Homeರಾಜಕೀಯಇದು ಮೊದಲೇ ಹೊಳೀಲಿಲ್ಲ ಬ್ರದರ್!

ಇದು ಮೊದಲೇ ಹೊಳೀಲಿಲ್ಲ ಬ್ರದರ್!

- Advertisement -
- Advertisement -

ಸದ್ಯದ ಕರ್ನಾಟಕದಲ್ಲಿ ಎಲ್ಲಿ ನೋಡಿದರೂ ಅಳುಮೋರೆ ಕಾಣುತ್ತಿವೆ. ಸರಳ ಬಹುಮತ ಪಡೆವ ಸಂತೋಷದಲ್ಲಿದ್ದ ಸಿದ್ದು ಮುಖ ನೋಡಲಾಗುತ್ತಿಲ್ಲ. ಗೆದ್ದು ಬಹುಮತ ಪಡೆದು 24 ಗಂಟೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಪಡೆವ ತಯಾರಿ ನಡೆಸಿದ್ದ ಯಡ್ಡಿ ಮುಖ ಕಾದ ಹೆಂಚಿನಂತೆ ರವಗುಡುತ್ತಿದೆ. ಇನ್ನು ಗೆದ್ದ 24 ಗಂಟೆಯಲ್ಲಿ ರೈತರ ಸಾಲ ಫೈಸಲ್ ಎಂದಿದ್ದ ಕುಮಾರಣ್ಣ ಪೈಲ್ಸ್ ವ್ಯಾಧಿಯ ಮುಖಭಾವದಲ್ಲಿ ಅವುಡು ನುರಿಯುತ್ತಿದ್ದಾರೆ. ಹಾಗೂ ತಡೆದುಕೊಳ್ಳಲಾರದವರಂತೆ ಎಮ್ಮೆಕರುವಿನಂತೆ ಅತ್ತೇಬಿಟ್ಟಿದ್ದಾರೆ. ಇದರ ನಿಗೂಢ ಕಾರಣ ತಿಳಿಯಲು ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ನಿನಗ್ಯಾರಿದ್ದರೇನೂ ಸುಖವಿಲ್ಲ ಪ್ರಭುವೇ, ದಾರಿ ಸುಖವಿಲ್ಲ, ಬಾಯಾರಿತು ಎಂದು ಕಾಂಗೈ ಬಾಗಿಲಿಗೋದೆ, ಬಾಗಿಲ ತೆಗೆಯದೆ ಗದರಿದರಲ್ಲೋ………. ‘ಹಲೋ ಯಾರು’
“ನಾನು ಸಾರ್ ಯಾಹೂ”
“ಒಂದು ನಿಮಿಷ ಬ್ರದರ್ ನಂತರ ಕಾಲ್ ಮಾಡ್ತೀನಿ”
“ನನಿಗೂ ಒಂದೇ ನಿಮಿಷ ಸಾರ್ ಡೆಡ್‍ಲೈನು”
“ಅದೇನು ಕೇಳಿ”
“ಯಾಕ್ ಸಾರ್ ಸೊರಗರಿಯೋ ಶಬ್ದ, ಅಳತಾಯಿರಂಗಿದೆ”
“ಇನ್ನೇನು ಮಾಡ್ಲಿ ಬ್ರದರ್, ಈಚೆಗೆ ಯಾಕೋ ತುಂಬಾ ಅಳು ಬರ್ತಾಯಿದೆ”
“ಅದು ಹೇರ್ಡಿಟಿ ಸಾರ್ ತಡಕೋಬೇಕು”
“ಹೇರ್ಡಿಟಿನಾ”
“ಹೌದು ಸಾರ್ ದೇವೇಗೌಡ್ರು ತುಂಬ ಅಳತಿದ್ರು”
