Homeಅಂಕಣಗಳುಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

ಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

- Advertisement -
- Advertisement -

| ಯಾಹೂ |

ಹಠಾತ್ತನೆ ಮನೆ ಕುಸಿಯತೊಡಗಿ ಜೆಡಿಎಸ್ ಕುಟೀರದ ಗೋಡೆ ಬಿರುಕು ಕಾಣಿಸಿಕೊಂಡ ಕೂಡಲೇ ಅನಾಹುತದ ನಿಖರತೆಯನ್ನು ಗುರುತಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಎಂದು ಘೋಷಿಸಿಬಿಟ್ಟಿದ್ದಾರಲ್ಲಾ. ಅರೆ ಸಮ್ಮಿಶ್ರ ಸಂಸಾರ ಬಿಗಡಾಯಿಸಿಕೊಂಡು ಅಲ್ಲಿಂದ ಹೊರಬಿದ್ದವರೊಂದಿಗೆ ಕೂಡಿಕೆ ಮಾಡಿಕೊಂಡು ಸಂಸಾರ ಹೂಡುವ ಬಗ್ಗೆ, ಎಡೂರಪ್ಪನನ್ನು ತಡೆದವರಾರು. ಎಡೂರಪ್ಪನ ಬಾಯಲ್ಲಿ ಇಂತಹ ಮಾತು ಸುಮ್ಮಸುಮ್ಮನೆ ಬರಲಾರದು. ಯಾರೊ ಚಡ್ಡಿಗಳ ಪೈಕಿ ಎಡೂರಪ್ಪನಿಗೆ ವಯಸ್ಸಾಯ್ತು ಎಂದಿರಬಹುದು ಅಥವಾ ಅವರ ಸರದಿ ಮುಗಿಯಿತಲ್ಲಾ ಎಂದಿರಬಹುದು. ಈ ಎಲ್ಲಾ ವಾಸನೆ ಗ್ರಹಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಸಂಸಾರಿ ಎಂದಿರುವುದು. ಅದಿರಲಿ, ಎಡೂರಪ್ಪ ಆಧುನಿಕ ಜಗತ್ತಿನ ಸನ್ಯಾಸಿಗಳನ್ನ ನೋಡಿಲ್ಲ ಅನ್ನಿಸುತ್ತದೆ. ಅವರೆಲ್ಲಾ ಗುಪ್ತ ಸಮಾಲೋಚನಾ ಪ್ರಿಯರಾಗಿ ಬಹಳ ವರ್ಷಗಳಾದವು. ಉಡುಪಿ ಮಠಗಳನ್ನೆ ಆದರ್ಶವಾಗಿ ಗ್ರಹಿಸಿ ಬದುಕನ್ನು ಇಡಿಯಾಗಿ ಮುಕ್ಕುವ ಕಲೆಯನ್ನು ಕರಗತ ಮಾಡಿಕೊಂಡು ಶತಮಾನವೇ ಸರಿಯಿತು. ತೀರ ಇತ್ತೀಚಿನ ತಾಜಾ ಉದಾಹರಣೆಯೆಂದರೆ ನಮ್ಮ ಸಿರಿಗೆರೆಯ ಶಿವಾಚಾರ್ಯ ಮಹಾಸ್ವಾಮಿಗಳವರು ಪೀಠದ ಸಂವಿಧಾನದ ರೀತಿ ಅರವತ್ತು ವರ್ಷಕ್ಕೆ ಪೀಠಬಿಟ್ಟು, ಹಿಂದೆ ಬಂದ ಮರಿಯನ್ನ ಸ್ಥಾಪಿಸಿ ಪಕ್ಕಕ್ಕೆ ನಿಲ್ಲಬೇಕಿತ್ತು. ಆದರೇನು ಭೂಪ ಇನ್ನ ಅಲ್ಲಾಡಿಲ್ಲ. ಇಂತಿರುವಾಗ ಎಡೂರಪ್ಪ ತಮ್ಮ ರಾಜಕಾರಣದ ಉದಾಹರಣೆಗೆ ನಾನು ಸನ್ಯಾಸಿಯಲ್ಲ ಎಂದಿದ್ದಾರಲ್ಲಾ, ಥೂತ್ತೇರಿ..

