Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...