“ತಂದೆಯವರ ಅಳು ಯಾಕೆ ಅಂದ್ರೇ, ಅದಕ್ಕೆ ಒಂದು ಉನ್ನತ ಮಟ್ಟದ ಕಾರಣ ಇರತಿತ್ತು”
“ನಿಮಗೆ ಕಾರಣ ಇಲ್ದೇ ಅಳು ಬರುತ್ತ”
“ಹೌದು ಬ್ರದರ್”
“ಸಾರ್, ಯಾವುದ್ಕೂ ಮನೋ ವೈದ್ಯರ ಕೇಳಿಬಿಡಿ, ಯಾಕಂದ್ರೆ ಮುಖ್ಯಮಂತ್ರಿ ಸಾರ್ವಜನಿಕವಾಗಿ ಅಳುಬಾರ್ದು. ನೋಡಿ ಈಗಾಗ್ಲೆ ಮಂಡ್ಯದ ಕಡೆ ಕೆಲುವು ತಿಕ್ಕಲಗಳು, ತಾವು ಅಳು ಸುರು ಮಾಡಿಕೊಂಡಿರದಲ್ದೇ, ಕಾಂಗ್ರೆಸ್‍ನವುರ ಬೈತಾ ಅವೆ. ಯಂಗೆ ಅಂದ್ರೆ, ಕಿವಿಕೊಟ್ಟು ಕೇಳಕ್ಕಾಗಲ್ಲ. ಇನ್ನೂ ಕೆಲುವು, ಆ ಸಿದ್ದರಾಮಯ್ಯನೇ ಕಾರಣ ಅಂತ, ಜಾತಿ ಹೆಸರಿಡದೇ ಬೈತಾ ಕುಂತವೇ. ಆದ್ರಿಂದ ನಿಮಗೆ ಅಳು ಬಂದಾಗ ಒಂದು ರೂಮಿಗೆ ಹೋಗಿ ಅತ್ತು ಬುಡಿ, ಸಾರ್ವಜನಿಕವಾಗಿ ಅಳುಬೇಡಿ”
“ನೋಡಿ ಬ್ರದರ್, ಸಡನ್ನಂತ ಅಳು ಬಂದಾಗ ರೂಮು ಹುಡುಕಿಕೊಂಡು ಓಡಕ್ಕಾಗಲ್ಲ, ಒಂದ ಮಾಡ್ತಕ್ಕಂತ ಅಥವಾ ಕಕ್ಕಸ್ ಮಾಡೋ ಸಂದರ್ಭ ಸೃಷ್ಟಿಯಾದಾಗ ಆ ತರದಲ್ಲಿ ಒಂದು ತೀರ್ಮಾನ ತಗೊಳೋ ಬಗ್ಗೆ ಯೋಚಿಸಬವುದು. ಸಡನ್ನಂತ ಅಳು ಬಂದ್ರೆ ಅಳಬೇಕಾಗುತ್ತೆ”
“ಅಳು ಬಂದಾಗ ನಿಮ್ಮ ವೈರಿಗಳ ನೆನೆಸಿಕೊಳ್ಳಿ ನಿಂತೋಯ್ತದೆ”
“ಈಗ್ಯಾರು ವೈರಿಗಳಿಲ್ಲ ಬ್ರದರ್”
“ನಿಜ ಸಾರ್, ವೈರಿಗಳನ್ನೆಲ್ಲಾ ಕರದು ಒಂದೇ ಟೇಬಲಿನಲ್ಲಿ ಊಟ ಹಾಕಿರೋದ್ರಿಂದ ಅವುರೂ ಇಲ್ಲ. ನನಗನ್ನಿಸುತ್ತೆ ಸಾರ್ ನಿಮ್ಮ ಅಳುವಿಗೆ ಖಾಸಗಿ ಕಾರಣ ಇರಬುವುದು”
“ಖಾಸಗಿ ಕಾರಣ ಯಾವುದೂ ನಮ್ಮ ಬಾವುನೆಗೆ ಬರ್ತಾಯಿಲ್ಲ”
“ಅದು ನಿಮಗೆ ಗೊತ್ತಾಗಲ್ಲ ಸಾರ್, ಸಿದ್ದರಾಮಯ್ಯ ಒಂದು ಸತಿ ಅತೃ. ಯಾಕಂದ್ರೆ ಮಗ ತೀರೋಗಿದ್ದ. ಎಡೂರಪ್ಪ ಒಂದು ಸತಿ ಬಿಕ್ಕಡಿಸಿಕಂಡು ಅತೃ ಯಾಕೇಳಿ?”