ಕರ್ನಾಟಕದ ಇವತ್ತಿನ ಸ್ಥಿತಿಯ ಬಗ್ಗೆ ಯಾರಿಗೆ ಫೋನು ಮಾಡಲಿ, ಕುಮಾರಣ್ಣ ಕನಲಿ ಕೆಂಡವಾಗಿದ್ದಾರೆ, ಸಿದ್ದು ಆತಂಕ ತೋರಿಕೆಯಂತೆ ಕಾಣುತ್ತಿದೆ. ಬಿಜೆಪಿಗಳು ಶುದ್ಧ ಕಿಡಿಗೇಡಿಗಳಂತೆ ಕಾಣುತ್ತಿದ್ದಾರೆ. ವಿಶ್ವನಾಥ್ ಈ ಶತಮಾನದ ಮೀರ್‍ಸಾದಿಕನಂತೆ ಗೋಚರಿಸಿದರೆ, ಕೆ.ಆರ್.ಪೇಟೆ ನಾರಾಯಣಗೌಡ ನಿಜಕ್ಕೂ ನೊಂದಂತೆ ಕಾಣುತ್ತಿದ್ದಾನೆ. ಇವೆಲ್ಲಾ ಸಂಗತಿಗಳನ್ನ ಚರ್ಚಿಸಲು ಸೂಕ್ತ ವ್ಯಕ್ತಿಗಾಗಿ ತಪಾಸಣೆ ಮಾಡುತ್ತಿದ್ದಾಗ ವಾಟಿಸ್ಸೆ ಹೆಸರು ಹೊಳೆಯಬೇಕೆ? ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು…

ರಿಂಗ್‍ಟೋನ್ “ಹೋಗದಿರೀ ಸೋದರರೇ.. ಹೋಗದಿರೀ ಬಂಧುಗಳೇ.. ಮನೆಯನು ತೊರೆದು ಹೋಗುವಿರಾ?” ಹಲೊ ಗುಡಾಪ್ಟರ್ ನೂನ್ ಸರ್”
“ವಾಟಿಸ್ಸೆ ಎಲ್ಲಿದ್ದೀ”
“ಎಲ್ಯಾರ ಇದ್ರೂ ನಿಮ್ಮೆದುರಿಗೆ ನಿಂತಂಗಲವ ಸಾ, ಅದ್ಕೆ ಹಂಡ್ರೆಂಡ್ ರುಪೀಸ್ ಕರೆನ್ಸಿ ಹಾಕ್ಸಿ”
“ಹಾಕುಸ್ತಿನಿ ಕರ್ನಾಟಕದ ರಾಜಕಾರಣ ಏನನ್ನಸ್ತಾ ಅದೆ”
“ಏನಾಗಬೇಕೊ ಅದಾಯ್ತ ಅದೆ ಸಾ”
“ಎಮ್ಮೆಲ್ಲೆಗಳ ರಾಜೀನಾಮೆ ಬಗ್ಗೆ ಏನೇಳ್ತಿ”
“ಅವೊಂತರಾ ಬ್ರಾಂಬ್ರು ಕೇರಿಯ ನಾಯಿದ್ದಂಗೆ ಸಾ”
“ಅಂದ್ರೆ”
“ಈ ಬ್ರಾಂಬ್ರು ಕೇರಿ ನಾಯಿಗಳು ಅಕಸ್ಮಾತ್ ಶೂದ್ರ ಕೇರಿಗೋಯ್ತವೆ. ಅಲ್ಲಿ ಚರಂಡೀಲಿ ಕುರಿ, ಆಡಿನ ಮೂಳೆ, ಕೋಳಿ ಮೂಳೆ ರುಚಿ ನೋಡಿದೂ ಅಂದ್ರೇ ತಿರಗಿ ಬ್ರಾಂಬ್ರು ಕೇರಿಗೋಗದಿಲ್ಲ”
