Homeಅಂಕಣಗಳುಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

ಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

- Advertisement -
- Advertisement -

| ಯಾಹೂ |

ಹಠಾತ್ತನೆ ಮನೆ ಕುಸಿಯತೊಡಗಿ ಜೆಡಿಎಸ್ ಕುಟೀರದ ಗೋಡೆ ಬಿರುಕು ಕಾಣಿಸಿಕೊಂಡ ಕೂಡಲೇ ಅನಾಹುತದ ನಿಖರತೆಯನ್ನು ಗುರುತಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಎಂದು ಘೋಷಿಸಿಬಿಟ್ಟಿದ್ದಾರಲ್ಲಾ. ಅರೆ ಸಮ್ಮಿಶ್ರ ಸಂಸಾರ ಬಿಗಡಾಯಿಸಿಕೊಂಡು ಅಲ್ಲಿಂದ ಹೊರಬಿದ್ದವರೊಂದಿಗೆ ಕೂಡಿಕೆ ಮಾಡಿಕೊಂಡು ಸಂಸಾರ ಹೂಡುವ ಬಗ್ಗೆ, ಎಡೂರಪ್ಪನನ್ನು ತಡೆದವರಾರು. ಎಡೂರಪ್ಪನ ಬಾಯಲ್ಲಿ ಇಂತಹ ಮಾತು ಸುಮ್ಮಸುಮ್ಮನೆ ಬರಲಾರದು. ಯಾರೊ ಚಡ್ಡಿಗಳ ಪೈಕಿ ಎಡೂರಪ್ಪನಿಗೆ ವಯಸ್ಸಾಯ್ತು ಎಂದಿರಬಹುದು ಅಥವಾ ಅವರ ಸರದಿ ಮುಗಿಯಿತಲ್ಲಾ ಎಂದಿರಬಹುದು. ಈ ಎಲ್ಲಾ ವಾಸನೆ ಗ್ರಹಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಸಂಸಾರಿ ಎಂದಿರುವುದು. ಅದಿರಲಿ, ಎಡೂರಪ್ಪ ಆಧುನಿಕ ಜಗತ್ತಿನ ಸನ್ಯಾಸಿಗಳನ್ನ ನೋಡಿಲ್ಲ ಅನ್ನಿಸುತ್ತದೆ. ಅವರೆಲ್ಲಾ ಗುಪ್ತ ಸಮಾಲೋಚನಾ ಪ್ರಿಯರಾಗಿ ಬಹಳ ವರ್ಷಗಳಾದವು. ಉಡುಪಿ ಮಠಗಳನ್ನೆ ಆದರ್ಶವಾಗಿ ಗ್ರಹಿಸಿ ಬದುಕನ್ನು ಇಡಿಯಾಗಿ ಮುಕ್ಕುವ ಕಲೆಯನ್ನು ಕರಗತ ಮಾಡಿಕೊಂಡು ಶತಮಾನವೇ ಸರಿಯಿತು. ತೀರ ಇತ್ತೀಚಿನ ತಾಜಾ ಉದಾಹರಣೆಯೆಂದರೆ ನಮ್ಮ ಸಿರಿಗೆರೆಯ ಶಿವಾಚಾರ್ಯ ಮಹಾಸ್ವಾಮಿಗಳವರು ಪೀಠದ ಸಂವಿಧಾನದ ರೀತಿ ಅರವತ್ತು ವರ್ಷಕ್ಕೆ ಪೀಠಬಿಟ್ಟು, ಹಿಂದೆ ಬಂದ ಮರಿಯನ್ನ ಸ್ಥಾಪಿಸಿ ಪಕ್ಕಕ್ಕೆ ನಿಲ್ಲಬೇಕಿತ್ತು. ಆದರೇನು ಭೂಪ ಇನ್ನ ಅಲ್ಲಾಡಿಲ್ಲ. ಇಂತಿರುವಾಗ ಎಡೂರಪ್ಪ ತಮ್ಮ ರಾಜಕಾರಣದ ಉದಾಹರಣೆಗೆ ನಾನು ಸನ್ಯಾಸಿಯಲ್ಲ ಎಂದಿದ್ದಾರಲ್ಲಾ, ಥೂತ್ತೇರಿ..