“ನೀವೆ ಹೇಳಿ”
“ಶೋಭಕ್ಕನ್ನ ಸಂಪುಟದಿಂದ ತೆಗೀರಿ ಅಂತ ರೆಡ್ಡಿಗಳು ಗುಡ್ಡ ಹಗಿಯದ್ನೆ ನಿಲ್ಲಿಸಿದ್ರು. ಆಗ ಎಡೂರಪ್ಪ ಯಮ್ಮೆ ಕಳಕಂಡ ಕೋಣನ ತರ ಅತ್ತಿದ್ರು. ಹಾಗೆ ನಿಮ್ಮದು ಯಾವುದೋ ಖಾಸಗಿ ಕಾರಣ ಇರಬವುದು ಹುಡುಕಿ”
“ಇಲ್ಲ ಬ್ರದರ್”
“ಒಂದು ಕೆಲಸ ಮಾಡಿ ಸಾರ್, ರಾಧಕ್ಕನ ಮನೆಗೋಗಿ ಇದ್ದು, ಶಮಿಕನ್ನ ಮುದ್ದಾಡಿ ಬಂದ್ರೆ ಅಳು ನಿಲ್ಲಬವುದು ನೋಡಿ”
“ಅದ್ಯಲ್ಲ ಈಗ ಸಾಧ್ಯಯಿಲ್ಲ”
“ಅದೇ ಅಳುವಿನ ಮೂಲ ಇರಬವುದು ಸಾರ್”
“ಇಲ್ಲ ಬ್ರದರ್, ನನ್ನ ಅಳುಗೆ ಒಂದೇ ಕಾರಣ ಇಲ್ಲ ಅಂತ ನನ್ನ ಮನಸು ಹೇಳ್ತಾಯಿದೆ”
“ಇರಬವುದು ಸಾರ್, ದಡ್ಡತನಗಳಿಂದ ಮಾಡಿಕೊಂಡ ಅನಾಹುತಗಳೂ ಕಾರಣ ಆಗಿರಬವುದು”
“ದಡ್ಡತನ ನಾನು ಯಾವತ್ತೂ ಮಾಡಿಲ್ಲ ಬ್ರದರ್, ಯಲ್ಲಾ ಸನ್ನಿವೇಶಗಳನ್ನ ತುಂಬಾ ಬುದ್ದಿವಂತಿಕೆಯಿಂದ್ಲೆ ಸರಿಪಡಿಸತಕ್ಕಂತ ಕಾರ್ಯವನ್ನೆ ಪ್ಳಾನ್ ಮಾಡಿದ್ದೀನಿ”
“ನೋಡಿ ಸಾರ್, ನಿಮ್ಮ ಇವತ್ತಿನ ಸ್ಥಿತಿ ಊಹೆ ಮಾಡಿದ್ರೋ ಇಲ್ಲವೋ. ಮುಖ್ಯಮಂತ್ರಿಯಾದ 25 ಗಂಟೇಲಿ ರೈತರ ಸಾಲ ಮನ್ನಾ ಅಂದ್ರಿ, ರೈತರಿಗೆ ನೀವು ನನ್ನ ಉಳಿಸಿದ್ರೆ ನಾನು ನಿಮ್ಮನ್ನ ಉಳುಸ್ತೀನಿ ಅಂದ್ರಿ, ಇನ್ನ ನಿಮ್ಮ ಪ್ರಣಾಳಿಕೇಲಿದ್ದ ಅಶ್ವಾಸನೆ ನೋಡಿದ್ರೆ ಯಂಥಾ ಸರಕಾರ ಬಂದ್ರೂ ಈಡೇರಸಕ್ಕೆ ಸಾಧ್ಯವೇಯಿಲ್ಲ, ಅಂಗಿದ್ದೋ. ನಿಮಗೇನಾರ ತಲೆ ಇದ್ರೆ ನನ್ನ ಅಧಿಕಾರದ ಅವಧೀಲಿ ರೈತರ ಸಾಲ ಪೂರ್ಣ ಮನ್ನಾ ಮಾಡ್ತೀನಿ ಅನ್ನಬವುದಿತ್ತು. ಆಗ 5 ವರ್ಷ ಅವಕಾಶ ಸಿಗುತ್ತಿತ್ತು. ಈಗ ನೋಡಿ ಯಾರೋ ಕೆಲವೇ ಕೆಲವು ರೈತರ ಸಾಲ ಮನ್ನಾ ಕಾರಣಕ್ಕೆ ಇಡೀ ಕರ್ನಾಟಕದ ಜನ ತೆರಿಗೆ ತೆರಬೇಕಾಗ್ಯದೆ. ನಾನು ಅಧ್ಯಯನ ಮಾಡಿದ ಕೆಲವು ಜನ ರೈತರು, ಯಾಕೆ ಲಕ್ಷಲಕ್ಷ ಸಾಲ ಮಾಡ್ಯವುರೆ ಗೊತ್ತಾ”