“ಅಂಗಂತಿಯಾ”
“ಹೂ ಮತ್ತೆ. ಆ ಬಿಜೆಪಿಗಳು ಕೊಡೋ ದುಡ್ಡಿಗೆ, ಅಧಿಕಾರಕ್ಕೆ, ಮನಸು ಕೊಟ್ಟವೆ ಅನ್ನಸ್ತದೆ ಅದ್ಕೆ ಹೋದೊ ಬುಡಿ ಅತ್ತಗೆ”
“ಹೋಗಿಲ್ಲ ಇನ್ನ ಇಲ್ಲೆ ಇದ್ದಿವಿ ಅಂತಾರಲ್ಲಾ”
“ಇನ್ನ ಇಲ್ಲೇ ಇದ್ದಿವಿ ಅಂದ್ರೆ ಅವುರಿಗೇನಾಗ್ಯದೆ ಕೇಳಬೇಕು ಸಾ.”
“ಯಾರು ಕೇಳಬೇಕು.”
“ಇನ್ಯಾರು ಮುಖ್ಯಮಂತ್ರಿನೇ ಕೇಳಬೇಕು. ಇವುನು ಗ್ರಾಮ ವಾಸ್ತವ್ಯಕ್ಕೋದ್ರೆ ಹಿಂಗೆ ಆಗದು”
“ಈಗೇನಾಗಬವುದು”
“ಅಲ್ಲ ಸಾ, ಬೆಂಗಳೂರಲ್ಲಿರೊ ನೀವು ಹೇಳಬೇಕು.”
“ಜನಗಳಭಿಪ್ರಾಯ ಹೇಳು.”
“ಜನಗಳು ವಿಶ್ವನಾಥನ್ನ ಉಗೀತಾ ಅವುರೆ ಸಾ”
“ಯಾಕೆ?”
“ಯಾಕೆ ಅಂದ್ರೆ ಸಿದ್ದರಾಮಯ್ಯ ಇವುನೇಗ್ತಿ ನೋಡಿ ಕುರಿ ಕ್ವಟಗೆ ಒಳಿಕೆ ನೂಕಿದ್ದ. ದ್ಯಾವೇಗೌಡ ಹೋಗಿ ಕರದು ತಲೆ ಸವುರಿದ. ಆಗ ತನ್ನ ತಲೇನೆ ಸವುರಿಕೊಂಡಂಗಾಯ್ತು. ಕೂಡ್ಳೆ ಪಾರ್ಟಿ ಪ್ರೆಸಿಡೆಂಟ್ ಮಾಡಿ ಎಮ್ಮೆಲ್ಲೆ ಮಾಡಿದ್ರೆ, ಇವುನು ಕೈ ಕೊಡದ ಅಂತ ಅವುರೆ”
“ನಿನಗೇನನ್ಸುತ್ತೆ”
“ಮಂತ್ರಿ ಮಾಡಿದ್ರೆ ಖಾತೆ ಚನ್ನಾಗಿ ನಿಭಾಯಿಸೋನು, ಅಂಗೆ ನೋಡಿದ್ರೆ ಸಾ.ರಾ. ಮಯೇಶ, ಪುಟ್ಟರಾಜ, ತಮ್ಮಣ್ಣ ಇಂತ ಸ್ಕ್ರಾಪ್ ಮಾಲಿಗಿಂತ ವಿಶ್ವನಾಥ್ ಯೋಗ್ಯ, ಈಗ ಮಾತ್ರ ಅಯೋಗ್ಯ”
“ಕೆ.ಆರ್.ಪೇಟೆ ನಾರಾಯಣಗೌಡನ ಬಗ್ಗೆ ಏನೇಳ್ತಿ’.’