ಕರ್ನಾಟಕದ ಇವತ್ತಿನ ಸ್ಥಿತಿಯ ಬಗ್ಗೆ ಯಾರಿಗೆ ಫೋನು ಮಾಡಲಿ, ಕುಮಾರಣ್ಣ ಕನಲಿ ಕೆಂಡವಾಗಿದ್ದಾರೆ, ಸಿದ್ದು ಆತಂಕ ತೋರಿಕೆಯಂತೆ ಕಾಣುತ್ತಿದೆ. ಬಿಜೆಪಿಗಳು ಶುದ್ಧ ಕಿಡಿಗೇಡಿಗಳಂತೆ ಕಾಣುತ್ತಿದ್ದಾರೆ. ವಿಶ್ವನಾಥ್ ಈ ಶತಮಾನದ ಮೀರ್‍ಸಾದಿಕನಂತೆ ಗೋಚರಿಸಿದರೆ, ಕೆ.ಆರ್.ಪೇಟೆ ನಾರಾಯಣಗೌಡ ನಿಜಕ್ಕೂ ನೊಂದಂತೆ ಕಾಣುತ್ತಿದ್ದಾನೆ. ಇವೆಲ್ಲಾ ಸಂಗತಿಗಳನ್ನ ಚರ್ಚಿಸಲು ಸೂಕ್ತ ವ್ಯಕ್ತಿಗಾಗಿ ತಪಾಸಣೆ ಮಾಡುತ್ತಿದ್ದಾಗ ವಾಟಿಸ್ಸೆ ಹೆಸರು ಹೊಳೆಯಬೇಕೆ? ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು…

ರಿಂಗ್‍ಟೋನ್ “ಹೋಗದಿರೀ ಸೋದರರೇ.. ಹೋಗದಿರೀ ಬಂಧುಗಳೇ.. ಮನೆಯನು ತೊರೆದು ಹೋಗುವಿರಾ?” ಹಲೊ ಗುಡಾಪ್ಟರ್ ನೂನ್ ಸರ್”
“ವಾಟಿಸ್ಸೆ ಎಲ್ಲಿದ್ದೀ”
“ಎಲ್ಯಾರ ಇದ್ರೂ ನಿಮ್ಮೆದುರಿಗೆ ನಿಂತಂಗಲವ ಸಾ, ಅದ್ಕೆ ಹಂಡ್ರೆಂಡ್ ರುಪೀಸ್ ಕರೆನ್ಸಿ ಹಾಕ್ಸಿ”
“ಹಾಕುಸ್ತಿನಿ ಕರ್ನಾಟಕದ ರಾಜಕಾರಣ ಏನನ್ನಸ್ತಾ ಅದೆ”
“ಏನಾಗಬೇಕೊ ಅದಾಯ್ತ ಅದೆ ಸಾ”
“ಎಮ್ಮೆಲ್ಲೆಗಳ ರಾಜೀನಾಮೆ ಬಗ್ಗೆ ಏನೇಳ್ತಿ”
“ಅವೊಂತರಾ ಬ್ರಾಂಬ್ರು ಕೇರಿಯ ನಾಯಿದ್ದಂಗೆ ಸಾ”
“ಅಂದ್ರೆ”
“ಈ ಬ್ರಾಂಬ್ರು ಕೇರಿ ನಾಯಿಗಳು ಅಕಸ್ಮಾತ್ ಶೂದ್ರ ಕೇರಿಗೋಯ್ತವೆ. ಅಲ್ಲಿ ಚರಂಡೀಲಿ ಕುರಿ, ಆಡಿನ ಮೂಳೆ, ಕೋಳಿ ಮೂಳೆ ರುಚಿ ನೋಡಿದೂ ಅಂದ್ರೇ ತಿರಗಿ ಬ್ರಾಂಬ್ರು ಕೇರಿಗೋಗದಿಲ್ಲ”