“ಗೊತ್ತಿಲ್ಲ ಹೇಳಿ ಬ್ರದರ್”
“ವರದಕ್ಷಿಣೆ, ಕಲ್ಯಾಣ ಮಂಟಪ, ಬೀಗರೂಟ, ಇಂತ ಅಂದಾದುಂದಿ ಜನ ಲಕ್ಷಲಕ್ಷ ಸಾಲ ಮಾಡಿದ್ರು. ಆದ್ರೆ ನಿಜವಾದ ರೈತರು ಸಣ್ಣ ಸಾಲ ಮಾಡಿದ್ರು. ಅದು ಗೊತ್ತಿದ್ದ ಸಿದ್ದರಾಮಯ್ಯ ಐವತ್ತು ಸಾವುರದವರೆಗೂ ಮನ್ನಾ ಮಾಡಿದ್ರು ಅದು ಸರಿಯಾಗಿತ್ತು”
“ಬ್ರದರ್ ನಿಮ್ಮ ಮಾತಿನ ಭಾವುನೆಗಳಿಂದ ನೀವು ರೈತರ ವಿರೋಧಿಗಳು ಅಂಬತಕ್ಕಂತ ತೀರ್ಮಾನಕ್ಕೆ ಬರಬೇಕಾಯ್ತದೆ. ರೈತರು ಸಾಲ ಮಾಡಿ ಮದುವೆ ಮಾಡಿದಾರೆ ಅನ್ನತಕ್ಕಂತ ಮಾತನ್ನ ನಾನು ಒಪ್ಪಲ್ಲ”
“ಆಯ್ತು ಸಾರ್, ತೀರಸಕಾಗದೇಯಿದ್ರು ಲಕ್ಷಾಂತೃಪಾಯಿ ಸಾಲ ಯಾಕ್ ಮಾಡ್ತಾರೆ ಅನ್ನದನ್ನಾರೆ ಪತ್ತೆಹಚ್ಚಿ, ಒಂದುವೇಳೆ ಮದುವೆ ಕಾರಣಕ್ಕೆ ಸಾಲ ಮಾಡದಾದ್ರೆ, ಕುವೆಂಪುರವರ ಮಂತ್ರಮಾಂಗಲ್ಯ ಮದುವೆ ಜಾರಿಗೆ ತನ್ನಿ. ಇಲ್ಲ ಅಂದ್ರೆ ನೀವು ರಾಧಿಕನ್ನ ಮದುವೆ ಆದ್ರಲ್ಲ ಆತರ ಆಗದಕ್ಕೆ ಪ್ರೋತ್ಸಾಹ ಕೊಡಿ. ರೈತರು ಉಳಕತ್ತರೆ. ಇಲ್ಲ ಅಂದ್ರೆ ಅವರು ಸಾಲ ಮಾಡದು, ನೀವು ತೀರಸದು, ಅನ್ನದಾದ್ರೆ ಕರ್ನಾಟಕದ ಸಾಮಾನ್ಯ ಜನಗಳ ಪಾಡೇನು ಸಾರ್”
“ನೀವು ಹೇಳತಕ್ಕಂತ ವಿಷಯದಲ್ಲಿ ಯೋಚನೆ ಮಾಡ್ತಕ್ಕಂತ ಭಾವುನೆಗಳೇನಿವೆ, ಅವುಗಳನ್ನ ಚಿಂತನೆ ಮಾಡ್ತೀನಿ. ಆದ್ರೆ ರೈತರ ಸಾಲದ ವಿಷಯದಲ್ಲಿ ನಾನು ತಗಂಡ ತೀರ್ಮಾನ ಸರಿ ಬ್ರದರ್”
“ನೀವು ಅಧಿಕಾರಕ್ಕೆ ತಂದ್ರೆ ನಾನು ಸಾಲಮನ್ನಾ ಮಾಡ್ತೀನಿ ಅಂದಿದ್ರಿ, ಆದ್ರೆ ಜನ 38 ಸೀಟು ಕೊಟ್ರು. ಆದ್ರಿಂದ ಪ್ರತಿಯೊಬ್ಬ ರೈತನ 38 ಸಾವಿರ ಸಾಲ ಮಾತ್ರ ಮನ್ನಾ ಅನ್ನಬೇಕಾಗಿತ್ತು”
“ಇದು ಮೊದಲೆ ಹೊಳಿಲಿಲ್ಲವಲ್ಲ ಬ್ರದರ್”
“ಥೂತ್ತೇರಿ”,

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...