“ಅವುನು ಬಾಂಬೆಯಿಂದ ತಪ್ಪಿಸಿಕೊಂಡು ಬಂದ ಮಾರವಾಡಿ ಹುಡುಗನಂಗೆ ಕಾಣ್ತನೆ ಸಾರ್. ಜೆಡಿಎಸ್‍ಗೆ ಬೇಕಾದಷ್ಟು ಮಾಡ್ಯವುನೆ, ಚುಂಚನಗಿರಿ ಮಠಕ್ಕೆ ಬೊಂಬಾಯಿಲೆ ಜಾಗ ಕೊಡಿಸ್ಯಾವುನೆ, ಅಂಥೊನ್ನ ದ್ಯಾವೇಗೌಡನ ಮನೆವ್ರು ಚಪ್ರಾಸಿಯಂಗೆ ನ್ಯಡಿಸಿಕೊಬಾರದಿತ್ತು.”
“ಒಟ್ಟಾರೆ ಈ ರಾಜೀನಾಮೆ ಪ್ರಕರಣ ಏನನ್ನಸುತ್ತೆ”
“ನನಿಗೇನನ್ನಸ್ತದೆ ಅಂದ್ರೆ, ಒಂದು ಅವಿಭಕ್ತ ಕುಟುಂಬದಲ್ಲಿ ಅತೃಪ್ತ ಜನ ಏನೇನೊ ನಾಟಗ ಮಾಡ್ತರೆ. ಹೊಟ್ಟೆನೊವ್ವು ಅಂತರೆ, ಬೇಧಿ ಅಂತರೆ, ಹಲ್ಲುನೋವು ಅಂತರೆ, ಸುಮ್ಮನೆ ಮೂಲೇಲಿ ಮನಿಕತ್ತರೆ, ಅದು ಅವುರ ಪ್ರತಿಭಟನೆ ಸಾ. ಈಗ್ಲು ನ್ಯಡದಿರದು ಈ ಕುಮಾರಸ್ವಾಮಿ ಬ್ಯಾಡ ಅನ್ನೊ ಪ್ರತಿಭಟನೆ ಅಷ್ಟೆ ಸಾ”
“ಅಂಗಾರೆ ಕುಮಾರಣ್ಣ ಬ್ಯಾಡವಾ”
“ಇವುನು ಹೋಯ್ತನೆ ಅಂದ್ರೆ ಯಾರಿಗೂ ಫೀಲಾಗಲ್ಲ ಸಾರ್, ಯಾಕಂದ್ರೆ ಇವುರಿಂದ್ಲೆ ಹಾರವರು ಲಕ್ಕಪತಿಗಳಾದ್ರು, ಅದೇನು ಯಜ್ಞ – ಅದೇನು ಯಾಗ, ಅದೇನು ಹೋಮ, ಅದಿರ್ಲಿ ಯಾರಾರ ತಲೆಯಿದ್ದೋರು, ನಾಮಪತ್ರ ತಗಂಡೋಗಿ ಶೃಂಗೇರೀಲಿ ಪೂಜೆ ಮಾಡಿಸಿಗಂಡು ಬತ್ತರ ಸಾ”
“ಇಲ್ಲ ಬುಡು ಇತಿಹಾಸದಲ್ಲಿ ಯಾರು ಅಂಗೆ ಮಾಡಿಲ್ಲ”
“ದ್ಯಾವೇಗೌಡ್ರು ಫ್ಯಾಮಿಲಿ ಪವರಿಂದ ಇಳದ್ರೆ ಬ್ರಾಂಬ್ರಿಗೆ ಲಾಸಾಗಬಹುದು. ನನಿಗಂತು ಯಾವ ನಷ್ಟನೂ ಇಲ್ಲ ಸಾ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...