“ಅಂಗಂತಿಯಾ”
“ಹೂ ಮತ್ತೆ. ಆ ಬಿಜೆಪಿಗಳು ಕೊಡೋ ದುಡ್ಡಿಗೆ, ಅಧಿಕಾರಕ್ಕೆ, ಮನಸು ಕೊಟ್ಟವೆ ಅನ್ನಸ್ತದೆ ಅದ್ಕೆ ಹೋದೊ ಬುಡಿ ಅತ್ತಗೆ”
“ಹೋಗಿಲ್ಲ ಇನ್ನ ಇಲ್ಲೆ ಇದ್ದಿವಿ ಅಂತಾರಲ್ಲಾ”
“ಇನ್ನ ಇಲ್ಲೇ ಇದ್ದಿವಿ ಅಂದ್ರೆ ಅವುರಿಗೇನಾಗ್ಯದೆ ಕೇಳಬೇಕು ಸಾ.”
“ಯಾರು ಕೇಳಬೇಕು.”
“ಇನ್ಯಾರು ಮುಖ್ಯಮಂತ್ರಿನೇ ಕೇಳಬೇಕು. ಇವುನು ಗ್ರಾಮ ವಾಸ್ತವ್ಯಕ್ಕೋದ್ರೆ ಹಿಂಗೆ ಆಗದು”
“ಈಗೇನಾಗಬವುದು”
“ಅಲ್ಲ ಸಾ, ಬೆಂಗಳೂರಲ್ಲಿರೊ ನೀವು ಹೇಳಬೇಕು.”
“ಜನಗಳಭಿಪ್ರಾಯ ಹೇಳು.”
“ಜನಗಳು ವಿಶ್ವನಾಥನ್ನ ಉಗೀತಾ ಅವುರೆ ಸಾ”
“ಯಾಕೆ?”
“ಯಾಕೆ ಅಂದ್ರೆ ಸಿದ್ದರಾಮಯ್ಯ ಇವುನೇಗ್ತಿ ನೋಡಿ ಕುರಿ ಕ್ವಟಗೆ ಒಳಿಕೆ ನೂಕಿದ್ದ. ದ್ಯಾವೇಗೌಡ ಹೋಗಿ ಕರದು ತಲೆ ಸವುರಿದ. ಆಗ ತನ್ನ ತಲೇನೆ ಸವುರಿಕೊಂಡಂಗಾಯ್ತು. ಕೂಡ್ಳೆ ಪಾರ್ಟಿ ಪ್ರೆಸಿಡೆಂಟ್ ಮಾಡಿ ಎಮ್ಮೆಲ್ಲೆ ಮಾಡಿದ್ರೆ, ಇವುನು ಕೈ ಕೊಡದ ಅಂತ ಅವುರೆ”
“ನಿನಗೇನನ್ಸುತ್ತೆ”
“ಮಂತ್ರಿ ಮಾಡಿದ್ರೆ ಖಾತೆ ಚನ್ನಾಗಿ ನಿಭಾಯಿಸೋನು, ಅಂಗೆ ನೋಡಿದ್ರೆ ಸಾ.ರಾ. ಮಯೇಶ, ಪುಟ್ಟರಾಜ, ತಮ್ಮಣ್ಣ ಇಂತ ಸ್ಕ್ರಾಪ್ ಮಾಲಿಗಿಂತ ವಿಶ್ವನಾಥ್ ಯೋಗ್ಯ, ಈಗ ಮಾತ್ರ ಅಯೋಗ್ಯ”
“ಕೆ.ಆರ್.ಪೇಟೆ ನಾರಾಯಣಗೌಡನ ಬಗ್ಗೆ ಏನೇಳ್ತಿ’.’
