Homeಸಿನಿಮಾಸಿನಿ ಸುದ್ದಿಕಿಚ್ಚನ ಆ ಎರಡು ಭೇಟಿಗಳು

ಕಿಚ್ಚನ ಆ ಎರಡು ಭೇಟಿಗಳು

- Advertisement -
- Advertisement -

ಕಿಚ್ಚ ಸುದೀಪ್ ಸಿನಿಮಾ ಫ್ರೇಮಿನ ಆಚೆಗೂ ತುಂಬಾ ಡೈನಾಮಿಕ್ ವ್ಯಕ್ತಿ. ಹಾಗಾಗಿ ಒಂದಿಲ್ಲೊಂದು ಕಾರಣಕ್ಕೆ ಅವರ ಹೆಸರು ಸುದ್ದಿಯಲ್ಲಿ ಇದ್ದೇ ಇರುತ್ತೆ. ಈಗ ಸುದೀಪ್ ಅಂತಹ ಮತ್ತೊಂದು ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಕುಮಾರಣ್ಣನ ಮನೆ ಹೊಕ್ಕು ಬರೋಬ್ಬರಿ ಎರಡು ಗಂಟೆ ಕಾಲಕಳೆಯುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಅದಾದ ಬೆನ್ನಿಗೇ ದಿಢೀರ್ ಅಂತ ಸಿಎಂ ಸಿದ್ರಾಮಯ್ಯರನ್ನು ಭೇಟಿ ಮಾಡಿ ಜನರಲ್ಲಿ ಸಿಕ್ಕಾಪಟ್ಟೆ ಕನ್‍ಫ್ಯೂಶನ್ ಕ್ರಿಯೇಟ್ ಮಾಡಿದ್ದಾರೆ. ಆಂದ್ರವಾಡು ನಟ ಪವನ್ ಕಲ್ಯಾಣ್ ಮೂಲಕ ತೆಲುಗು ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಲಗ್ಗೆ ಹಾಕಲು ಸಜ್ಜಾಗಿರುವ ಕುಮಾರಣ್ಣರನ್ನು ಅದ್ಯಾವಾಗ ಸುದೀಪ್ ಭೇಟಿಯಾಗಿದ್ದರೋ ಆಗ ಸುದೀಪ್ ಜೆಡಿಎಸ್ ಅಭ್ಯರ್ಥಿಯಾಗಿ, ನಾಯಕ ಮತಗಳು ಜೋರಾಗಿರುವ ದುರ್ಗ ಅಥವಾ ಬಳ್ಳಾರಿ ಕಡೆ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬಂದಿದ್ದವು. ಒಂದೊಮ್ಮೆ ಸ್ಪರ್ಧಿಸದಿದ್ದರೂ, ಜೆಡಿಎಸ್ ಪರ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಇತ್ತು.

ಯಾಕಂದ್ರೆ, ಸುದೀಪ್ ಯಾವತ್ತೂ ರಾಜಕಾರಣದ ಆಯ್ಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದವರಲ್ಲ. ರಾಜಕಾರಣದ ವಿಷಯ ಬಂದಾಗ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡಿ ಮುಗಿಸಿಬಿಡುತ್ತಿದ್ದರು. ಕುಮಾರಣ್ಣನ ಭೇಟಿಯ ನಂತರ ಇದೀಗ ಸಿದ್ದರಾಮಯ್ಯರನ್ನೂ ಭೇಟಿ ಮಾಡಿರುವ ಸುದೀಪ್ ಮತ್ತಷ್ಟೂ ಟಿಆರ್‍ಪಿ ಸರಕಾಗಿ ಬದಲಾಗಿದ್ದಾರೆ. ಎರಡು ವಿರುದ್ಧ ಧೃವಗಳ ನಡುವೆ ಸುದೀಪ್‍ನಂತಹ ನಟ ಅದ್ಯಾವ ಪೊಲಿಟಿಕಲ್ ಗೇಮ್ ನಡೆಸುತ್ತಿದ್ದಾರೆ ಎನ್ನುವ ಕುತೂಹಲ ಜನರನ್ನೂ ಕಾಡುತ್ತಿದೆ. ತಮ್ಮ ಸಾರಥ್ಯದಲ್ಲಿ ನಡೆಯುತ್ತಿರೋ `ಕೆಸಿಸಿ’ ಕ್ರಿಕೆಟ್ ಕಪ್‍ನ ಉದ್ಘಾಟನೆಗೆ ಆಹ್ವಾನಿಸಲು ಸಿಎಂ ಮನೆಗೆ ಹೋಗಿದ್ದರು ಅಷ್ಟೇ ಎಂಬ ನೆಪ ಕಿಚ್ಚ ಪಾಳಯದಿಂದ ಕೇಳಿಬರುತ್ತಿದೆಯಾದರು, ಮುಂದೆ ಈ ಭೇಟಿಗಳು ಪೊಲಿಟಿಕಲ್ ಪರಿಣಾಮಗಳಾಗಿ ಹೊರಹೊಮ್ಮಿದರೆ ಅಚ್ಚರಿಯೂ ಇಲ್ಲ… ಅಟ್ ದಿ ಸೇಮ್ ಟೈಮ್, ತಪ್ಪೂ ಅಲ್ಲ ಬಿಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...