕಾಂಗ್ರೆಸ್ ತಾನಾಗಿಯೇ ಕೈಚೆಲ್ಲಿಕೊಂಡಂತಾಗಿದೆ. ಜೆಡಿಎಸ್ ಅಭ್ಯರ್ಥಿ ಜೀವಿಜಯ ಅವರ ಬಗ್ಗೆ ಒಳ್ಳೆ ಅಭಿಪ್ರಾಯಗಳೇನೋ ಕೇಳಿಬರುತ್ತಿವೆಯಾದರೂ ಕಳೆದ ಬಾರಿ ಸೋತುಹೋದ ಇವರು ಮತ್ತೆ ಜನರ ಬಳಿ ಬರಲೇ ಇಲ್ಲವೆಂಬ ಆರೋಪವಿದೆ. ಸ್ವಂತ ಊರಿಗೆ 1 ಕಿಲೋಮೀಟರ್ ದೂರದಲ್ಲಿರುವ ಐಗೂರು ಮಸೀದಿಯ ಬಳಿ ಬಹಿರಂಗವಾಗಿ ಕುರಾನ್ ಸುಟ್ಟಾಗ ಸೌಜನ್ಯಕ್ಕೂ ಅಲ್ಪಸಂಖ್ಯಾತರನ್ನು ಸಂತೈಸದಿರುವುದು ಅವರ ಮೇಲೆ ಅಸಮಾಧಾನ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ಚಂದ್ರಕಲಾರವರು ಮತ್ತು ಜೆಡಿಎಸ್ ಜೀವಿಜಯ ಇಬ್ಬರೂ ಅರೆಭಾಷೆ ಗೌಡರಾಗಿರುವ ಕಾರಣ ಮತಗಳು ವಿಭಜನೆಯಾಗುವುದು ಖಚಿತವಾಗಿದೆ. ಈ ಕಾರಣಕ್ಕೆ ಬಿಜೆಪಿಯೇತರ ಶಾಸಕರು ಗೆಲ್ಲುವ ಎಲ್ಲ ಸಾಧ್ಯತೆಗಳೂ ಸಹ ಕ್ಷೀಣಿಸುವ ಸಾಧ್ಯತೆಗಳಿವೆ. ಹಾಲಿ ಶಾಸಕ ವಿರೋಧಿ ಅಲೆಯ ನಡುವೆಯೂ ಅಪ್ಪಚ್ಚು ರಂಜನ್ ಮತ್ತೆ ಆಯ್ಕೆಯಾದರೂ ಆಶ್ಚರ್ಯವಿಲ್ಲ.

ಬೋಪಯ್ಯ

ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರದೇ ಮೇಲುಗೈ. ಕಾಂಗ್ರೆಸ್‍ನಿಂದ ಕೊಡವ ಸಮಾಜದ ಅರುಣ್ ಮಾಚಯ್ಯ, ಜೆಡಿಎಸ್‍ನಿಂದ ಸಂಕೇತ ಪೂವಯ್ಯ ಮತ್ತು ಬಿಜೆಪಿ ಕೆ.ಜಿ.ಬೋಪಯ್ಯ ಇವರು ಕಣದಲ್ಲಿದ್ದಾರೆ. ಕೊಡವ ಸಮಾಜ ಇಲ್ಲಿಯವರೆಗೆ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡೇ ಬಂದಿದ್ದು ಅದು ತಮ್ಮ ಪಾರುಪತ್ಯಕ್ಕೆ ಧಕ್ಕೆ ತರಲಾರದು ಎಂದು ಬಲವಾಗಿ ನಂಬಿದೆ. ಆ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೊಡವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೂ ಸತತವಾಗಿ ಸೋಲುತ್ತಿದ್ದಾರೆ. ಸ್ವತಃ ಬಿಜೆಪಿಯೇ ಹಿಂದುಮುಂದು ನೋಡಿ ಬೋಪಯ್ಯಗೆ ಟಿಕೆಟ್ ಕೊಟ್ಟರೂ ಕೊಡವರು ಮತ್ತು ಮಲಯಾಳಿ ಈಡಿಗರು ಒಕ್ಕಲಿಗ ಕೆ.ಜಿ.ಬೋಪಯ್ಯರನ್ನೇ ಗೆಲ್ಲಿಸಬೇಕೆಂದು ಬಗೆದಿರುವಂತಿದೆ. ಇಲ್ಲೀವರೆಗೂ ಈ ಎರಡೂ ಜನಾಂಗ ತಮ್ಮಲ್ಲಿರುವ ಅಧಿಕಾರವನ್ನು ಕಾಯ್ದಿರಿಸಿಕೊಳ್ಳಲು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ದಾರಿ ಹಿಡಿಯುವ ಸಾಧ್ಯತೆಗಳೇ ಹೆಚ್ಚಿದೆಯಾದರು ಸದ್ಯದ ಮಟ್ಟಿಗೆ ಕಾಂಗ್ರೆಸ್‍ನ ಅರುಣ್ ಮಾಚಯ್ಯ ಕೂಡಾ ಗೆಲುವಿನ ಸಂಭಾವ್ಯತೆಯನ್ನು ಉಳಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...