“ಅವುನು ಬಾಂಬೆಯಿಂದ ತಪ್ಪಿಸಿಕೊಂಡು ಬಂದ ಮಾರವಾಡಿ ಹುಡುಗನಂಗೆ ಕಾಣ್ತನೆ ಸಾರ್. ಜೆಡಿಎಸ್‍ಗೆ ಬೇಕಾದಷ್ಟು ಮಾಡ್ಯವುನೆ, ಚುಂಚನಗಿರಿ ಮಠಕ್ಕೆ ಬೊಂಬಾಯಿಲೆ ಜಾಗ ಕೊಡಿಸ್ಯಾವುನೆ, ಅಂಥೊನ್ನ ದ್ಯಾವೇಗೌಡನ ಮನೆವ್ರು ಚಪ್ರಾಸಿಯಂಗೆ ನ್ಯಡಿಸಿಕೊಬಾರದಿತ್ತು.”
“ಒಟ್ಟಾರೆ ಈ ರಾಜೀನಾಮೆ ಪ್ರಕರಣ ಏನನ್ನಸುತ್ತೆ”
“ನನಿಗೇನನ್ನಸ್ತದೆ ಅಂದ್ರೆ, ಒಂದು ಅವಿಭಕ್ತ ಕುಟುಂಬದಲ್ಲಿ ಅತೃಪ್ತ ಜನ ಏನೇನೊ ನಾಟಗ ಮಾಡ್ತರೆ. ಹೊಟ್ಟೆನೊವ್ವು ಅಂತರೆ, ಬೇಧಿ ಅಂತರೆ, ಹಲ್ಲುನೋವು ಅಂತರೆ, ಸುಮ್ಮನೆ ಮೂಲೇಲಿ ಮನಿಕತ್ತರೆ, ಅದು ಅವುರ ಪ್ರತಿಭಟನೆ ಸಾ. ಈಗ್ಲು ನ್ಯಡದಿರದು ಈ ಕುಮಾರಸ್ವಾಮಿ ಬ್ಯಾಡ ಅನ್ನೊ ಪ್ರತಿಭಟನೆ ಅಷ್ಟೆ ಸಾ”
“ಅಂಗಾರೆ ಕುಮಾರಣ್ಣ ಬ್ಯಾಡವಾ”
“ಇವುನು ಹೋಯ್ತನೆ ಅಂದ್ರೆ ಯಾರಿಗೂ ಫೀಲಾಗಲ್ಲ ಸಾರ್, ಯಾಕಂದ್ರೆ ಇವುರಿಂದ್ಲೆ ಹಾರವರು ಲಕ್ಕಪತಿಗಳಾದ್ರು, ಅದೇನು ಯಜ್ಞ – ಅದೇನು ಯಾಗ, ಅದೇನು ಹೋಮ, ಅದಿರ್ಲಿ ಯಾರಾರ ತಲೆಯಿದ್ದೋರು, ನಾಮಪತ್ರ ತಗಂಡೋಗಿ ಶೃಂಗೇರೀಲಿ ಪೂಜೆ ಮಾಡಿಸಿಗಂಡು ಬತ್ತರ ಸಾ”
“ಇಲ್ಲ ಬುಡು ಇತಿಹಾಸದಲ್ಲಿ ಯಾರು ಅಂಗೆ ಮಾಡಿಲ್ಲ”
“ದ್ಯಾವೇಗೌಡ್ರು ಫ್ಯಾಮಿಲಿ ಪವರಿಂದ ಇಳದ್ರೆ ಬ್ರಾಂಬ್ರಿಗೆ ಲಾಸಾಗಬಹುದು. ನನಿಗಂತು ಯಾವ ನಷ್ಟನೂ ಇಲ್ಲ ಸಾ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...